Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶಾಲಾ ಕಟ್ಟಡ, ರಸ್ತೆ...

ಕಲಬುರಗಿ | ಶಾಲಾ ಕಟ್ಟಡ, ರಸ್ತೆ ಕಾಮಗಾರಿಗಳಿಗೆ ಶಾಸಕ ಬಿ.ಆರ್.ಪಾಟೀಲ್‌ ಅವರಿಂದ ಚಾಲನೆ

ಆದ್ಯತೆಯ ಮೇರೆಗೆ ಸ್ವಯಂ ಪ್ರೇರಿತ ಕಾಮಗಾರಿಗಳಿಗೆ ಒತ್ತು: ಬಿ.ಆರ್.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 April 2025 8:32 PM IST
share
ಕಲಬುರಗಿ | ಶಾಲಾ ಕಟ್ಟಡ, ರಸ್ತೆ ಕಾಮಗಾರಿಗಳಿಗೆ ಶಾಸಕ ಬಿ.ಆರ್.ಪಾಟೀಲ್‌ ಅವರಿಂದ ಚಾಲನೆ

ಕಲಬುರಗಿ : ಆಳಂದ ತಾಲೂಕಿನ ವಿವಿಧ ಗ್ರಾಮಗಳ ಸಂಪರ್ಕ ರಸ್ತೆ ಹಾಗೂ ಶಾಲಾ ಕಟ್ಟಡ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ರಾಜ್ಯದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್‌ ಅವರು ಮೂರು ದಿನಗಳಿಂದ ಸರಣಿ ಚಾಲನೆ ನೀಡುವುದರೊಂದಿಗೆ ಕ್ಷೇತ್ರದಲ್ಲಿ ಬೇಸಿಗೆ ನೀರು ಸೇರಿ ಮೂಲಸೌಲಭ್ಯಗಳ ಸಮಸ್ಯೆಗಳನ್ನು ಆಲಿಸಿ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಆಳಂದ ತಾಲೂಕಿನ ತುಗಾಂವ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅಕ್ಷರ ಅವಿಸ್ಕಾರ ಯೋಜನೆ ಅಡಿಯಲ್ಲಿ 56 ಲಕ್ಷ ರೂ. ಅನುದಾನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಗುದ್ದಲಿ ಪೂಜೆಯನ್ನು ಶಾಸಕರು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ತಾಪಂ ಮಾಜಿ ಉಪಾಧ್ಯಕ್ಷ ಗುರುನಾಥ ಪಾಟೀಲ, ಕುರುಬ ಸಮಾಜ ಮುಖಂಡ ತುಕಾರಾಮ ವಗ್ಗೆ, ಸಿದ್ಧುಗೌಡ ಪಾಟೀಲ ಮಗಿ, ಈರಣ್ಣಾ ಹತ್ತರಕಿ, ಗುತ್ತಿಗೆದಾರ ದಯಾನಂದ ಚೌಲ ಸೇರಿದಂತೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಶಾಸಕರು ಸ್ವಗ್ರಾಮ ಸರಸಂಬಾ ಗ್ರಾಮದಿಂದ ಚಿಂಚೋಳಿ ಕೆ. ಗ್ರಾಮದ ವರೆಗೆ ಕಲ್ಯಾಣ ಪಥ, ಪಿಎಂಜಿಎಸ್‌ವೈ ಯೋಜನೆ ಅಡಿಯಲ್ಲಿ 1.85 ಕೋಟಿ ರೂ. ವೆಚ್ಚದಲ್ಲಿ ಹಾಗೂ ಸರಸಂಬಾ ಗ್ರಾಮದಿಂದ ಮಾಹಾರಾಷ್ಟ್ರದ ಗೋಗಾಂವ ಬಾರ್ಡರ್ ವರೆಗೆ 2.19 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಗುದ್ದಲಿ ಪೂಜೆ ನೆರವೇರಸಿದರು.

