Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೇಂದ್ರದ ಬಜೆಟ್ ಖಂಡಿಸಿ ಆಳಂದ...

ಕಲಬುರಗಿ | ಕೇಂದ್ರದ ಬಜೆಟ್ ಖಂಡಿಸಿ ಆಳಂದ ಪಟ್ಟಣದಲ್ಲಿ ಪ್ರತಿಭಟನೆ

ಭಾರತದಲ್ಲಿ ಬೃಹತ್ ಅಸಮಾನತೆ ಉಲ್ಬಣಿಸುವ ಬಜೆಟ್ ಮಂಡನೆ : ಸಲ್ಮಾನ್ ಖಾನ್ ಸಿ.ಎನ್.

ವಾರ್ತಾಭಾರತಿವಾರ್ತಾಭಾರತಿ3 Feb 2025 5:21 PM IST
share
Photo of Protest

ಕಲಬುರಗಿ : ಆರ್ಥಿಕ ಸಮೀಕ್ಷೆ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಜನರ ವೇತನಗಳಲ್ಲಿ ಇಳಿಕೆಯಾಗಿದೆ. ಶ್ರಮಿಕರ ಹತಾಶ ಸ್ಥಿತಿ ತೋರಿಸುತ್ತಿರುವಾಗ, ಈ ಬಜೆಟ್ ಶ್ರೀಮಂತರಿಗೆ ರಿಯಾಯಿತಿಗಳನ್ನು ನೀಡುತ್ತಲೇ, ಸರಕಾರಿ ವೆಚ್ಚಗಳನ್ನು ಕಡಿತಗೊಳಿಸುವತ್ತ ಒತ್ತು ನೀಡಿ, ಭಾರತದಲ್ಲಿನ ಬೃಹತ್ ಅಸಮಾನತೆಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು CPI (M) ಆಳಂದ ತಾಲೂಕಾ ಸಮಿತಿಯ ಸಲ್ಮಾನ್ ಖಾನ್ ಸಿ.ಎನ್. ಕಳವಳ ವ್ಯಕ್ತಪಡಿಸಿದ್ದರು.

ಆಳಂದ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಎದುರು CPI (M) ತಾಲೂಕು ಸಮಿತಿಯಿಂದ ಕೇಂದ್ರದ ಬಜೆಟ್ ಖಂಡಿಸಿ ಉಪ ತಹಶೀಲ್ದಾರ್ ಸಿದ್ರಾಮ್ ಎಸ್. ಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, 2025-26ರಲ್ಲಿ ಹಂಚಿಕೆಗಳು ಎಸ್.ಸಿ. ಮತ್ತು ಎಸ್.ಟಿ.ಗಳಿಗೆ ಶೇ.3.4 ಮತ್ತು ಶೇ. 2.6 ವೆಚ್ಚ ನೀಡಿರುವುದನ್ನು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮೋದ ಪಾಂಚಾಳ ಮಾತನಾಡಿ, ಮೋದಿ ಸರಕಾರದ ಆರ್ಥಿಕ ನೀತಿಗಳ ಬರಡುತನವನ್ನು ಬಿಂಬಿಸುತ್ತದೆ. ಬಿಕ್ಕಟ್ಟಿನ ಪ್ರಮಾಣವಾಗಲಿ, ಅದರ ಸ್ವರೂಪವಾಗಲಿ ಸರಕಾರ ಮತ್ತು ಅದರ ಹಣಕಾಸು ಸಚಿವರಿಗೆ ಗೋಚರಿಸುವಂತೆ ಕಾಣುತ್ತಿಲ್ಲ. ಅವರು ಅರ್ಥವ್ಯವಸ್ಥೆಯ ಮಹಾನ್ ರೀತಿಯಲ್ಲಿ ನಡೆಸುತ್ತಿದ್ದೇವೆ ಎಂಬ ಭ್ರಮೆಯಲ್ಲೇ ಮುಂದುವರಿಯುತ್ತಿದ್ದಾರೆ ಎಂದರು.

ಜಾಗತಿಕ ಲಿಂಗಾಯತ ಮಹಾಸಭಾ ಆಳಂದ ತಾಲೂಕು ಅಧ್ಯಕ್ಷ ರಮೇಶ ಲೋಹಾರ ಮಾತನಾಡಿ, ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಮಧ್ಯಮ ವರ್ಗಗಳಿಗೆ ಸಹಾಯ ಮಾಡಲಾಗುತ್ತಿದೆ ಎಂದು ಹೇಳಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ಆದಾಯ ತೆರಿಗೆ ರಿಯಾಯಿತಿಗಳಿಂದಾಗಿ ಸರಕಾರ ಅನುಭವಿಸುವ ರೂಪಾಯಿ ಒಂದು ಲಕ್ಷ ಕೋಟಿ ನಷ್ಟದಿಂದ ಪ್ರಯೋಜನದ ಪಾಲು ಪಡೆಯುವವರು ಶೇ.1ರಷ್ಟು ಮಂದಿ ಮಾತ್ರ ಎಂದರು.

ಈ ಸಂದರ್ಭದಲ್ಲಿ ರೂಪಾ ಇಕ್ಕಳಕಿ, ಸಮರ್ಥ್, ಶಿವಶಂರಣಪ್ಪ ಬೆಳಸುರೆ ಲ., ವಿಜಯ್, ಅಬ್ದುಲ್, ವಿಶಾಲ್, ಅಶಿಶ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X