Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ‘ಸಣ್ಣಗೌಡಸಾನಿ’ ನಾಟಕ...

Kalaburagi | ‘ಸಣ್ಣಗೌಡಸಾನಿ’ ನಾಟಕ ಆ.10, 11ರಂದು ಪ್ರದರ್ಶನ : ಡಾ.ಸುಜಾತ ಜಂಗಮಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ8 Aug 2026 10:27 PM IST
share
Kalaburagi | ‘ಸಣ್ಣಗೌಡಸಾನಿ’ ನಾಟಕ ಆ.10, 11ರಂದು ಪ್ರದರ್ಶನ : ಡಾ.ಸುಜಾತ ಜಂಗಮಶೆಟ್ಟಿ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಂಗಾಯಣ ಕಲಬುರಗಿ ಸಹಯೋಗದಲ್ಲಿ ನಾಡೋಜ ಡಾ. ಶಾಂತರಸ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಸಣ್ಣಗೌಡಸಾನಿ’ ನಾಟಕವು ಆ.10 ಮತ್ತು 11ರಂದು ಸಂಜೆ 6 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ. ಸುಜಾತ ಜಂಗಮಶೆಟ್ಟಿ ತಿಳಿಸಿದರು.

ನಗರದ ರಂಗಾಯಣದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಂಗಾಯಣದ ರೆಪರ್ಟರಿ ಕಲಾವಿದರು ನಾಟಕವನ್ನು ಪ್ರದರ್ಶಿಸಲಿದ್ದಾರೆ. ಮಾಹಿತಿ ಆಯೋಗದ ಅಧ್ಯಕ್ಷ ಬಿ. ವೆಂಕಟ ಸಿಂಗ್ ಅವರು ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಬಾಗಲಕೋಟೆ ರಂಗಸಮಾಜದ ಸದಸ್ಯ ಮಹಾಂತೇಶ ಎಂ. ಗಜೇಂದ್ರಗಡ ಹಾಗೂ ‘ಕನ್ನಡಪ್ರಭ’ ವರದಿಗಾರ ಶೇಷಮೂರ್ತಿ ಅವಧಾನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

‘ಸಣ್ಣಗೌಡಸಾನಿ’ ನಾಟಕದ ರಂಗಗೀತೆಗಳು ಹಾಗೂ ಶಾಂತರಸರ ಗಜಲ್‌ಗಳನ್ನು ಧಾರವಾಡದ ರಾಘವ ಕಮ್ಮಾರ ಮತ್ತು ತಂಡ ಗಾಯನ ರೂಪದಲ್ಲಿ ಪ್ರಸ್ತುತಪಡಿಸಲಿದೆ. ರಂಗಸಜ್ಜಿಕೆ ಹಾಗೂ ರಂಗಪರಿಕರಗಳ ಜವಾಬ್ದಾರಿಯನ್ನು ರಾಜಕುಮಾರ್ ಎಸ್.ಕೆ. ವಹಿಸಿದ್ದು, ಬೆಳಕು ಹಾಗೂ ಸಹ ನಿರ್ದೇಶನವನ್ನು ಶ್ರೀನಿವಾಸ ದೋರನಹಳ್ಳಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ನಾಟಕದ ರಂಗಪಠ್ಯ, ವಸ್ತು ವಿನ್ಯಾಸ ಹಾಗೂ ನಿರ್ದೇಶನವನ್ನು ಪ್ರವೀಣ ರೆಡ್ಡಿ ಗುಂಜನಹಳ್ಳಿ ನಿರ್ವಹಿಸಿದ್ದಾರೆ. ನಾಟಕದ ಮೂಲಕ ಶಾಂತರಸರ ಸಾಹಿತ್ಯ ಹಾಗೂ ರಂಗಭೂಮಿಯ ಸೊಗಡನ್ನು ಪ್ರೇಕ್ಷಕರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ‘ಸಣ್ಣಗೌಡಸಾನಿ’ ನಾಟಕದ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಂಗಾಯಣದ ಆಡಳಿತಾಧಿಕಾರಿ ಸಿದ್ಧರಾಮ ಶಿಂಧೆ, ಮಹಾಂತೇಶ ನವಲಕಲ್, ಪ್ರವೀಣ ರೆಡ್ಡಿ ಗುಂಜನಹಳ್ಳಿ, ರಾಘವ ಕಮ್ಮಾರ, ಅಮರನಾಥ ಇರ್ಕಲ್ ಸೇರಿದಂತೆ ರಂಗಾಯಣದ ಸಿಬ್ಬಂದಿ ಹಾಗೂ ಕಲಾವಿದರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X