ನಿಂಬರಗಾ ವಲಯದ ಮಾಡಿಯಾಳ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅಕ್ಷರ ಅವಿಸ್ಕಾರ ಯೋಜನೆ ಅಡಿಯಲ್ಲಿ 75 ಲಕ್ಷ ರೂ. ಅನುದಾನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ಮಾಡಿಯಾಳ ಕ್ರಾಸ್ ದಿಂದ ಜವಳಿ ಡಿ ಗ್ರಾಮದ ವರೆಗೆ ಕಲ್ಯಾಣ ಪಥ, ಪಿಎಂಜಿಎಸ್‌ವೈ ಯೋಜನೆ ಅಡಿಯಲ್ಲಿ 5.6 ಕೋಟಿ ರೂ. ವೆಚ್ಚದಲ್ಲಿ ಡಾಂಬರಿಕರಣ ರಸ್ತೆ ಗುದ್ದಲಿ ಪೂಜೆ ನೇರವೇರಿಸಿದ್ದರು.

ಬಳಿಕ ಕುಡಕಿ ಗ್ರಾಮದ ಕೆ.ಕೆ.ಆರ್.ಡಿ.ಬಿ ಅಕ್ಷರ ಅವಿಸ್ಕಾರ ಯೋಜನೆ ಅಡಿಯಲ್ಲಿ 75 ಲಕ್ಷ ರೂ. ಅನುದಾನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಗುದ್ದಲಿ ಪೂಜೆ ನೇರವೇರಸಿ ಗುಣಪಟ್ಟದ ಕಾಮಗಾರಿ ಕೈಗೊಂಡು ಸಕಾಲಕ್ಕೆ ಕೋಣೆಗಳು ನಿಮಿಸುವಂತಾಗಬೇಕು ಎಂದು ಕಾಮಗಾರಿ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಮುನ್ನದಿನ ಕಡಗಂಚಿ, ನರೋಣಾ ಮುಖ್ಯರಸ್ತೆಯಿಂದ ಗೋಳಾ ಬಿ. ಗ್ರಾಮದ ವರೆಗೆ ಕಲ್ಯಾಣ ಪಥ, ಪಿಎಂಜಿಎಸ್‌ವೈ ಯೋಜನೆ ಅಡಿಯಲ್ಲಿ 3.22 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಗುದ್ದಲಿ ಪೂಜೆ ನೆರವೇರಸಿ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಉತ್ತಮ ರಸ್ತೆ ನಿರ್ಮಾಣವಾಗಬೇಕು ಕಾಮಗಾರಿಗೆ ಸ್ಥಳೀಯ ನಿಗಾವಹಿಸಬೇಕು ಎಂದು ಹೇಳಿದರು.

ಕಿಣ್ಣಿಸುಲ್ತಾನ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕಿಣ್ಣಿಸುಲ್ತಾನ್ ತೊಗರಿ ಖರೀದಿ ಕೇಂದ್ರಕ್ಕೆ ಶಾಸಕರು ಚಾಲನೆ ನೀಡಿ, ತೊಗರಿ ಖರೀದಿಯಿಂದ ರೈತರಿಗೆ ಅನುಕೂಲವಾಗಲಿದೆ ಸರಣಿಯಂತೆ ಹೆಸರು ನೋಂದಾಯಿಸಿ ತೊಗರಿ ಮಾರಾಟ ಮಾಡಬೇಕು ಹಾಗೂ ಖರೀದಿ ಮತ್ತು ತೂಕದಲ್ಲಿ ಯಾವುದೇ ಸಮಸ್ಯೆಯಾಗದಂತೆ ಸಂಘದವರು ನೋಡಿಕೊಂಡು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಬಳಿಕ ಕಿಣ್ಣಿಸುಲ್ತಾನ್ ಗ್ರಾಮದಿಂದ ಹೊನ್ನಳ್ಳಿ ಗ್ರಾಮದ ವರೆಗೆ ಕಲ್ಯಾಣ ಪಥ, ಪಿಎಂಜಿಎಸ್‌ವೈ ಯೋಜನೆ ಅಡಿಯಲ್ಲಿ 3.14 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಹಾಗೂ 25 ಲಕ್ಷ ರೂ. ವೆಚ್ಚದಲ್ಲಿ "ನಮ್ಮ ಹೊಲ ನಮ್ಮ ರಸ್ತೆ" ಕಾಂಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ, ಸೇರಿದಂತೆ ಗ್ರಾಮ ಪಂಚಾಯತ್, ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಮುನ್ನಹಳ್ಳಿ ಗ್ರಾಮದಿಂದ ಬಸವನಸಂಗೋಳಗಿ ಗ್ರಾಮದ ವರೆಗೆ ಕಲ್ಯಾಣ ಪಥ, ಪಿಎಂಜಿಎಸ್‌ವೈ ಯೋಜನೆ ಅಡಿಯಲ್ಲಿ 3.99 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಗುದ್ದಲಿ ಪೂಜೆ ನೆರವೇರಿಸಿ, ಬಸವಣ್ಣ ಸಂಗೋಳಗಿ ಗ್ರಾಮದ ಹದಗೇಟ ರಸ್ತೆ ನಿರ್ಮಾಣ ಉತ್ತಮಕಾರ್ಯ ಕೈಗೊಂಡು ಸಂಚಾರಕ್ಕೆ ಅನುಕೂಲ ಒದಗಿಸಬೇಕು ಎಂದು ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ದರ್ಗಾಶಿರೂರ್ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅಕ್ಷರ ಅವಿಸ್ಕಾರ ಯೋಜನೆ ಅಡಿಯಲ್ಲಿ 1 ಕೋಟಿ ರೂ. ಅನುದಾನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ಕೆರೂರ ಗ್ರಾಮದಲ್ಲಿ 78 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಶಾಲಾ ಕೋಣೆಗಳ ನಿರ್ಮಾಣ ಮತ್ತು ನಿಂಬಾಳ ಗ್ರಾಮದಲ್ಲಿ 50 ಲಕ್ಷ ರೂ.ಗಳಲ್ಲಿ ಮೂರು ಶಾಲಾ ಕೋಣೆ ನಿರ್ಮಾಣಕ್ಕೆ ಶಾಸಕರು ಗುದ್ದಲಿ ಪೂಜೆ ನೇರವೇರಸಿದರು.

