Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೃದ್ರೋಗಿಗಳಿಗೆ ರೋಬೋಟಿಕ್...

ಕಲಬುರಗಿ | ಹೃದ್ರೋಗಿಗಳಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ20 Sept 2026 7:12 PM IST
share
ಕಲಬುರಗಿ | ಹೃದ್ರೋಗಿಗಳಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ

ಕಲಬುರಗಿ: ಹೃದಯ ರೋಗಿಗಳಿಗೆ ಸಾಂಪ್ರದಾಯಿಕ ಓಪನ್‌ಹಾರ್ಟ್ ಶಸ್ತ್ರಚಿಕಿತ್ಸೆಯ ಬದಲಾಗಿ, ಸೂಕ್ತ ರೋಗಿಗಳಲ್ಲಿ ಮಿನಿಮಲಿ ಇನ್ವೇಸಿವ್ ಹಾಗೂ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆಯಂತಹ ಆಧುನಿಕ ವಿಧಾನಗಳನ್ನು ಬಳಸಬಹುದಾಗಿದೆ ಎಂದು ಸಿಕಂದರಾಬಾದ್‌ನ ಯಶೋದಾ ಆಸ್ಪತ್ರೆಯ ಕಾರ್ಡಿಯೊಥೋರಾಸಿಕ್ ಶಸ್ತ್ರಚಿಕಿತ್ಸಕ ಡಾ. ವಿಶಾಲ್ ಖಾಂಟೆ ಹಾಗೂ ಕನ್ಸಲ್ಟೆಂಟ್ ಕಾರ್ಡಿಯೊಥೋರಾಸಿಕ್ ಶಸ್ತ್ರಚಿಕಿತ್ಸಕ ಡಾ. ಮುಹಮ್ಮದ್ ವಹಾಜ್ ಅಲಿ ತಿಳಿಸಿದರು.

ಯಶೋದಾ ಆಸ್ಪತ್ರೆಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಿನಿಮಲಿ ಇನ್ವೇಸಿವ್ ಕಾರ್ಡಿಯಾಕ್ ಸರ್ಜರಿ (MICS) ಹಾಗೂ ರೋಬೋಟಿಕ್ ಕಾರ್ಡಿಯಾಕ್ ಸರ್ಜರಿಯ ಆಧುನಿಕ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಸಾಂಪ್ರದಾಯಿಕ ಓಪನ್‌ಹಾರ್ಟ್ ಶಸ್ತ್ರಚಿಕಿತ್ಸೆಯಲ್ಲಿ ಎದೆಮೂಳೆಯನ್ನು ಕತ್ತರಿಸುವ ಸ್ಟರ್ನೋಟಮಿ ಅಗತ್ಯವಾಗುತ್ತದೆ. ಆದರೆ ಮಿನಿಮಲಿ ಇನ್ವೇಸಿವ್ ಶಸ್ತ್ರಚಿಕಿತ್ಸೆಯಲ್ಲಿ ಪಕ್ಕೆಲುಬುಗಳ ನಡುವಿನ ಸಣ್ಣ ಛೇದನಗಳ ಮೂಲಕ ಹಾಗೂ ಕೀಹೋಲ್ ವಿಧಾನದಲ್ಲಿ ಸಂಕೀರ್ಣ ಹೃದಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಸಾಧ್ಯವಿದೆ ಎಂದು ವೈದ್ಯರು ವಿವರಿಸಿದರು.

ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಹೈ-ಡೆಫಿನಿಷನ್ 3D ದೃಶ್ಯೀಕರಣ ಹಾಗೂ ರೋಬೋಟಿಕ್ ಆರ್ಮ್‌ಗಳ ನೆರವಿನಿಂದ ಶಸ್ತ್ರಚಿಕಿತ್ಸಕರಿಗೆ ಹೆಚ್ಚಿನ ನಿಖರತೆ ಮತ್ತು ನಿಯಂತ್ರಣ ದೊರೆಯುತ್ತದೆ. ಆಧುನಿಕ ಮಿನಿಮಲಿ ಇನ್ವೇಸಿವ್ ಹಾಗೂ ರೋಬೋಟಿಕ್ ವಿಧಾನಗಳು ಸೂಕ್ತ ರೋಗಿಗಳಲ್ಲಿ ಕಡಿಮೆ ಆಘಾತದೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲು ನೆರವಾಗುತ್ತವೆ ಎಂದು ಡಾ. ವಿಶಾಲ್ ಖಾಂಟೆ ಹೇಳಿದರು.

