Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಈಶಾನ್ಯ ಶಿಕ್ಷಕರ ಮತದಾರರ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿ ಪರಿಷ್ಕರಣೆ : ಮತದಾರರ ನೋಂದಣಿ ಹೆಚ್ಚಾಗಬೇಕು: ಝಹೀರಾ ನಸೀಮ್

ವಾರ್ತಾಭಾರತಿವಾರ್ತಾಭಾರತಿ17 Oct 2025 9:58 PM IST
share
ಕಲಬುರಗಿ| ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿ ಪರಿಷ್ಕರಣೆ : ಮತದಾರರ ನೋಂದಣಿ ಹೆಚ್ಚಾಗಬೇಕು: ಝಹೀರಾ ನಸೀಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ವಿಭಾಗದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಶಿಕ್ಷಕ ಮತದಾರರು ನೊಂದಣಿಯಾಗುವಂತೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಸೂಚಿಸಿದರು.

ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಳೆದ ಬಾರಿ ಜಿಲ್ಲೆಯಲ್ಲಿ 41 ಮತದಾನ ಕೇಂದ್ರ ಸ್ಥಾಪಿಸಿದ್ದು, 9,529 ಮತದಾರರು ನೊಂದಣಿ ಮಾಡಿಕೊಂಡಿದ್ದರು. ಈ ಬಾರಿ ಮತದಾರರ ಸಂಖ್ಯೆ ಹೆಚ್ಚಾಗಬೇಕು ಎಂದರು.

ಕಲಬುರಗಿ ನಗರದಲ್ಲಿಯೇ ಶೇ.75ರಷ್ಟು ಜಿಲ್ಲೆಯ ಮತದಾರರಿರುವುದರಿಂದ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸಹಾಯಕ ಆಯುಕ್ತರು ಸ್ತಳೀಯರು ಹೆಚ್ಚು ನೋಂದಣಿಯಾಗುವಂತೆ ನೋಡಿಕೊಳ್ಳಬೇಕು. ದಿನದಿಂದ‌ ದಿನಕ್ಕೆ ಶಾಲಾ-ಕಾಲೇಜುಗಳ‌ ಸಂಖ್ಯೆ ಹೆಚ್ಚಿದರಿಂದ ಮತದಾರರ ಸಂಖ್ಯೆ ಸಹ ಹೆಚ್ಚಾಗಬೇಕಲ್ಲವೇ ಎಂದ ಅವರು, ವಿಶೇಷವಾಗಿ ಶಾಲಾ-ಕಾಲೇಜಿಗೆ ಹೋಗಿ ಅ.27 ಮತ್ತು 30 ಹಾಗೂ ನ.3ರಂದು ಮಿಂಚಿನ ನೋಂದಣಿ ಅಭಿಯಾನ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೇವಲ ಪ್ರೌಢ ಶಾಲೆ, ಪಿ.ಯು. ಕಾಲೇಜು, ಪದವಿ ಕಾಲೇಜು ಕೇಂದ್ರಿಕರಿಸದೆ ಡಿ.ಪಿ.ಎ.ಆರ್ ಇಲಾಖೆ ಅಧಿಸೂಚಿಸಿರುವ 12 ವಿಭಾಗದಲ್ಲಿನ ವಿವಿಧ ಶಾಲೆ-ಕಾಲೇಜುಗಳನ್ನು ಸಂಪರ್ಕಿಸಿ ಶಿಕ್ಷಕರಿಂದ ಅರ್ಜಿ ಭರ್ತಿ ಮಾಡಿಸಿಕೊಳ್ಳಬೇಕು. ನರ್ಸಿಂಗ್ ಕಾಲೇಜು, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಸಹ ಹೆಚ್ಚಾಗಿರುವುದರಿಂದ ಈ ಕಡೆಯೂ ಸಹ ಗಮನ ಹರಿಸಬೇಕು ಎಂದ ಅವರು, ಇನ್ನು ಸ್ವೀಕೃತ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕಿರುವುದರಿಂದ ನೋಂದಣಿಗೆ ಕೊನೆ ದಿನವಾದ ನ.6ರ ವರೆಗೆ ಕಾಯದೆ ಕೂಡಲೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಾದ್ಯಂತ ಸರ್ಕಾರಿ , ಅನುದಾನಿತ ಹಾಗೂ ಅನುದಾನರಹಿತ 875 ಪ್ರೌಢ ಶಾಲೆ ಮತ್ತು 268 ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಮತ್ತು ಅನುದಾನಿತ 32 ಪದವಿ ಕಾಲೇಜುಗಲಿದ್ದು, ಡಿ.ಡಿ.ಪಿ.ಐ, ಡಿ.ಡಿ.ಪಿ.ಯು ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಸಂಸ್ಥೆಗಳಲ್ಲಿ ಮತದಾರರ ನೋಂದಣಿಗೆ ಹೆಚ್ಚಿನ ಜವಾಬ್ದಾರಿ ಹೂರಬೇಕು. ತಹಶೀಲ್ದಾರರು, ತಾಲೂಕು ಪಂಚಾಯತ್ ಇ.ಓ ಹಾಗೂ ಬಿ.ಇ.ಓ ಶಾಲಾ-ಕಾಲೇಜಿಗೆ ಭೇಟಿ ನೀಡಿ ನೋಂದಣಿ ಕಾರ್ಯ ಚುರುಕಾಗುವಂತೆ‌ ನೋಡಿಕೊಳ್ಳಬೇಕು. ನರ್ಸಿಂಗ್, ಮೆಡಿಕಲ್ ಕಾಲೇಜಿಗೆ ಪಿ.ಡಿ.ಓ ಗಳನ್ನು ನೋಡಲ್ ಅಧಿಕಾರಿಯನ್ನಾಗಿಸಿ ನೇಮಿಸಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ‌ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಹಾಯಕ ಆಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ, ಜಿಲ್ಲಾ‌ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಣ್ಮಣ ಶೃಂಗೇರಿ, ಡಿ.ಡಿ.ಪಿ.ಯ ಸೂರ್ಯಕಾಂತ ಮದಾನೆ, ಡಿ.ಡಿ.ಪಿ.ಯು ಸುರೇಶ ಅಕ್ಕಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಂದ್ರ ಶಿಂಧೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ ದೌಲಾ ಸೇರಿದಂತೆ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ್ ಇ.ಓ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X