Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಸೆಪ್ಸಿಸ್ ಸೋಂಕು ಮೂಕ...

ಕಲಬುರಗಿ| ಸೆಪ್ಸಿಸ್ ಸೋಂಕು ಮೂಕ ಕೊಲೆಗಾರ: ಡಾ.ಶರಣಬಸಪ್ಪ ಹರವಾಳ

ವಾರ್ತಾಭಾರತಿವಾರ್ತಾಭಾರತಿ15 Dec 2025 11:18 PM IST
share
ಕಲಬುರಗಿ| ಸೆಪ್ಸಿಸ್ ಸೋಂಕು ಮೂಕ ಕೊಲೆಗಾರ: ಡಾ.ಶರಣಬಸಪ್ಪ ಹರವಾಳ

ಕಲಬುರಗಿ: ಸೆಪ್ಸಿಸ್ ಎಂದರೆ ನಿಮ್ಮ ದೇಹದ ಅತಿಯಾದ ಮತ್ತು ಜೀವಕ್ಕೆ ಅಪಾಯಕಾರಿಯಾದ ಪ್ರತಿಕ್ರಿಯೆಯಾಗಿದ್ದು, ಇದು ಸೋಂಕಿನಿಂದ ಉಂಟಾಗುತ್ತದೆ. ಇದನ್ನು ಮೂಕ ಕೊಲೆಗಾರ ಎಂದು ಕರೆಯಲಾಗುತ್ತದೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ.ಶರಣಬಸಪ್ಪ ಹರವಾಳ ಹೇಳಿದರು.

ಅವರು ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿದ ಮೈಕ್ರೋಬಾಯಲಾಜಿ ವಿಭಾಗದಿಂದ ಜರುಗಿದ "ಸೆಪ್ಸಿಸ್ ಊಹಿಸಬೇಡಿ, ಪತ್ತೆಮಾಡಿ" ವಿಷಯದ ಕುರಿತು ಜರುಗಿದ ಸಿ ಎಮ್ ಇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಶರಣಬಸಪ್ಪ ಹರವಾಳ, ಇದು ಹೆಚ್ಚಿನ ಜನರಿಗೆ ತುಂಬಾ ಪರಿಚಿತವಲ್ಲದಿರಬಹುದು, ಆದರೆ ವಾಸ್ತವವಾಗಿ ಇದು ನಮ್ಮಿಂದ ದೂರವಿಲ್ಲ. ಗಂಭೀರ ಕಾಯಿಲೆಯಾಗಿ, ಸೆಪ್ಸಿಸ್‌ನ ಅನಾರೋಗ್ಯ ಮತ್ತು ಮರಣ ಪ್ರಮಾಣವು ಹೆಚ್ಚಾಗಿರುತ್ತದೆ. ಪ್ರತಿ ವರ್ಷ ವಿಶ್ವಾದಾದ್ಯಂತ ಸುಮಾರು 20 ರಿಂದ 30 ಮಿಲಿಯನ್ ಸೆಪ್ಸಿಸ್ ಪ್ರಕರಣಗಳು ಕಂಡುಬರುತ್ತವೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದರು.

ಗೌರವ ಅತಿಥಿಗಳಾಗಿದ್ದ ಬಸವೇಶ್ವರ ಆಸ್ಪತ್ರೆಯ ಸಂಚಾಲಕ ಡಾ.ಕಿರಣ್ ದೇಶಮುಖ್ ಮಾತನಾಡಿ, ಸೆಪ್ಸಿಸ್ ಚಿಕಿತ್ಸೆಯಲ್ಲಿ ಸಮಯವು ಅತ್ಯಗತ್ಯ ಮತ್ತು ಸೆಪ್ಸಿಸ್‌ನ ಆರಂಭಿಕ ಗುರುತಿಸುವಿಕೆ ಚಿಕಿತ್ಸೆಯ ಅತ್ಯಂತ ನಿರ್ಣಾಯಕ ಭಾಗವಾಗಿದೆ. ಇತ್ತೀಚೆಗೆ ಬ್ಯಾಕ್ಟೀರಿಯಾದ ಸೋಂಕಿನ ಆರಂಭಿಕ ರೋಗನಿರ್ಣಯಕ್ಕೆ ಹೆಪಾರಿನ್-ಬೈಂಡಿಂಗ್ ಪ್ರೋಟೀನ್ (HBP) ಉದಯೋನ್ಮುಖ ಗುರುತುಗಳಲ್ಲಿ ಒಂದಾಗಿದೆ ಎಂದು ಸಾಬೀತಾಗಿದೆ. ಇದು ವೈದ್ಯರು ಸೆಪ್ಸಿಸ್ ರೋಗಿಗಳನ್ನು ಸಾಧ್ಯವಾದಷ್ಟು ಬೇಗ ಪತ್ತೆಹಚ್ಚಲು ಮತ್ತು ಚಿಕಿತ್ಸೆಯ ಪರಿಣಾಮಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ವೇದಿಕೆಯ ಮೇಲೆ ವೈದ್ಯಕೀಯ ಆಡಳಿತ ಮಂಡಳಿ ಸದಸ್ಯರಾದ ಡಾ ಗುರುಲಿಂಗಪ್ಪ ಪಾಟೀಲ್, ಮಹಾವಿದ್ಯಾಲಯದ ಡೀನ್ ಡಾ.ಶರಣಗೌಡ ಪಾಟೀಲ್, ನಿರ್ದೇಶಕರಾದ ಡಾ.ಮಲ್ಲಿಕಾರ್ಜುನ ಬಂಡಾರ, ವೈಸ್ ಡೀನ್ ಡಾ.ವಿಜಯಕುಮಾರ್ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕರಾದ ಡಾ.ಮಲ್ಲಿಕಾರ್ಜುನ ತೇಗನೂರ, ಡಾ.ಗಿರಿಧರ ಹಾವನೂರು, ಡಾ ಶಿಲ್ಪಾ ಪ್ರಧಾನ್, ಡಾ.ಬಸವರಾಜ ಪಾಟೀಲ್, ಶಿಬಾ ಪರ್ವೀನ್, ಶರಣಮ್ಮ ಬಿರಾದಾರ್‌ ಉಪಸ್ಥಿತರಿದ್ದರು.

ಡಾ.ಪರಮೇಶ್‌ ಬಿರಾದಾರ್‌ ಸ್ವಾಗತಿಸಿದರು. ಡಾ.ಉಡಚಾಣ ಕಾರ್ಯಕ್ರಮ ನಿರೂಪಿಸಿದರು, ಡಾ.ಪ್ರೀತಿ ಹುಗ್ಗಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X