Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೂಲಿ ಕಾರ್ಮಿಕರ ಮಗಳು ರಾಣಿ...

ಕಲಬುರಗಿ | ಕೂಲಿ ಕಾರ್ಮಿಕರ ಮಗಳು ರಾಣಿ ಮಾಳಪ್ಪಗೆ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕ

ವಾರ್ತಾಭಾರತಿವಾರ್ತಾಭಾರತಿ9 April 2025 7:49 PM IST
share
ಕಲಬುರಗಿ | ಕೂಲಿ ಕಾರ್ಮಿಕರ ಮಗಳು ರಾಣಿ ಮಾಳಪ್ಪಗೆ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕ

ಕಲಬುರಗಿ : ಬಡತನದಲ್ಲಿ ಬೆಳೆದು, ಜೀವನದಲ್ಲಿ ಹಲವಾರು ಸಂಕಷ್ಟಗಳನ್ನು ಎದುರಿಸಿ, ತನ್ನ ಛಲ ಮತ್ತು ಪರಿಶ್ರಮದ ಬಲದಿಂದ ಶಿಕ್ಷಣದಲ್ಲಿ ಅಪೂರ್ವ ಸಾಧನೆ ಮಾಡಿದ ಆಳಂದ ಪಟ್ಟಣದ ರಾಮನೋಹರ್ ಲೋಹಿಯಾ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಣಿ ಮಾಳಪ್ಪ ಹರಳಯ್ಯ ಪಿಯುಸಿ ಪರೀಕ್ಷೆಯಲ್ಲಿ ಶೇ 98 ಅಂಕ ಪಡೆದಿದ್ದಾರೆ.

ಕೂಲಿ ಕಾರ್ಮಿಕರ ಮಗಳಾಗಿ ಹುಟ್ಟಿದ ರಾಣಿ ಅವರು, ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ತಂದೆ ಅನಾರೋಗ್ಯದಿಂದ ನಿಧನರಾದರು. ಆಗಿನಿಂದ ತಾಯಿ ಗೋದಾವರಿ ಒಬ್ಬರೇ ಕೂಲಿ ಕೆಲಸ ಮಾಡಿ ಕುಟುಂಬವನ್ನು ಸಾಕಿದರು. ಆರ್ಥಿಕ ಸಂಕಷ್ಟಗಳ ನಡುವೆಯೂ ರಾಣಿ ತನ್ನ ಓದಿನ ಗೀಳನ್ನು ಬಿಟ್ಟುಕೊಡಲಿಲ್ಲ. ತಾಯಿಯ ಪರಿಶ್ರಮ ಮತ್ತು ತನ್ನ ಸಂಕಲ್ಪದ ಫಲವಾಗಿ ಇಂದು ಈ ಗಮನಾರ್ಹ ಸಾಧನೆಯನ್ನು ಮಾಡಿದ್ದಾಳೆ.

ಆಳಂದ ತಾಲೂಕಿನ ಖಜೂರಿ ವಲಯದ ಸಾಲೆಗಾಂವ್ ಗ್ರಾಮದ ಈ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ಶೇ.98 ರಷ್ಟು ಅಂಕಗಳನ್ನು ಗಳಿಸುವ ಮೂಲಕ ರ‍್ಯಾಂಕ್ ಪಡೆದು, ತನ್ನ ಕನಸುಗಳಿಗೆ ಬಣ್ಣ ತುಂಬಿದ್ದಾಳೆ. ಅಲ್ಲದೆ ಈಗ ಕೆಎಎಸ್ ಪರೀಕ್ಷೆ ಮೂಲಕ ತಹಶೀಲ್ದಾರ್‌ ಆಗುವ ಬಯಕೆಯನ್ನು ಹೇಳಿಕೊಂಡಿದ್ದಾಳೆ.

ರಾಣಿಯ ಈ ಯಶಸ್ಸು ಕೇವಲ ಆಕೆಯ ಕುಟುಂಬಕ್ಕೆ ಮಾತ್ರವಲ್ಲ, ಆಳಂದ ಪಟ್ಟಣಕ್ಕೆ ಮತ್ತು ರಾಮನೋಹರ್ ಲೋಹಿಯಾ ಪಿಯು ಕಾಲೇಜಿಗೆ ಹೆಮ್ಮೆ ತಂದಿದೆ. ಆಕೆಯ ಶಿಕ್ಷಕರು ಮತ್ತು ಸಹಪಾಠಿಗಳು ರಾಣಿಯ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಣಿಯ ಶ್ರಮ, ಏಕಾಗ್ರತೆ ಮತ್ತು ಗುರಿಯತ್ತ ತುಡಿತವನ್ನು ಶಿಕ್ಷಕರು ಶ್ಲಾಘಿಸಿದ್ದಾರೆ. "ರಾಣಿ ತನ್ನ ಗುರಿಯನ್ನು ಸಾಧಿಸಲು ದಿನರಾತ್ರಿ ಶ್ರಮಿಸಿದ್ದಾಳೆ. ಆಕೆಯ ಈ ಯಶಸ್ಸು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ," ಎಂದು ಕಾಲೇಜಿನ ಪ್ರಾಂಶುಪಾಲರು ಹೇಳಿದ್ದಾರೆ.

ಕಾಲೇಜಿನ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ಬಿ.ಆರ್.ಪಾಟೀಲ್ ಅವರು ರಾಣಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. "ರಾಣಿಯ ಈ ಯಶಸ್ಸು ಬಡತನದಲ್ಲಿ ಬೆಳೆದವರಿಗೆ ದೊಡ್ಡ ಪ್ರೇರಣೆ. ಆಕೆಯ ಪರಿಶ್ರಮ ಮತ್ತು ಛಲವನ್ನು ನೋಡಿ ನಮಗೆಲ್ಲರಿಗೂ ಹೆಮ್ಮೆ ಎನಿಸುತ್ತಿದೆ. ಆಕೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ," ಎಂದು ಅವರು ತಿಳಿಸಿದ್ದಾರೆ.

ರಾಣಿಯ ತಾಯಿ ಗೋದಾವರಿ, ಮಗಳ ಈ ಸಾಧನೆಯನ್ನು ಕಂಡು ಭಾವುಕರಾಗಿದ್ದಾರೆ. "ನನ್ನ ಮಗಳು ಓದಲು ಕಷ್ಟಪಟ್ಟಿದ್ದಾಳೆ. ಆಕೆಗೆ ಈ ಯಶಸ್ಸು ಸಿಕ್ಕಿರುವುದು ನನ್ನ ಜೀವನದ ದೊಡ್ಡ ಆನಂದದ ಕ್ಷಣ ಎಂದು ಅವರು ಹೇಳಿದರು.

ನಾನು ಉತ್ತಮ ಶಿಕ್ಷಣ ಪಡೆದು, ಕೆಎಎಸ್ ಪರೀಕ್ಷೆ ಬರೆದು ತಹಶೀಲ್ದಾರ್‌ ಆಗಿ ತಾಯಿಗೆ ಒಳ್ಳೆಯ ಜೀವನ ಕೊಡಿಸಬೇಕೆಂದು ಆಸೆ ಇದೆ ಎಂದು ರಾಣಿ ತನ್ನ ಮನದಾಸೆಯನ್ನು ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X