ಇಂತಹ ವಿಧಾನಗಳಿಂದ ಶಸ್ತ್ರಚಿಕಿತ್ಸೆಯ ನಂತರದ ನೋವು, ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ಕಡಿಮೆಯಾಗುವ ಸಾಧ್ಯತೆಯಿದ್ದು, ಗಾಯದ ಗುರುತು ಕೂಡ ಕಡಿಮೆ ಕಾಣಿಸಿಕೊಳ್ಳಬಹುದು. ರೋಗಿಗಳು ಶೀಘ್ರ ಚೇತರಿಸಿಕೊಂಡು ತಮ್ಮ ದೈನಂದಿನ ಚಟುವಟಿಕೆಗಳಿಗೆ ಮರಳಲು ಸಹಕಾರಿಯಾಗಬಹುದು ಎಂದು ತಿಳಿಸಿದರು.

ಸೂಕ್ತ ರೋಗಿಗಳಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ, ಹೃದಯದ ಕವಾಟಗಳ ದುರಸ್ತಿ ಹಾಗೂ ಕೆಲವು ಜನ್ಮಜಾತ ಹೃದಯ ದೋಷಗಳ ಚಿಕಿತ್ಸೆಯಲ್ಲಿಯೂ ಮಿನಿಮಲಿ ಇನ್ವೇಸಿವ್ ಮತ್ತು ರೋಬೋಟಿಕ್ ವಿಧಾನಗಳನ್ನು ಬಳಸಬಹುದಾಗಿದೆ ಎಂದು ಡಾ. ಮುಹಮ್ಮದ್ ವಹಾಜ್ ಅಲಿ ಹೇಳಿದರು.

ಈ ಸಂದರ್ಭದಲ್ಲಿ ಮಿನಿಮಲಿ ಇನ್ವೇಸಿವ್ ಕಾರ್ಡಿಯಾಕ್ ಸರ್ಜರಿಗೆ ಒಂದು ವಾರದ ಹಿಂದೆ ಒಳಗಾಗಿದ್ದ ಒಬ್ಬರು ಹಾಗೂ ಒಂದು ತಿಂಗಳ ಹಿಂದೆ ರೋಬೋಟಿಕ್ ಕಾರ್ಡಿಯಾಕ್ ಸರ್ಜರಿಗೆ ಒಳಗಾಗಿದ್ದ ಮತ್ತೊಬ್ಬ ರೋಗಿ ತಮ್ಮ ಚಿಕಿತ್ಸೆಯ ಅನುಭವವನ್ನು ಹಂಚಿಕೊಂಡರು. ಇಬ್ಬರೂ ಚೇತರಿಸಿಕೊಂಡಿರುವುದಾಗಿ ತಿಳಿಸಿದರು.

ಯಶೋದಾ ಆಸ್ಪತ್ರೆಗಳಲ್ಲಿ ಕಾರ್ಡಿಯಾಕ್ ಸೈನ್ಸಸ್, ಹೃದಯ ಕಸಿ ಹಾಗೂ ರೋಬೋಟಿಕ್ ಚಿಕಿತ್ಸೆಯಂತಹ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಆಧುನಿಕ ಡಯಾಗ್ನೋಸ್ಟಿಕ್ ಸೌಲಭ್ಯಗಳು, ಸುಸಜ್ಜಿತ ಆಪರೇಷನ್ ಥಿಯೇಟರ್‌ಗಳು ಹಾಗೂ ಸುಧಾರಿತ ಕ್ರಿಟಿಕಲ್ ಕೇರ್ ಘಟಕಗಳ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ವೈದ್ಯರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೇಶವ್ ಕುಲಕರ್ಣಿ, ಸತೀಶ ಮಂಟಗಿ ಉಪಸ್ಥಿತರಿದ್ದರು.

Tags

KalaburagiRoboticheart surgery
share
ವಾರ್ತಾಭಾರತಿ
ವಾರ್ತಾಭಾರತಿ
Next Story
X