Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಇಂಗಳಗಿ-ವಾಡಿ ಮಧ್ಯದ ರಸ್ತೆ...

ಕಲಬುರಗಿ | ಇಂಗಳಗಿ-ವಾಡಿ ಮಧ್ಯದ ರಸ್ತೆ ದುರಸ್ತಿಗೆ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ9 March 2025 6:26 PM IST
share
Photo of Letter of appeal

ಕಲಬುರಗಿ : ವಾಡಿ ಇಂಗಳಗಿ ಗ್ರಾಮದಿಂದ ವಾಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಹದಗೆಟ್ಟ ಪರಿಣಾಮ ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಇಂಗಳಗಿ ಗ್ರಾಮ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಗೌಸ್ ದುದ್ದನಿ ನೇತೃತ್ವದಲ್ಲಿ ಸದಸ್ಯರು ಸಚಿವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣ ಸಮೀಪದ ಇಂಗಳಗಿ ಗ್ರಾಮದಿಂದ ವಾಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ 5 ಕಿ.ಮೀ. ರಸ್ತೆ ನಿರ್ಮಾಣ ಮಾಡಿ, ಸುಮಾರು 60 ವರ್ಷ ಕಳೆದಿವೆ. ಆದರೆ ಈಗ ಸಿಮೆಂಟ್ ರಸ್ತೆ ಸಂಪೂರ್ಣ ಬಿರುಕು ಬಿಟ್ಟು, ಹೆಜ್ಜೆಗೊಂದು ತಗ್ಗು ಗುಂಡಿಗಳು ಬಿದ್ದಿವೆ. ಪರಿಣಾಮ ಇಂತಹ ಬಿರುಕು ಬಿಟ್ಟ ರಸ್ತೆ ಮಧ್ಯೆಯೇ ಸಂಚಾರ ಮಾಡುವುದಕ್ಕೆ ಪ್ರಯಾಣಿಕರು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಆದರೂ ಇಲ್ಲಿಯವರೆಗೆ ರಸ್ತೆ ದುರಸ್ತಿ ಮಾಡಿರುವುದಿಲ್ಲ ಎಂದು ಪತ್ರದಲ್ಲಿ ಸಮಿತಿ ಸದಸ್ಯರು ದೂರಿದ್ದಾರೆ.

ಇಂಗಳಗಿ ಗ್ರಾಮದ ರಸ್ತೆ ಮಧ್ಯೆ ತಗ್ಗು ಗುಂಡಿಗಳು ಬಿದ್ದ ಪರಿಣಾಮ ವಾಹನಗಳಲ್ಲೇ ಗರ್ಭಿಣಿಯರಿಗೆ ಗರ್ಭಪಾತವಾದ ಹಲವು ಘಟನೆಗಳಿಗೆ ಹದಗೆಟ್ಟ ರಸ್ತೆಯೇ ಸಾಕ್ಷಿಯಾಗಿದೆ. ಶಾಲಾ ಮಕ್ಕಳಿಗೆ ಹಲವು ಬಾರಿ ರಸ್ತೆ ಅಪಘಾತವಾಗಿವೆ. ವೃದ್ದರಿಗೆ ಬೆನ್ನು ಮೂಳೆ ಮುರಿದಿವೆ. ಇದು ದಿನನಿತ್ಯದ ಹಲವು ಘಟನೆಗಳಿಗೆ ಜೀವಂತ ಸಾಕ್ಷಿಯಾಗಿದೆ. ಹದಗೆಟ್ಟ ರಸ್ತೆಯ ಭಯಾನಕ ದೃಶ್ಯಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ. ಸಚಿವರಿಂದ ರಸ್ತೆ ದುರಸ್ತಿ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸಮಿತಿ ಅಧ್ಯಕ್ಷ ಗೌಸ್ ದುದ್ದನಿ ತಿಳಿಸಿದ್ದಾರೆ.

ಇಂಗಳಗಿ ಗ್ರಾಮದಿಂದ ಇಲ್ಲಿಯವರೆಗೆ ಸುಮಾರು 2 ಸಾವಿರ ಎಕರೆ ಜಮೀನು ರೈತರಿಂದ ಎಸಿಸಿ ಸಿಮೆಂಟ್ ಕಂಪನಿ ಖರೀದಿಸಿದೆ. ಆದರೆ ಗ್ರಾಮದ ಜನರಿಗೆ ಸುಗಮ ಸಂಚಾರಕ್ಕೆ ಕನಿಷ್ಟ ಗುಣಮಟ್ಟ ರಸ್ತೆ ಕೂಡ ನಿರ್ಮಾಣ ಮಾಡಿಲ್ಲ. ಇಂಗಳಗಿ ಗ್ರಾಮವನ್ನು ಕಂಪನಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಎಂದು ಕಂಪನಿ ವಿರುದ್ಧ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಮಕ್ಕಳ, ಮಹಿಳೆಯರ ಹಿತದೃಷ್ಟಿಯಿಂದ ಸಚಿವರು ಮುತುವರ್ಜಿ ವಹಿಸಿ ಇಂಗಳಗಿ ಗ್ರಾಮದಿಂದ ವಾಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಹದಗೆಟ್ಟ ರಸ್ತೆ ನಿರ್ಮಾಣ ಮಾಡಬೇಕು ಎಂದು ಪತ್ರದಲ್ಲಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಸಮಿತಿ ಅಧ್ಯಕ್ಷರಾದ ಗೌಸ್ ದುದ್ದನಿ, ಕಾರ್ಯದರ್ಶಿ ಕಾಶೀನಾಥ್ ಚನ್ನಗುಂಡ, ಖಜಾಂಚಿ ಡಾ.ಮೋಹನ ಪವಾರ್, ಡಾ.ಸಾಯಬಣ್ಣಾ ಗುಡುಬಾ, ಚಂದ್ರಕಾಂತ ಹೂಗಾರ್, ವೆಂಕಟಿಗಿರಿ ಕಟ್ಟಿಮನಿ, ನಬಿ ಪಠಾಣ, ಶರಣು ರಾವೂರ, ಶಿವಕುಮಾರ್ ತೆಳಿಗೆರಿ, ಈರಣ್ಣ ನಾಟಿಕಾರ್, ಪ್ರೇಮಕುಮಾರ ರಾಠೋಡ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X