Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಇಂಡಿಯಾ ಬೈತ್ ಅಲ್ ಮಾಲ್...

ಕಲಬುರಗಿ | ಇಂಡಿಯಾ ಬೈತ್ ಅಲ್ ಮಾಲ್ ವತಿಯಿಂದ ಮುಸ್ಲಿಂ ವಧು-ವರರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ27 Oct 2025 6:44 PM IST
share
ಕಲಬುರಗಿ | ಇಂಡಿಯಾ ಬೈತ್ ಅಲ್ ಮಾಲ್ ವತಿಯಿಂದ ಮುಸ್ಲಿಂ ವಧು-ವರರ ಸಮಾವೇಶ

ಕಲಬುರಗಿ : ಇಂಡಿಯಾ ಬೈತ್ ಅಲ್ ಮಾಲ್ ಟ್ರಸ್ಟ್ ಉಪಾಧ್ಯಕ್ಷರಾದ ಇಕ್ಬಾಲ್ ಅಲಿ ಅವರ ನೇತೃತ್ವದಲ್ಲಿ ಮುಸ್ಲಿಂ ವಧು-ವರರ ಸಮ್ಮಿಲನ ಸಮಾವೇಶ ನಗರದ ಹಾಗರಗಾ ಪ್ರದೇಶದಲ್ಲಿರುವ ಸಬಾ ಫಂಕ್ಷನ್ ನಲ್ಲಿ ಯಶಸ್ವಿಯಾಗಿ ಜರುಗಿತು.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಗುಲ್ಬರ್ಗಾ ಮಾತ್ರವಲ್ಲದೆ ಬೆಂಗಳೂರು, ಹುಬ್ಬಳ್ಳಿ, ಬೀಜಾಪುರ, ಯಾದಗಿರಿ, ಬೀದರ್, ವಾಡಿ, ಶಹಾಬಾದ್ ಹಾಗೂ ಶಾಹಪುರ ಮುಂತಾದ ಪ್ರದೇಶಗಳಿಂದ ಮುಸ್ಲಿಂ ವಧು-ವರರ ಪಾಲಕರು ಮತ್ತು ಪೋಷಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ವೈದ್ಯರು, ಇಂಜಿನಿಯರುಗಳು, ಶಿಕ್ಷಕರು, ವ್ಯಾಪಾರಿಗಳು, ಸರ್ಕಾರಿ ನೌಕರರು ಮತ್ತು ಇತರ ವಿವಿಧ ವೃತ್ತಿಗಳಲ್ಲಿರುವ ಹುಡುಗ-ಹುಡುಗಿಯರ ಮದುವೆ ಸಂಬಂಧಗಳ ಜೊತೆಗೆ ವಿಚ್ಛೇದನ ಪಡೆದ ಅಥವಾ ಖುಲಾ ಪಡೆದವರ ಮದುವೆ ಸಂಬಂಧಗಳ ಕುರಿತಾದ ಚರ್ಚೆಯೂ ನಡೆಯಿತು. ಈ ವೇಳೆ ಹಲವು ಸಂಬಂಧಗಳು ಸ್ಥಳದಲ್ಲೇ ನಿಗದಿಗೊಂಡವು.

ಸಮಾವೇಶದಲ್ಲಿ ಒಟ್ಟು 560 ಹೊಸ ನೋಂದಣಿಗಳು ಮಾಡಲ್ಪಟ್ಟಿದ್ದು, 110 ಪಾಲಕರು ಸ್ಥಳದಲ್ಲಿಯೇ ಪರಸ್ಪರ ಮಾತುಕತೆಯ ಮೂಲಕ ಸಂಬಂಧಗಳನ್ನು ನಿಗದಿಪಡಿಸಿದರು. ಸುಮಾರು 3,000ಕ್ಕೂ ಹೆಚ್ಚು ಹುಡುಗ-ಹುಡುಗಿಯರ ಪಾಲಕರು ಮತ್ತು ಸಂರಕ್ಷಕರು ಈ “ದುಬಾ ದು”ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಫರಾಝ್ ಅಲ್ ಇಸ್ಲಾಂ, ಇಂಡಿಯಾ ಬೈತ್ ಅಲ್ ಮಾಲ್ ಟ್ರಸ್ಟ್ ಅಧ್ಯಕ್ಷರಾದ ಮುಹಮ್ಮದ್ ಅಝಮ್ ಅಲಿ, ಉಪಾಧ್ಯಕ್ಷ ಇಕ್ಬಾಲ್ ಅಲಿ, ಹಮೀದ್ ಪ್ಯಾರೆ, ಬಿ.ಎಡ್. ಕಾಲೇಜಿನ ಪ್ರಿನ್ಸಿಪಲ್ ರಾಬಿಯಾ ಬೇಗಂ, ಟ್ರಸ್ಟಿ ಅಜೀಜ್ ಶಾಹಾನಾ, ವಕೀಲ ಜಬ್ಬಾರ್ ಗೊಲ್ಲಾ, ಹೈದರ್ ಅಲಿ ಬಾಗ್ಬಾನ್, ಅಬ್ದುಲ್ ಘನಿ (ಟಿಪ್ಪು ಸುಲ್ತಾನ್ ಮೆಡಿಕಲ್ ಕಾಲೇಜು), ಹಿರಿಯ ಪತ್ರಕರ್ತ ಹಕೀಮ್ ಶಾಕಿರ್, ಸಬಾ ಫಂಕ್ಷನ್ ಹಾಲ್ ನ ಮಾಲಕ ಅನ್ವರ್ ಸಾಹೇಬ್‌, ಸಾಮಾಜಿಕ ಕಾರ್ಯಕರ್ತ ಆಬಿದ್, ಬೀದರ್ ಶಾಹೀನ್ ಕಾಲೇಜು ಪ್ರತಿನಿಧಿ ಹಾಗೂ ಶಾಹಪುರದ ಉಮರ್ ಮರ್ಚೆಂಟ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X