Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಮೀಕ್ಷೆಗೆ ನೆಟ್‌ವರ್ಕ್...

ಕಲಬುರಗಿ | ಸಮೀಕ್ಷೆಗೆ ನೆಟ್‌ವರ್ಕ್ ಸಮಸ್ಯೆ : ಕಾಂಪೌಂಡ್ ಹತ್ತಿದ ಶಿಕ್ಷಕ !

ವಾರ್ತಾಭಾರತಿವಾರ್ತಾಭಾರತಿ26 Sept 2025 9:33 PM IST
share
ಕಲಬುರಗಿ | ಸಮೀಕ್ಷೆಗೆ ನೆಟ್‌ವರ್ಕ್ ಸಮಸ್ಯೆ : ಕಾಂಪೌಂಡ್ ಹತ್ತಿದ ಶಿಕ್ಷಕ !

ಕಲಬುರಗಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ನಾಲ್ಕನೆಯ ದಿನವಾದ ಶುಕ್ರವಾರದಂದೂ ಸರ್ವರ್ ಸಂಕಷ್ಟ ಎದುರಾಗಿದೆ. ಸರ್ವರ್ ಮತ್ತು ನೆಟ್ ವರ್ಕ್ ಪಡೆಯಲಿಕ್ಕಾಗಿ ಸರ್ವೇ ನಡೆಸುವ ಶಿಕ್ಷಕರೊಬ್ಬರು ಕೆಇಬಿ ಘಟಕದ ಕಾಂಪೌಂಡ್ ಹತ್ತಿ ಸರ್ವರ್ ಪಡೆಯಲು ಹರಸಾಹಸ ಪಟ್ಟಿದ್ದಾರೆ.

ಕಲಬುರಗಿ ನಗರದ ಜಾಫರಾಬಾದ್ ಪ್ರದೇಶದ ಕೆಇಬಿ ಘಟಕದ ಸಮೀಪ ಸಮೀಕ್ಷೆಗಾಗಿ ಮನೆಗಳಿಗೆ ಹೋದಾಗ ಹಲವು ಶಿಕ್ಷಕರು ಸರ್ವರ್ ಸಮಸ್ಯೆಯಿಂದ ಬೇಸತ್ತಿದ್ದಾರೆ, ಈ ಪ್ರದೇಶದಲ್ಲಿ ನಿಗದಿತ ಸಮಯಕ್ಕೆ ನೆಟ್ ವರ್ಕ್ ಇಲ್ಲದೆ ಇರುವುದರಿಂದ ಶಿಕ್ಷಕರೊಬ್ಬರು ಕಾಂಪೌಂಡ್ ಏರಿಕೊಂಡು ಪರದಾಡಿರುವ ಪ್ರಸಂಗ ನಡೆದಿದೆ.

ಕಲಬುರಗಿ ದಕ್ಷಿಣ ವಲಯದಲ್ಲಿ ಬರುವ ಬಬಲಾದ (ಎಸ್) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಾನಿಂಗಪ್ಪ ಮೂಲೆಗೆ ಎಂಬಾತರು ಸಮೀಕ್ಷೆಯ ಸರ್ವರ್ ಹಾಗೂ ನೆಟ್ ಸರಿಯಾಗಿ ಬರದೇ ಕಾರಣದಿಂದ ಕಾಂಪೌಂಡ್ ಕಟ್ಟಡ ಹತ್ತಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಸಮೀಕ್ಷೆ ಮಾಡುತ್ತಿದ್ದೇವೆ, ಸರ್ವರ್ ಹಾಗೂ ಅಂತರ್ಜಾಲವು ಯಾವುದೇ ತರಹದ ಸಹಕಾರ ಮಾಡುತ್ತಿಲ್ಲ. ಧಾರಾಕಾರ ಮಳೆಯಲ್ಲೂ ನಾವು ಸರ್ವೇ ಮಾಡಲು ಬಂದಿದ್ದೇವೆ. ಸರ್ವರ್ ಸಮಸ್ಯೆಯಿಂದ ಮೂರು ದಿನಗಳಿಂದ ಯಾವ ಮನೆಗಳಲ್ಲೂ ಸಂಪೂರ್ಣ ಸಮೀಕ್ಷೆ ಮಾಡಲಾಗಿಲ್ಲ. ಶುಕ್ರವಾರ ಬೆಳಗ್ಗೆಯಿಂದ ಎಷ್ಟೇ ಪ್ರಯತ್ನ ಪಟ್ಟರೂ 2 ಮನೆಗಳ ಸಮೀಕ್ಷೆ ಮುಗಿದಿದೆ. ಆದರೆ ನಮಗೆ ಒಟ್ಟಾರೆ 121 ಮನೆಗಳ ಟಾರ್ಗೆಟ್ ಕೊಟ್ಟಿದ್ದಾರೆ. ಅವು ಯಾವಾಗ ಮುಗಿಯುತ್ತವೆ ನಮಗೆ ಗೊತ್ತಿಲ್ಲ ಎಂದು ಶಿಕ್ಷಕ ಮಹಾನಿಂಗಪ್ಪ ಮೂಲೆಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಸಕ್ಕರೆ ಕಾಯಿಲೆ ಇದೆ, ಹಾಗಾಗಿ ಸಮೀಕ್ಷೆ ಮಾಡಲು ಕಷ್ಟವಾಗುತ್ತಿದೆ. ಈ ಬಗ್ಗೆ ನನಗೆ ಸಮೀಕ್ಷೆ ಕಾರ್ಯಕ್ಕೆ ಹಾಕಬೇಡಿ ಎಂದರೂ ಅಧಿಕಾರಿಗಳು ಸಮೀಕ್ಷೆಯ ಕರ್ತವ್ಯಕ್ಕೆ ನಿಯೋಜಿಸಿದ್ದಾರೆ, ನಗರಲ್ಲಿ ಸುತ್ತಾಡುತ್ತ ಸಮೀಕ್ಷೆ ಮಾಡುವುದರಿಂದ ನನಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ ಎಂದು ಶಿಕ್ಷಕ ಮಹಾನಿಂಗಪ್ಪ ಅಳಲು ತೋಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X