Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಟೌನ್ ಹಾಲ್ ನವೀಕರಣದಿಂದ...

ಕಲಬುರಗಿ | ಟೌನ್ ಹಾಲ್ ನವೀಕರಣದಿಂದ ಐತಿಹಾಸಿಕ ಪರಂಪರೆಗೆ ಧಕ್ಕೆ : ಸಂಶೋಧಕರಿಂದ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ22 Jan 2026 11:09 PM IST
share
ಕಲಬುರಗಿ | ಟೌನ್ ಹಾಲ್ ನವೀಕರಣದಿಂದ ಐತಿಹಾಸಿಕ ಪರಂಪರೆಗೆ ಧಕ್ಕೆ : ಸಂಶೋಧಕರಿಂದ ಆಕ್ಷೇಪ

ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಐತಿಹಾಸಿಕ ಟೌನ್ ಹಾಲ್ ಅನ್ನು ಸೂಕ್ತ ಮಾರ್ಗಸೂಚಿಗಳಿಲ್ಲದೆ ನವೀಕರಣಗೊಳಿಸುವ ಮೂಲಕ ಅದರ ಐತಿಹಾಸಿಕ ಪರಂಪರೆ ಹಾಗೂ ಮೂಲ ವಾಸ್ತುಶಿಲ್ಪಕ್ಕೆ ಗಂಭೀರ ಹಾನಿ ಉಂಟುಮಾಡಲಾಗಿದೆ ಎಂದು ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಮತ್ತು ದಕ್ಕನ್ ಇತಿಹಾಸ ತಜ್ಞ ಹಾಗೂ ಛಾಯಾಗ್ರಾಹಕ ಮೊಹಮ್ಮದ್ ಅಯಾಜೋದ್ದೀನ್ ಪಟೇಲ್ ಆರೋಪಿಸಿದ್ದಾರೆ.

ಟೌನ್ ಹಾಲ್ ಅನ್ನು ಹೈದರಾಬಾದ್‌ನ ಕೊನೆಯ ನಿಜಾಮರಾದ ಸರ್ ಮಿರ್ ಓಸ್ಮಾನ್ ಅಲಿ ಖಾನ್ ಬಹಾದೂರ್ ಅವರು 1929ರಲ್ಲಿ ಸ್ಥಾಪಿಸಿದ್ದರು. ಇಂಡೋ–ಸಾರಸೆನಿಕ್ ಶೈಲಿಯ ವಾಸ್ತುಶಿಲ್ಪದಲ್ಲಿ ನಿರ್ಮಿತವಾಗಿರುವ ಈ ಕಟ್ಟಡವು ವೈಭವಯುತ ಕಮಾನುಗಳು, ಗೋಪುರಗಳು ಹಾಗೂ ವಿಶಿಷ್ಟ ವಿನ್ಯಾಸದ ಮೂಲಕ ಹೈದರಾಬಾದ್ ರಾಜ್ಯದ ವಾಸ್ತು ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಮುಖ ನಾಗರಿಕ ಸ್ಮಾರಕವಾಗಿತ್ತು ಎಂದು ಅವರು ಹೇಳಿದರು.

ಪ್ರಸ್ತುತ ಕಲಬುರಗಿ ಮಹಾನಗರ ಪಾಲಿಕೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಐತಿಹಾಸಿಕ ಕಟ್ಟಡವು ನಿರ್ಲಕ್ಷ್ಯದಿಂದ ತನ್ನ ಮೂಲ ಸೌಂದರ್ಯವನ್ನು ಬಹುತೇಕ ಕಳೆದುಕೊಂಡಿದೆ. ಇತ್ತೀಚೆಗೆ ಕೈಗೊಂಡ ನವೀಕರಣ ಕಾಮಗಾರಿಗಳಲ್ಲಿ ಕಟ್ಟಡದ ವೈಶಿಷ್ಟ್ಯವಾಗಿದ್ದ ಹೊರಭಾಗದ ಕಮಾನುಗಳನ್ನು ಗೋಡೆಗಳಿಂದ ಮುಚ್ಚಲಾಗಿದ್ದು, ಇದರಿಂದ ಅದರ ಐತಿಹಾಸಿಕ ಸ್ವರೂಪಕ್ಕೆ ಧಕ್ಕೆ ಉಂಟಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನವೀಕರಣ ಕಾರ್ಯ ಆರಂಭಿಸುವ ಮೊದಲು ಪರಂಪರೆ ತಜ್ಞರು ಹಾಗೂ ವಾಸ್ತುಶಿಲ್ಪ ತಜ್ಞರ ಸಲಹೆ ಪಡೆಯಬೇಕಿತ್ತು. ಶತಮಾನ ಹಳೆಯ ಈ ಕಟ್ಟಡವು ಕಲಬುರಗಿಯಲ್ಲಿನ ಹೈದರಾಬಾದ್ ರಾಜ್ಯದ ವಾಸ್ತುಶಿಲ್ಪದ ಅಪರೂಪದ ಉದಾಹರಣೆಯಾಗಿದ್ದು, ಅದರ ಮೂಲ ಸ್ವರೂಪವನ್ನು ಸಂರಕ್ಷಿಸುವುದು ಅತ್ಯಾವಶ್ಯಕ ಎಂದು ಅಭಿಪ್ರಾಯಪಟ್ಟರು.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಟೌನ್ ಹಾಲ್‌ನ ಐತಿಹಾಸಿಕ ಸೌಂದರ್ಯ ಹಾಗೂ ಪರಂಪರೆಯನ್ನು ಉಳಿಸುವ ದಿಕ್ಕಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಲಾವಿದರು ಹಾಗೂ ಇತಿಹಾಸ ತಜ್ಞರು ಪಾಲಿಕೆಯನ್ನು ಆಗ್ರಹಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X