Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪುಟ್ಟರಾಜ ಗವಾಯಿಗಳು...

Kalaburagi | ಪುಟ್ಟರಾಜ ಗವಾಯಿಗಳು ಸಂಗೀತ ಕ್ಷೇತ್ರದ ಸಾಮ್ರಾಟ್ : ಉಮಾಶ್ರೀ

ವಾರ್ತಾಭಾರತಿವಾರ್ತಾಭಾರತಿ17 July 2026 9:49 PM IST
share
Kalaburagi | ಪುಟ್ಟರಾಜ ಗವಾಯಿಗಳು ಸಂಗೀತ ಕ್ಷೇತ್ರದ ಸಾಮ್ರಾಟ್ : ಉಮಾಶ್ರೀ
31 ಹಿರಿಯ ಪ್ರವಚನಕಾರರಿಗೆ ‘ಪ್ರವಚನ ಪ್ರವೀಣ’ ಪ್ರಶಸ್ತಿ ಪ್ರದಾನ

ಕಲಬುರಗಿ : ನಾಡಿನ ಗಾನಯೋಗಿ ಪುಟ್ಟರಾಜ ಕವಿ ಗವಾಯಿಗಳು ಸಂಗೀತ ಕ್ಷೇತ್ರದ ಸಾಮ್ರಾಟ್ ಆಗಿದ್ದು, ಸಂಗೀತ, ಸಾಹಿತ್ಯ ಹಾಗೂ ರಂಗಭೂಮಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಚಿತ್ರನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚಿತ್ತಾಪುರದ ಶ್ರೀ ರಾಗ ಸಂಗಮ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಗರದ ಕನ್ನಡ ಭವನದ ಸುವರ್ಣ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಪುಟ್ಟರಾಜ ಕೊಟ್ಟ ಜ್ಞಾನ – ಗಾನ, ಮಾನದಾತ ನಾದದ ನವನೀತ’ ವಿಶೇಷ ಕಾರ್ಯಕ್ರಮದಲ್ಲಿ 31 ಹಿರಿಯ ಪ್ರವಚನಕಾರರಿಗೆ ‘ಪ್ರವಚನ ಪ್ರವೀಣ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಪುಟ್ಟರಾಜ ಕವಿ ಗವಾಯಿಗಳು ಅಂತರಾತ್ಮದ ಶಕ್ತಿ ತುಂಬಿದ ಮಹಾನ್ ವ್ಯಕ್ತಿತ್ವವಾಗಿದ್ದು, ಅವರಲ್ಲಿ ದೈವಿಕ ಶಕ್ತಿಯ ಅಂಶಗಳಿದ್ದವು. ದೃಷ್ಟಿಹೀನರಾಗಿದ್ದರೂ ಸಂಗೀತ ಮತ್ತು ರಂಗಭೂಮಿ ಕ್ಷೇತ್ರಕ್ಕೆ ಅಪೂರ್ವ ವೈಭವ ತಂದುಕೊಟ್ಟ ಮಹನೀಯರು ಎಂದು ಅವರು ಸ್ಮರಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಶ್ರೀ ವೀರ ಮಹಾಂತ ಶಿವಾಚಾರ್ಯರು, ನೊಂದ ಮನಸ್ಸಿಗೆ ಸಾಂತ್ವನ ನೀಡುವುದು ಒಳ್ಳೆಯ ಮಾತುಗಳೇ ಆಗಿದ್ದು, ಪ್ರವಚನಕಾರರ ಸೇವೆ ಸಮಾಜಕ್ಕೆ ಅಮೂಲ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಗೌತಮ ವೈಜನಾಥ ಪಾಟೀಲ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗಾನಯೋಗಿ ಪುಟ್ಟರಾಜ ಕವಿ ಗವಾಯಿಗಳು ಸಂಗೀತ, ಸಾಹಿತ್ಯ ಹಾಗೂ ಸಮಾಜ ಸೇವೆಯ ಮೂಲಕ ಸಾವಿರಾರು ಜನರ ಬದುಕಿಗೆ ಬೆಳಕಾದ ಮಹಾನ್ ಸಾಧಕರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಕಾರಿ ಧುರೀಣ ಚನ್ನಮಲ್ಲಯ್ಯ ಹಿರೇಮಠ ಜೇವರ್ಗಿ, ನಗನೂರಿನ ಜಗದೀಶ ಶರಣರು, ಮಹಿಳಾ ಸಂಘಟಕಿ ಜಯಶ್ರೀ ಮುಚಳಂಬಿ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಶ್ರೀ ರಾಗ ಸಂಗಮ ಸೇವಾ ಟ್ರಸ್ಟ್ ಅಧ್ಯಕ್ಷೆ ಶ್ವೇತಾ ಆರ್. ಪಾಟೀಲ, ನಾಗಲಿಂಗಯ್ಯ ಸ್ಥಾವರಮಠ ಸುಂಟನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವು ದಶಕಗಳಿಂದ ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿರುವ 31 ಮಂದಿ ಹಿರಿಯ ಮತ್ತು ಖ್ಯಾತ ಪ್ರವಚನಕಾರರನ್ನು ‘ಪ್ರವಚನ ಪ್ರವೀಣ’ ಪ್ರಶಸ್ತಿಯಿಂದ ಗೌರವಿಸಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X