Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನೃತ್ಯದಿಂದ ದೈಹಿಕ, ಮಾನಸಿಕ...

ಕಲಬುರಗಿ | ನೃತ್ಯದಿಂದ ದೈಹಿಕ, ಮಾನಸಿಕ ಬಲವರ್ಧನೆ : ಪಿಎಸ್ಐ ತಿರುಮಲೇಶ್.ಕೆ

ವಾರ್ತಾಭಾರತಿವಾರ್ತಾಭಾರತಿ29 Jan 2025 5:46 PM IST
share
ಕಲಬುರಗಿ | ನೃತ್ಯದಿಂದ ದೈಹಿಕ, ಮಾನಸಿಕ ಬಲವರ್ಧನೆ : ಪಿಎಸ್ಐ ತಿರುಮಲೇಶ್.ಕೆ

ಕಲಬುರಗಿ : ವಾಡಿ ತರುಣ ಸಂಘಗಳು ಬಡಾವಣೆಗಳಲ್ಲಿ ನೃತ್ಯ ಸ್ಪರ್ಧೆಗಳಂತಹ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶಗಳನ್ನು ನೀಡುವ ಅಪರೂಪದ ವೇದಿಕೆ ನೀಡುತ್ತಿರುವುದು ಶ್ಲಾಘನೀಯ ಎಂದು ಸ್ಥಳೀಯ ಪೊಲೀಸ್ ಠಾಣೆ ಪಿಎಸ್ಐ ತಿರುಮಲೇಶ ಕೆ. ಹೇಳಿದರು.

ವಾಡಿ ಪಟ್ಟಣದ ಧಮ್ಮ ದೀಕ್ಷಾ ಭೂಮಿಯಲ್ಲಿ ಸಿದ್ದಾರ್ಥ ತರುಣ ಸಂಘದ ವತಿಯಿಂದ 76ನೇ ಗಣರಾಜ್ಯೋತ್ಸವದ ನಿಮಿತ್ತ ಸ್ಥಳೀಯ ಶಾಲಾ ಹಮ್ಮಿಕೊಂಡ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ನೃತ್ಯ ಒಂದು ರೀತಿಯ ವ್ಯಾಯಾಮ, ಕ್ರೀಡೆಯಾಗಿದ್ದು, ದೇಹದ ಎಲ್ಲಾ ಅಂಗಗಳನ್ನು ಸಕ್ರಿಯಗೊಳಿಸಬಲ್ಲ ಮತ್ತು ಚುರುಕುಗೊಳಿಸಬಲ್ಲ ನೃತ್ಯದ ಅಭ್ಯಾಸದಿಂದ ಉಸಿರಾಟದ ನಿಯಂತ್ರಣದಿಂದ ಶರೀರದ ದೃಢತೆ, ಕೆಲವು ದೈಹಿಕ ನ್ಯೂನತೆಗಳನ್ನು ಕೂಡಾ ಸರಿಪಡಿಸಲು ಸಾಧ್ಯವಾಗಿ ದೇಹಕ್ಕೆ ಆಕರ್ಷಕ ರೂಪ ಬರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಟೋಪಣ್ಣ ಕೋಮಟೆ, ನೃತ್ಯ ಕಲೆಯನ್ನು ಒಂದು ಸ್ಪರ್ಧೆ ಎಂದು ತೆಗೆದುಕೊಳ್ಳದೇ ನಿಮ್ಮೊಳಗಿನ ಕಲೆಯ ಪ್ರದರ್ಶನ ಎಂದು ಭಾವಿಸಬೇಕು. ಸೋಲು ಗೆಲುವಿಗೆ ಹೆಚ್ಚಿನ ಮಹತ್ವ ನೀಡಿದರೆ, ಸಂಕಟವಾಗಿ ಎದುರಾಳಿಗಳ ಮೇಲೆ ದ್ವೇಶ ಹುಟ್ಟಬಹುದು. ಆಗ ನೀವು ನಿಮ್ಮ ನೃತ್ಯ ಕಲೆಯ ಮೇಲಿನ ಏಕಾಗ್ರತೆ ಕಳೆದುಕೊಳ್ಳುತ್ತಿರಿ ಎಂದು ಹೇಳಿದರು.

ಒಟ್ಟು 14 ಶಾಲೆಗಳು ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದರೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ದ್ವಿತೀಯ ಸ್ಥಾನ ಪಡೆದಿದೆ. ತೃತಿಯ ಸ್ಥಾನ ಮಿನಿ ರೋಜ್ ಆಂಗ್ಲ ಮಾಧ್ಯಮ ಶಾಲೆ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ.ಫಕ್ರುದ್ದೀನ್ ಸಾಬ್, ಸೂರ್ಯಕಾಂತ ರದ್ದೇವಾಡಿ, ನಾಗೇಂದ್ರ ಜಯಗಂಗಾ, ಶರಣಬಸ್ಸು ಸಿರೂರಕರ, ಚಂದಪ್ಪ ಕಟ್ಟಿಮನಿ, ರಮೇಶ ಬಡಿಗೇರ, ಸಂಜಯ ಗೋಪಾಳೆ, ಭೀಮಶಾ ಮೈನಾಳಕರ, ದೊಡ್ಡೇಶ ಬಡಿಗೇರ, ಸುನೀಲ ಗುತ್ತೇದಾರ, ಮಹಾದೇವ ಮಾಲಗತ್ತಿ, ಖೇಮಲಿಂಗ ಬೆಳಮಗಿ, ಗುರುಪಾದ ದೊಡ್ಡಮನಿ, ಸಿದ್ದಾರ್ಥ ತರುಣ ಸಂಘದ ಅಧ್ಯಕ್ಷ ದಿಲೀಪ ಮೈನಾಳಕರ, ಉಪಾಧ್ಯಕ್ಷ ಮಹೇಶ ರಾಜಳ್ಳಿ, ಖಜಾಂಚಿ ವಿಶಾಲ ಬಡಿಗೇರ, ಪ್ರಮೋದ ಕಿಣ್ಣಿಕರ, ತೀರ್ಪುಗಾರರಾದ ಅಂಬರೀಶ ಬಡಿಗೆರ, ಜಾಕ್ಸನ್, ವಿನೋದ ರವಿ ಕೋಳಕೂರ, ಬುದ್ಧಪ್ರಿಯ ಕೋಮಟೆ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X