Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಿಯಾಜ್ ಅಹ್ಮದ್ ಬೋಡೆ ಅವರ...

ಕಲಬುರಗಿ | ರಿಯಾಜ್ ಅಹ್ಮದ್ ಬೋಡೆ ಅವರ ಅನುವಾದಿತ “ಅಮೀರ್ ಖುಸ್ರೋ ಕಾವ್ಯಲೋಕ” ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ29 Oct 2025 4:32 PM IST
share
ಕಲಬುರಗಿ | ರಿಯಾಜ್ ಅಹ್ಮದ್ ಬೋಡೆ ಅವರ ಅನುವಾದಿತ “ಅಮೀರ್ ಖುಸ್ರೋ ಕಾವ್ಯಲೋಕ” ಪುಸ್ತಕ ಬಿಡುಗಡೆ

ಕಲಬುರಗಿ : ಒಂದು ಭಾಷೆಯ ಕಾವ್ಯವನ್ನು ಮತ್ತೊಂದು ಭಾಷೆಗೆ ಅನುವಾದಿಸುವುದು ಚಾರಿತ್ರಿಕ ಗ್ರಂಥವನ್ನು ಅನುವಾದಿಸುವಷ್ಟು ಸುಲಭವಲ್ಲ. ಮೂಲ ಲೇಖಕನ ಭಾವನೆಗಳಿಗೆ ಧಕ್ಕೆ ಬಾರದಂತೆ ಕಾವ್ಯವನ್ನು ಅನುವಾದಿಸುವುದು ಮಹತ್ತರ ಕೌಶಲ್ಯ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಭಾಷಾ ವಿಭಾಗದ ಡೀನ್ ಪ್ರೊ.ವಿಕ್ರಮ ವಿಸಾಜಿ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಡೀನ್ ಪ್ರೊ.ಅಬ್ದುಲ್ ರಬ್ ಉಸ್ತಾದ್ ಅವರು ರಿಯಾಜ್ ಅಹ್ಮದ್ ಬೋಡೆ ಅವರ “ಅಮೀರ್ ಖುಸ್ರೋ ಕಾವ್ಯಲೋಕ” ಪುಸ್ತಕವನ್ನು ಬಿಡುಗಡೆಗೊಳಿಸಿ, ಬೋಡೆ ಅವರು ಮೂಲತಃ ಸಾಹಿತ್ಯ ವಿದ್ಯಾರ್ಥಿಯಲ್ಲದಿದ್ದರೂ ಸಾಹಿತ್ಯವನ್ನು ಬದುಕಿನ ಭಾಗವಾಗಿಸಿಕೊಂಡಿದ್ದಾರೆ. ಅವರ ಕುಟುಂಬ ಹಾಗೂ ತಿಮ್ಮಾಪುರಿ ಗ್ರಾಮದ ಸಾಹಿತ್ಯ ವಾತಾವರಣದಿಂದಲೇ ಈ ಪ್ರೇರಣೆ ದೊರಕಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಲೋಕ ಇದುವರೆಗೆ ಉರ್ದು–ಪಾರ್ಸಿ–ಅರೇಬಿಕ್ ಸಾಹಿತ್ಯದ ಅನುಭವವನ್ನು ಒಳಗೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಈಗ ಬೋಡೆ ಅವರು ಆ ಅಪರಿಚಿತ ಸಾಹಿತ್ಯ ಲೋಕವನ್ನು ಕನ್ನಡಕ್ಕೆ ತಂದಿದ್ದಾರೆ. ಅನುವಾದದಲ್ಲಿ ಕೇವಲ ಮೂಲದ ಪ್ರತಿಕೃತಿಗಿಂತ, ಕನ್ನಡದ ಅನುಭವಲೋಕಕ್ಕೆ ಹೇಗೆ ಒಗ್ಗಿಸಿಕೊಳ್ಳಬಹುದು ಎಂಬ ಅರಿವು ಮುಖ್ಯ ಎಂದರು.

ಅಮೀರ್ ಖುಸ್ರೋ ಅವರು ಪಾರ್ಸಿ, ಉರ್ದು, ಹಿಂದಿ, ಬ್ರಜ್ ಸೇರಿದಂತೆ ಅನೇಕ ಭಾಷೆಗಳ ಸಮನ್ವಯದ ಕವಿ. ಜನರಿಂದಲೇ ‘ತೂತಿಯೇ ಹಿಂದುಸ್ತಾನ್’ (ಹಿಂದೂಸ್ತಾನದ ಕೋಗಿಲೆ) ಎಂದು ಕರೆಯಲ್ಪಟ್ಟರು. ಪ್ರೇಮ ಮತ್ತು ಸೂಫಿ ತತ್ತ್ವಗಳ ಮೂಲಕ ಭಾರತೀಯ ಸಂಗೀತಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ಡಾ. ಪರ್ವೀನ್ ಸುಲ್ತಾನಾ ಅವರು ಮಾತನಾಡಿ, ಸೂಫಿಗಳ ಕೊಡುಗೆ ಎಂದರೆ ಸೌಹಾರ್ದತೆ. ಅದು ಇಂದಿನ ಕಾಲಕ್ಕೆ ಅತ್ಯಂತ ಅಗತ್ಯ ಎಂದು ಹೇಳಿದರು.

ರಿಯಾಜ್ ಅಹ್ಮದ್ ಬೋಡೆ ಅವರು ಮಾತನಾಡಿ, ನಮಗೆ ಆಂಗ್ಲ ಮತ್ತು ಯೂರೋಪಿಯನ್ ಸಾಹಿತ್ಯ ಕನ್ನಡದಲ್ಲಿ ಸಿಗುತ್ತದೆ. ಆದರೆ, ನಮ್ಮದೇ ಬಂದೇನವಾಝ್ ಅವರ ಕೃತಿಗಳು ಪರಿಚಯವಾಗಿಲ್ಲ. ಈ ಕೊರತೆಯ ನಿವಾರಣೆಗೆ ನಾನು ಖುಸ್ರೋ ಕಾವ್ಯವನ್ನು ಅನುವಾದಿಸಲು ಮುಂದಾದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ಎಚ್.ಟಿ. ಪೋತೆ ಅವರು, ಕಲ್ಯಾಣ ಕರ್ನಾಟಕದಲ್ಲಿ ವಚನ ಮತ್ತು ಸೂಫಿ ತತ್ತ್ವದ ಅಧ್ಯಯನಕ್ಕೆ ತೀವ್ರ ಅಗತ್ಯವಿದೆ. ಬೋಡೆ ಅವರ ಅನುವಾದ ಕಾರ್ಯ ಆ ಕೊರತೆಯನ್ನು ಸ್ವಲ್ಪ ಮಟ್ಟಿಗೆ ನೀಗಿಸಿದೆ ಎಂದರು.

ಡಾ.ಪ್ರಕಾಶ ಸಂಗಮ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಡಾ.ಶಿವಶರಣಪ್ಪ ಕೊಡ್ಲಿ ಅವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಅಪ್ಪಾರಾವ ಅಕ್ಕೋಣಿ, ಪಿ.ನಂದಪ್ಪ, ಡಿ.ನದಾಫ್, ಡಾ.ಸೂರ್ಯಕಾಂತ ಸುಜ್ಯಾತ್, ಡಾ.‌ಹನುಮಂತ ಮೇಲಕೇರಿ, ಕನ್ನಡ ವಿಭಾಗದ ಉಪನ್ಯಾಸಕ ವೃಂದದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X