Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಐಐಟಿಗಳಲ್ಲಿ ಐದು ವಾರಗಳ...

ಕಲಬುರಗಿ | ಐಐಟಿಗಳಲ್ಲಿ ಐದು ವಾರಗಳ ತರಬೇತಿಗೆ ಶರಣಬಸವ ವಿವಿಯ ಏಳು ಅಧ್ಯಾಪಕರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ25 Jun 2025 9:28 PM IST
share
ಕಲಬುರಗಿ | ಐಐಟಿಗಳಲ್ಲಿ ಐದು ವಾರಗಳ ತರಬೇತಿಗೆ ಶರಣಬಸವ ವಿವಿಯ ಏಳು ಅಧ್ಯಾಪಕರು ಆಯ್ಕೆ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ (ಸಹ-ಶಿಕ್ಷಣ) (ಅಪ್ಪಾ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ) ನಿಕಾಯದ ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗಗಳ ಏಳು ಅಧ್ಯಾಪಕರು ಬಾಂಬೆ ಮತ್ತು ಕಾನ್ಪುರದಲ್ಲಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಗಳಲ್ಲಿ ಸೆಂಟರ್ ಫಾರ್ ಇಂಜಿನಿಯರಿಂಗ್ ಎಜುಕೇಶನ್ ಎಕ್ಸಲೆನ್ಸ್ (ಸಿಇಇಇ) ಅಡಿಯಲ್ಲಿ ಐದು ವಾರಗಳ ಮುಂದುವರಿದ ಶಿಕ್ಷಣ ಮತ್ತು ನವೀನ ಬೋಧನಾ ಕಲಿಕೆಗೆ ಆಯ್ಕೆಯಾಗಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಇಂಜಿನಿಯರಿಂಗ್ (ಸಹ-ಶಿಕ್ಷಣ) ನಿಕಾಯದ ಡೀನ್ ಪ್ರೊ.ಶಿವಕುಮಾರ ಜವಳಿಗಿ ಅವರು, ಸಿಇಇಇಯಿಂದ ಬಂದ ಪತ್ರಿಕಾ ಪ್ರಕಟಣೆಯಲ್ಲಿ, ಎಐಸಿಟಿಇ ಬೆಂಬಲಿತ ಈ ಉನ್ನತ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆಯಾದ ಏಳು ಅಧ್ಯಾಪಕರಲ್ಲಿ ಮೆಕ್ಯಾನಿಕಲ್ ವಿಭಾಗದ ಐದು ಅಧ್ಯಾಪಕರಾದ, ವಿಭಾಗದ ಮುಖ್ಯಸ್ಥ ಡಾ.ಶರಣ್ ಶೇಗೇದಾರ, ಡಾ.ಶಿವಕುಮಾರ ರಾಚೋಟಿ, ಡಾ.ಸಂತೋಷ್ ಬಳಗಾರ, ಪ್ರೊ.ಪ್ರಶಾಂತ್ ಮೂಲಗೆ ಮತ್ತು ಪ್ರೊ.ಶರಣಕುಮಾರ ಬಿ. ಐಐಟಿ ಕಾನ್ಪುರದಲ್ಲಿ ತರಬೇತಿ ಪಡೆಯಲಿದ್ದು, ಅದೇ ಪ್ರಕಾರ ಸಿವಿಲ್ ವಿಭಾಗದ ಇಬ್ಬರು ಅಧ್ಯಾಪಕರಾದ ಡಾ.ಗಜೇಂದ್ರ ಎಚ್. ಮತ್ತು ಪ್ರೊ.ಚಂದ್ರಕಾಂತ ಐಐಟಿ ಬಾಂಬೆಯಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಆಯ್ಕೆಯಾದ ಪ್ರತಿಯೊಬ್ಬ ಅಧ್ಯಾಪಕರಿಗೆ ಪ್ರಯಾಣ, ವಾಸ್ತವ್ಯ ಮತ್ತು ದೈನಂದಿನ ಭತ್ಯೆಯನ್ನು ಭರಿಸಲು 50,000 ರೂ. ಮೊತ್ತವನ್ನು ಸ್ಟೈಫಂಡ್ ರೂಪದಲ್ಲಿ ಮಂಜೂರು ಮಾಡಲಾಗಿದೆ. ಮೆಕ್ಯಾನಿಕಲ್ ವಿಭಾಗದ ಐದು ಅಧ್ಯಾಪಕರು ಮೆಕ್ಯಾನಿಕಲ್, ಏರೋಸ್ಪೇಸ್ ಮತ್ತು ಇಂಧನ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ತರಬೇತಿ ಮತ್ತು ಕೌಶಲ್ಯವರ್ಧನೆಯ ಕಲಿಕೆಯನ್ನು ಪಡೆಯಲಿದ್ದಾರೆ. ಸಿವಿಲ್ ವಿಭಾಗದ ಇಬ್ಬರು ಅಧ್ಯಾಪಕರು ಐಐಟಿಗಳ ಪ್ರಸಿದ್ಧ ಮತ್ತು ಅನುಭವಿ ಅಧ್ಯಾಪಕ ಸದಸ್ಯರು ಮತ್ತು ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯ ತಜ್ಞರು ಸಿವಿಲ್ ಮತ್ತು ಪರಿಸರ ಇಂಜಿನಿಯರಿಂಗ್‍ನಲ್ಲಿ ತರಬೇತಿ ಪಡೆಯಲಿದ್ದಾರೆಂದು ತಿಳಿಸಿದ್ದಾರೆ.

ಈ ತರಬೇತಿಯು ಎರಡು ವಾರಗಳ ಆನ್-ಸೈಟ್ ತರಬೇತಿ ಮತ್ತು ತಜ್ಞರಿಂದ ಎರಡರಿಂದ ಮೂರು ವಾರಗಳ ವರ್ಚುವಲ್ ಮೋಡ್ ತರಬೇತಿಯ ಹೈಬ್ರಿಡ್ ಸ್ವರೂಪದಲ್ಲಿರುತ್ತದೆ. ಆಯ್ಕೆಯಾದ ಅಧ್ಯಾಪಕರಿಗೆಲ್ಲರಿಗೂ ತರಬೇತಿಯ ಕೊನೆಯಲ್ಲಿ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಕುಲಸಚಿವ ಡಾ.ಎಸ್.ಜಿ.ಡೊಳ್ಳೇಗೌಡರ್, ಡೀನ್ ಡಾ.ಲಕ್ಷ್ಮಿ ಪಾಟೀಲ್ ಮಾಕಾ ಸೇರಿದಂತೆ ಇತರರು ಐಐಟಿ ಕಾನ್ಪುರ ಮತ್ತು ಬಾಂಬೆಯಲ್ಲಿ ಉನ್ನತ ಮಟ್ಟದ ತರಬೇತಿಗಾಗಿ ಆಯ್ಕೆಯಾದ ಅಧ್ಯಾಪಕರನ್ನು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X