Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಂಗ ಸಾಹಿತ್ಯ ಸಮ್ಮೇಳನದ...

ಕಲಬುರಗಿ | ರಂಗ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗಪ್ಪಯ್ಯ ಸ್ವಾಮಿಗಳಿಗೆ ಕಸಾಪದಿಂದ ಅಧಿಕೃತ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 March 2025 4:13 PM IST
share
ಕಲಬುರಗಿ | ರಂಗ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗಪ್ಪಯ್ಯ ಸ್ವಾಮಿಗಳಿಗೆ ಕಸಾಪದಿಂದ ಅಧಿಕೃತ ಆಹ್ವಾನ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎ.3ರಂದು ನಗರದ ಕನ್ನಡ ಭವನದ ಸಾಹಿತ್ಯ ಮಂಟಪದಲ್ಲಿ ಏರ್ಪಡಿಸಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ರಂಗ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಚಿತ್ತಾಪೂರ ತಾಲೂಕಿನ ಆಳ್ಳೋಳ್ಳಿ ಗದ್ದುಗೆ ಮಠದ ನಾಗಪ್ಪಯ್ಯ ಮಹಾಸ್ವಾಮಿಗಳವರನ್ನು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವದಲ್ಲಿ ಪದಾಧಿಕಾರಿಗಳೆಲ್ಲರೂ ಸೇರಿ ಫಲ ತಾಂಬೂಲ ಕೊಟ್ಟು ಸಮ್ಮೇಳನಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು.

ನಾಗಪ್ಪಯ್ಯ ಮಹಾಸ್ವಾಮಿಗಳು ಕಳೆದ ನಾಲ್ಕ ದು ದಶಕಗಳಿಂದ ತಮ್ಮ ಶ್ರೀಮಠದಲ್ಲಿ ಈ ಭಾಗದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾ.ನಾ.ಸಂ. ಎಂಬ ಸಾಂಸ್ಕೃತಿಕ ಸಂಸ್ಥೆಯನ್ನು ಕಟ್ಟಿಕೊಂಡು ರಂಗಭೂಮಿ ಕ್ಷೇತ್ರವನ್ನು ಶ್ರೀಮಂತಗೊಳಿಸುವಲ್ಲಿ ಮುಂಚೂಣಿಯಲ್ಲಿದ್ದುಕೊoಡು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕೇವಲ ಮನರಂಜನೆಗಷ್ಟೇ ಅಲ್ಲದೇ ಬದುಕಿನ ಮೌಲ್ಯವನ್ನು ತಿಳಿಸಿಕೊಡುವುದು ನಾಟಕದ ಕಲೆ, ಮಾನವನಿಗೆ ಬದುಕಿನ ನೀತಿಪಾಠ ಕಲಿಸುವ ಶಾಲೆ ರಂಗಭೂಮಿ ಕ್ಷೇತ್ರವಾಗಿದೆ. ಇಂಥ ಪವಿತ್ರ ಕ್ಷೇತ್ರದ ಸಾಧಕರನ್ನು ಒಂಡೆದೆ ಸೇರಿಸುವ ಇನ್ನೊಂದು ಪ್ರಯತ್ನ ಪರಿಷತ್ ಮಾಡುತ್ತಿದೆ. ಕನ್ನಡ ಸಾರಸ್ವತ ಲೋಕದಲ್ಲಿ ಇದೊಂದು ಹೊಸ ಪ್ರಯೋಗ ಎನ್ನಬಹುದಾಗಿದೆ ಎಂದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ನಾ.ನಾ. ಸಂ.ನ ಮುಖ್ಯಸ್ಥರೂ ಆದ ಅಳ್ಳೋಳ್ಳಿ ಗದ್ದುಗೆಮಠದ ಶ್ರೀ ನಾಗಪ್ಪಯ್ಯ ಮಹಾಸ್ವಾಮಿಗಳು, ಈ ಭಾಗದ ಕಲಾವಿದರು ಹಾಗೂ ಕಲೆಯನ್ನು ಉಳಿಸಿ-ಬೆಳೆಸುವ ಕಾರ್ಯ ಪರಿಷತ್ತು ಮಾಡುತ್ತಿದೆ. ಕಲಾವಿದರು ಈ ಸಮಾಜದ ನಿಜವಾದ ಸಂಪತ್ತಾಗಿದ್ದಾರೆ. ಕಳೆದ ಐದು ದಶಕಗಳಿಂದ ರಂಗಭೂಮಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಯನ್ನು ಗುರುತಿಸಿ ಪರಿಷತ್ತು ನನಗೆ ಬಹು ದೊಡ್ಡ ಗೌರವ ಕೊಟ್ಟಿದೆ ಎಂದು ಸಂತೋಷ ವ್ಯಕ್ತಪಡಿಸಿದ ಅವರು, ಪ್ರತಿಭೆಗಳ ಆಗರವಾದ ಈ ಕಲ್ಯಾಣ ನೆಲ ಪ್ರತಿಭಾವಂತರ ನಾಡಾಗಿದೆ. ನಾಟಕಗಳು ಸಮಜದ ಪ್ರತಿಬಿಂಬವಾಗಿವೆ. ಸಮಾಜಕ್ಕೆ ಬಹು ದೊಡ್ಡ ಸಂದೇಶ ನೀಡುವ ಕಲಾವಿದರು ತಮ್ಮ ಬದುಕಿನಲ್ಲಿ ಅನೇಕ ಕಷ್ಟಗಳು ಇದ್ದರೂ, ಇದನ್ನು ಲೆಕ್ಕಿಸದೇ ಸಮಾಜಕ್ಕೆ ಸಂತೋಷವನ್ನುಂಟು ಮಾಡುವ ಕಲಾವಿದರು ಬಹು ಶ್ರೇಷ್ಠರಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಕಲ್ಯಾಣಕುಮಾರ ಶೀಲವಂತ, ರವೀಂದ್ರಕುಮಾರ ಭಂಟನಳ್ಳಿ, ಅಮೃತಪ್ಪ ಅಣೂರ, ಶಿವಾನಂದ ಸುರವಾಸೆ, ನರಸಿಂಗರಾವ ಹೇಮನೂರ, ಜ್ಯೋತಿ ಹಿರೇಮಠ, ಜ್ಯೋತಿ ಕೋಟನೂರ, ಶಿವಲೀಲಾ ಕಲಗುರ್ಕಿ, ಸವಿತಾ ನಾಸಿ, ಧರ್ಮರಾಜ ಜವಳಿ, ಹಣಮಂತಪ್ರಭು, ಡಾ.ಬಾಬುರಾವ ಶೇರಿಕಾರ, ಈರಣ್ಣ ಸೋನಾರ, ಮಲ್ಲಿನಾಥ ಸಂಗಶೆಟ್ಟಿ, ಮಾಣಿಕ ನಾಗಗುಂಡ, ಬಾಬುರಾವ ಪಾಟೀಲ, ಸೋಮಶೇಖರ ನಂದಿಧ್ವಜ, ವೀರಭದ್ರಪ್ಪ ಅರಿಕೇರಾ, ರೇವಣಸಿದ್ದಪ್ಪ ಜೀವಣಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X