Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಯುವತಿಯ ಅತ್ಯಾಚಾರ–ಕೊಲೆ...

Kalaburagi | ಯುವತಿಯ ಅತ್ಯಾಚಾರ–ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Sept 2026 7:55 PM IST
share
Kalaburagi | ಯುವತಿಯ ಅತ್ಯಾಚಾರ–ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕಲಬುರಗಿ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ಕರಣಿ ಗ್ರಾಮದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ ನಗರದ ಜಗತ್‌ ವೃತ್ತದಲ್ಲಿ ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ದೇವದುರ್ಗ ತಾಲೂಕಿನ ಬೊಮ್ಮಾನಂದ, ಲಿಂಗಸೂರು ತಾಲೂಕಿನ ರಾಣಮ್ಮ ಹಾಗೂ ಸಿರವಾರ ತಾಲೂಕಿನ ಹೊಕ್ಕರಣಿ ಗ್ರಾಮದ ಅಶ್ವಿನಿ ಸೇರಿದಂತೆ ಮೂವರು ಬರ್ಬರವಾಗಿ ಹತ್ಯೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಅಶ್ವಿನಿ ಅವರು ಸಂಜೆ ಬಯಲು ಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ ಅವರನ್ನು ಸುತ್ತುವರಿದು, ಅವರು ರಕ್ಷಣೆಗಾಗಿ ಕೂಗಿಕೊಂಡಾಗ ಸಹಾಯಕ್ಕೆ ಬರಲು ಮುಂದಾದವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಬಾವಿಗೆ ಎಸೆದಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಈ ಪ್ರಕರಣವು ಪೂರ್ವನಿಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದರು.

ದಲಿತ ಮಹಿಳೆಯರು, ಬಾಲಕಿಯರು ಹಾಗೂ ಗ್ರಾಮೀಣ ಪ್ರದೇಶದ ದಲಿತ ಸಮುದಾಯದ ಜನರಿಗೆ ಇನ್ನೂ ಸೂಕ್ತ ಭದ್ರತೆ ದೊರೆಯುತ್ತಿಲ್ಲ. ಅತ್ಯಾಚಾರ, ಕೊಲೆ, ದೌರ್ಜನ್ಯ, ಹಿಂಸೆ ಹಾಗೂ ಜಾತಿ ತಾರತಮ್ಯದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಾಮಾನ್ಯ ಘಟನೆಗಳಂತೆ ಪರಿಗಣಿಸದೆ, ಆರೋಪಿಗಳ ವಿರುದ್ಧ ತ್ವರಿತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಅಪರಾಧ ತಡೆಗೆ ಪೊಲೀಸ್ ಇಲಾಖೆಗೆ ಆಧುನಿಕ ತಂತ್ರಜ್ಞಾನ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದರೂ ಅಪರಾಧಗಳು ಮುಂದುವರಿಯುತ್ತಿರುವುದು ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.

ಕರ್ತವ್ಯಲೋಪ, ಭ್ರಷ್ಟಾಚಾರ ಹಾಗೂ ಗಂಭೀರ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು. ತಪ್ಪಿತಸ್ಥರೆಂದು ಸಾಬೀತಾದ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಧರಣಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಮರಿಯಪ್ಪ ಹಳ್ಳಿ, ಮಲ್ಲಿಕಾರ್ಜುನ ಕ್ರಾಂತಿ, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ರಾಜಕುಮಾರ ನಿಂಬಾಳ, ಶಿವಕುಮಾರ ಕೋರಳ್ಳಿ, ಪ್ರೀತಮ ನಾಕಮನ, ಮಹೇಶ ಕೋಕಿಲೆ, ಕುಮಾರ ಕುಳಗೇರಿ, ಸಾಯಬಣ್ಣ ಕೋಕಟನೂರ, ಪರಶುರಾಮ ರಾಜಾಪೂರ, ರಾಮಣ್ಣ ಪಾಸ್ವನ, ರಾಜಶೇಖರ ಹೊಸಮನಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Dalit Sangharsha SamitiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X