Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಂಗೀತ ಮನಸ್ಸಿಗೆ ನೆಮ್ಮದಿ...

Kalaburagi | ಸಂಗೀತ ಮನಸ್ಸಿಗೆ ನೆಮ್ಮದಿ ನೀಡುವ ಶಕ್ತಿ : ಡಾ. ಸದಾನಂದ ಪೆರ್ಲ

ವಾರ್ತಾಭಾರತಿವಾರ್ತಾಭಾರತಿ15 Jun 2026 11:07 PM IST
share
Kalaburagi | ಸಂಗೀತ ಮನಸ್ಸಿಗೆ ನೆಮ್ಮದಿ ನೀಡುವ ಶಕ್ತಿ : ಡಾ. ಸದಾನಂದ ಪೆರ್ಲ
ಎಂಟು ಸಂಗೀತ ಸಾಧಕರಿಗೆ ಸಿದ್ದರಾಮ ಜಂಬಲದಿನ್ನಿ ಪುರಸ್ಕಾರ ಪ್ರದಾನ

ಕಲಬುರಗಿ: ಸಂಗೀತ ಇರುವೆಡೆ ನೆಮ್ಮದಿ ಇರುತ್ತದೆ. ಸಾಹಿತ್ಯ ಮತ್ತು ಸಂಗೀತವು ಸಮಾಜಕ್ಕೆ ಅಮೂಲ್ಯ ಕೊಡುಗೆಗಳಾಗಿದ್ದು, ಅವು ಮಾನವನ ಬದುಕನ್ನು ಸಮೃದ್ಧಗೊಳಿಸುತ್ತವೆ ಮತ್ತು ಶಾಂತಿ - ನೆಮ್ಮದಿಯನ್ನು ನೀಡುತ್ತದೆ ಎಂದು ಅಕ್ಕಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ.ಸದಾನಂದ ಪೆರ್ಲ ಹೇಳಿದರು.

ನಗರದ ಕಲಾಮಂಡಳದಲ್ಲಿ ಜೂ. 15ರಂದು ಸೋಮವಾರ ಪ್ರತಿಭಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾಸಂಸ್ಥೆ, ನಂದೂರ (ಕೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಸಂಗೀತ ಸೌರಭ’ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.

ಸಂಗೀತಗಾರರು ಕೀಳರಿಮೆಯಿಂದ ಹೊರಬಂದು, ಪ್ರಶಸ್ತಿ ಹಾಗೂ ಗೌರವಗಳ ಹಿಂದೆ ಬೀಳದೆ ಸಂಗೀತವನ್ನು ತಪಸ್ಸಿನಂತೆ ಸ್ವೀಕರಿಸಿ ಗುರುಗಳ ಮಾರ್ಗದರ್ಶನದಲ್ಲಿ ಸಂಗೀತ ಕಲಿಯಬೇಕು. ಮೊಬೈಲ್‌ನಂತಹ ಆಧುನಿಕ ಸಾಧನಗಳ ಅವಲಂಬನೆ ಕಡಿಮೆ ಮಾಡಿ ಸಂಗೀತದ ಸಾಧನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.

ಸಂಗೀತಕ್ಕೆ ಜಾತಿ, ಮತ, ಪಂಥ ಹಾಗೂ ಧರ್ಮಗಳ ಬೇಧವಿಲ್ಲ. ವಚನಗಳಿಗೆ ಸಂಗೀತ ಸಂಯೋಜನೆ ಮಾಡುವ ಮೂಲಕ ಸಂಗೀತ ಕ್ಷೇತ್ರಕ್ಕೆ ಸಿದ್ದರಾಮ ಜಂಬಲದಿನ್ನಿ ಅವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಪೂಜ್ಯ ಪ್ರಭುಶ್ರೀ ತಾಯಿ ಸಾನಿಧ್ಯ ವಹಿಸಿ ಮಾತನಾಡಿ, ಗರ್ಭಿಣಿಯರು ಸಂಗೀತ ಆಲಿಸಿದರೆ ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೀರಯ್ಯ ಸ್ವಾಮಿ ಬೀದಿಮನಿ, ಸಿದ್ದಾರಾಮ ಪಾಟೀಲ, ಶಿವರುದ್ರ ಕರಿಕಲ್ಲ್, ಸಂಜೀವ ಕುಮಾರ ಹುಲಸೂರ, ಸಿದ್ದರಾಮರೆಡ್ಡಿ, ಡಾ.ಆನಂದ ಪಾಟೀಲ ಸಿದ್ದಾಮಣಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಸಂಸ್ಥೆ ಕಾರ್ಯದರ್ಶಿ ನಾಗೇಂದ್ರ ಕಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಣ್ಣಾರಾಯ ಶೆಳ್ಳಗಿ, ಮತ್ತಿಮಡು,ಅನೀಲ ಮಠಪತಿ, ಬಸವರಾಜ ಸ್ಥಾವರಮಠ,ಆನಂದ ನಂದಿಕೋಳಮಠ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಮೌನೇಶ್ ಪಂಚಾಳ್ ತಬಲಾ ಸಾತ್ ನೀಡಿದರು.

ಡಾ. ವೀರಶೆಟ್ಟಿ ಗಾರಂಪಳ್ಳಿ, ಡಾ.ಬಸವರಾಜ ಭಾಗಾ, ಸಿ.ಎಸ್.ಮಾಲಿ ಪಾಟೀಲ, ಉಪಸ್ಥಿತರಿದ್ದರು, ಶರಣಗೌಡ ಪಾಟೀಲ ಪಾಳಾ ನಿರೂಪಿಸಿದರು, ಸತೀಶ ಪಾಟೀಲ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X