Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪೊಲೀಸ್ ಸಿಬ್ಬಂದಿಯ ಹತ್ಯೆ...

ಕಲಬುರಗಿ | ಪೊಲೀಸ್ ಸಿಬ್ಬಂದಿಯ ಹತ್ಯೆ ಪ್ರಕರಣ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ʼಇನ್ಫಾರ್ಮರ್ʼ ಆಗಿ ಕೆಲಸ ಮಾಡುತ್ತಿದ್ದ ಆರೋಪಿ !

ವಾರ್ತಾಭಾರತಿವಾರ್ತಾಭಾರತಿ27 Feb 2025 5:23 PM IST
share
ಕಲಬುರಗಿ | ಪೊಲೀಸ್ ಸಿಬ್ಬಂದಿಯ ಹತ್ಯೆ ಪ್ರಕರಣ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಲಬುರಗಿ : ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಜೈಲಿನಿಂದ ತಪ್ಪಿಸಿಕೊಂಡು 11 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡು, ಅಲ್ಲಿನ ಪೊಲೀಸರಿಗೆ ಇನ್ಫಾರ್ಮರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಕಲಬುರಗಿ ಸಬ್-ಅರ್ಬನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

ಚಿತ್ತಾಪೂರ ತಾಲ್ಲೂಕಿನ ಭಾಗೋಡಿ ಅಂಬರೀಷ ಅಂಬಾದಾಸ ನಾಟಿಕಾರ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

2009ರಲ್ಲಿ ನಗರದ ಬಿದ್ದಾಪೂರ ಕಾಲೋನಿಯ ಜೆ.ಬಿ ಕಾಂಪ್ಲೆಕ್ಸ್ ಹತ್ತಿರದಲ್ಲಿ ನಡೆದ ಇಬ್ಬರ ನಡುವಿನ ಗಲಾಟೆಗೆ ಸಂಬಂಧಿಸಿದಂತೆ ಬಂಜಾರಾ ಕ್ರಾಸ್ ಹತ್ತಿರ ಆರೋಪಿ ಅಂಬರೀಷ ಕರ್ತವ್ಯದ ಮೇಲೆ ಇದ್ದ ಅಶ್ವಿನ್ ಕುಮಾರ್ ಎಂಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯವು 2011 ರಂದು ಆರೋಪಿ ಅಂಬರೀಷಗೆ ಜೀವಾವಧಿ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿ ಆದೇಶಿಸಿತ್ತು.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತರೆ ಶಿಕ್ಷಾಬಂಧಿ ಆರೋಪಿಗಳೊಂದಿಗೆ ಜಗಳ ಮಾಡಿಕೊಂಡಾಗ, ಆರೋಪಿಯನ್ನು ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. 2014ರಲ್ಲಿ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಯನ್ನು ದಾಖಲು ಮಾಡಿದಾಗ ಸಿಬ್ಬಂದಿಗಳ ಕಣ್ಣು ತಪ್ಪಿಸಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶೇಲ್ ವಾರ್ಡ್ ನಿಂದ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ವಿಜಯಪುರ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಪತ್ತೆಗಾಗಿ ಕಲಬುರಗಿ ನಗರದ ಸಬ್-ಅರ್ಬನ್ ಉಪ ವಿಭಾಗ ಪೊಲೀಸ್ ಆಯುಕ್ತರಾದ ಡಿ.ಜಿ.ರಾಜಣ್ಣ ಅವರ ಮಾರ್ಗದರ್ಶನದಲ್ಲಿ ಪಿ.ಐ ಸಂತೋಷ ಎಲ್.ತಟ್ಟೆಪಳ್ಳಿ ನೇತೃತ್ವದ ಸಿಬ್ಬಂದಿಗಳಾದ ಭೀಮಾ ನಾಯಕ, ಶಶಿಕಾಂತ, ಚನ್ನವಿರೇಶ ಅವರನ್ನೊಳಗೊಂಡ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ಹಾಗೂ ತಾಂತ್ರಿಕವಾಗಿ ಪರಿಶೀಲಿಸಿ, ಫೆ.26 ರಂದು ಆರೋಪಿಯನ್ನು ಪುಣೆ ನಗರದಲ್ಲಿ ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X