ಆಯಾ ಗ್ರಾಮಗಳ ಕಾಮಗಾರಿ ಪೂಜೆಯಲ್ಲಿ ಸ್ಥಳೀಯ ಗ್ರಾಪಂ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಸರ್ಕಾರಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ ಮತ್ತಿತರರ ಗಣ್ಯರು ಭಾಗವಹಿಸಿದ್ದರು.

ತುರ್ತು ಕೆಲಸಕ್ಕೆ ಮೊದಲಾದ್ಯತೆ :

ನಾನು ಕಚೇರಿಯಲ್ಲಿ ಅಥವಾ ಮನೆಯಲ್ಲಿ ಕುಳಿತು ಸಮಸ್ಯೆ ಪಟ್ಟಿಮಾಡಿದವನ್ನಲ್ಲ. ಹಳ್ಳಿಗಳಿಗೆ ನಿರಂತರ ಓಡಾಟ ಎಂದಿನಂತೆ ಇದ್ದುದ್ದೆ. ಹೀಗಾಗಿ ಕ್ಷೇತ್ರದಲ್ಲಿನ ಎಲ್ಲ ರೀತಿಯ ಸಮಸ್ಯೆಗಳ ಅರಿವಿದೆ. ಜನರ ಬೇಡಿಕೆ ಮತ್ತು ತುರ್ತು ಅಗತ್ಯತೆಯನ್ನು ಎರಡೂ ಕ್ರೂಢಿಕರಿಸಿ ಅನುದಾನ ಬಂದಂತೆ ಕಾಮಗಾರಿಗಳನ್ನು ಸ್ವಯಂ ಪ್ರೇರಿತವಾಗಿ ಮಂಜೂರಾತಿಗೊಳಿಸಿ ಚಾಲನೆ ನೀಡಲಾಗುತ್ತಿದೆ. ಈ ಅವಧಿಯಲ್ಲಿ ಹೆಚ್ಚಿನ ಅನುದಾನ ತಂದು ಶಾಲೆ, ರಸ್ತೆ, ನೀರಾವರಿ ಕಾಮಗಾರಿಗಳಿಗೆ ಪ್ರಯತ್ನಿಸಲಾಗುತ್ತಿದೆ. ಸದ್ಯ ಬೇಸಿಗೆ ನೀರಿನ ಬವಣೆ ನಿವಾರಿಸಬೇಕಾಗಿದೆ ಇಂಥ ಕೆಲಸಕ್ಕೆ ಜನರ ಸಹಕಾರ ಅಗತ್ಯವಾಗಿದೆ.

- ಬಿ.ಆರ್. ಪಾಟೀಲ್‌, ಶಾಸಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X