ಕಲಬುರಗಿ| ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ

ಸೇಡಂ: ತಾಲೂಕಿನ ಜಾಕನಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಆಶಪ್ಪ ತಂದೆ ನರಸಪ್ಪ ಅವರ ಕುಟುಂಬಕ್ಕೆ ತಾಲೂಕು ಆಡಳಿತದ ವತಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿತರಿಸಿದರು.
ಪರಿಹಾರ ಚೆಕ್ ಹಸ್ತಾಂತರಿಸಿದ ಬಳಿಕ ಮಾತನಾಡಿದ ಡಾ. ಶರಣಪ್ರಕಾಶ್ ಪಾಟೀಲ್, ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚು ಎಚ್ಚರಿಕೆ ವಹಿಸಬೇಕು. ಮಳೆ, ಗುಡುಗು ಹಾಗೂ ಸಿಡಿಲಿನ ಸಂದರ್ಭಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ ಹೊಲ–ಗದ್ದೆಗಳಿಗೆ ತೆರಳಬೇಕು ಎಂದು ಸಲಹೆ ನೀಡಿದರು.
ಮೃತ ರೈತ ಆಶಪ್ಪ ಅವರ ಪತ್ನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದ ಸಚಿವರು, ಕುಟುಂಬದ ದುಃಖದಲ್ಲಿ ಸರಕಾರ ಸದಾ ಜೊತೆಗಿದ್ದು ಅಗತ್ಯ ಸಹಕಾರ ನೀಡಲಾಗುವುದು ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೇಯಾಂಕ ಧನಶ್ರಿ, ಸ್ಥಳೀಯ ಮುಖಂಡರು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Next Story




