Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೋಡ್ಲಾದಲ್ಲಿ ಶರಣ ಸಂಗಮ :...

ಕಲಬುರಗಿ | ಕೋಡ್ಲಾದಲ್ಲಿ ಶರಣ ಸಂಗಮ : ಬಸವ ಕಾಯಕ ರತ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Feb 2025 7:45 PM IST
share
Photo of Program

ಕಲಬುರಗಿ: ಕಕ ಭಾಗದಲ್ಲಿಯೇ ಅನೇಕ ಪ್ರತಿಭಾವಂತ ಸಾಧಕರಿದ್ದಾರೆ. ಅವರನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಇದರಿಂದ ಸಾಧಕರಿಗೆ ಸೇವೆ ಮಾಡಲು ಮತ್ತಷ್ಟು ಹುಮ್ಮಸ್ಸು ಬರುತ್ತದೆ. ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ ಎಂದು ತಾಪಂ ಮಾಜಿ ಸದಸ್ಯ ಮತ್ತು ಶಿಕ್ಷಣ ಪ್ರೇಮಿ ಪರ್ವತರೆಡ್ಡಿ ಪಾಟೀಲ ನಾಮವಾರ ಅಭಿಮತ ವ್ಯಕ್ತಪಡಿಸಿದರು.

ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ನಳಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಳಂದ ತಾಲೂಕಿನ ಗುಂಜ ಬಬಲಾದ ಗ್ರಾಮದ ಪರೋಪಕಾರಿ, ಸಮಾಜ ಸೇವಕ ಲಿಂ.ಬಸವಂತರಾವ ಸಿ.ಪಾಟೀಲ ಅವರ ತೃತೀಯ ಲಿಂಗೈಕ್ಯ ಸ್ಮರಣೋತ್ಸವದ ಪ್ರಯುಕ್ತ ಕಲಬುರಗಿಯ ʼಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ವಿವಿಧ ಕ್ಷೇತ್ರದ ಸಾಧಕರಿಗೆ ‘ಬಸವ ಕಾಯಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭೂನ್ಯಾಯ ಮಂಡಳಿಯ ಮಾಜಿ ಸದಸ್ಯ ರವಿ ಸಾಹು ತಂಬಾಕೆ ಮಾತನಾಡಿ, ಸಾಧಕರಿಗೆ ಪ್ರಶಸ್ತಿ ನೀಡುವ ಮೂಲಕ ಹೆತ್ತವರನ್ನು ಗೌರವಿಸುವ ಕೆಲಸ ಮಾಡುತ್ತಿರುವ ಸಮಾಜ ಸೇವಕ ಎಚ್.ಬಿ.ಪಾಟೀಲ್ ರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದು ಬಾನಾರ ಮಾತನಾಡಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ಪ್ರಶಸ್ತಿಗಳು ಇನ್ನೂ ಹೆಚ್ಚಿನ ಸಾಧನೆಗೆ ಪ್ರೇರಣೆ ನೀಡುತ್ತವೆ, ತಾಲೂಕಿನಲ್ಲಿ ಹಲವಾರು ಜನರು ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧಕರಿದ್ದಾರೆ ಎಂದು ನುಡಿದರು.

“ಜಾಗತಿಕ ತಲ್ಲಣಗಳಿಗೆ ಶರಣ ತತ್ವ ಪರಿಹಾರ” ಎಂಬ ವಿಷಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ, ಜಗತ್ತಿನ ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಶರಣ ತತ್ವದಲ್ಲಿ ಪರಿಹಾರವಿದೆ ಎಂದು ಶರಣರ ಅನೇಕ ವಚನಗಳೊಂದಿಗೆ ಮನೋಜ್ಞವಾಗಿ ವಿವರಿಸಿದರು.

ಕೋಡ್ಲಾ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಮಾರುತಿ ಉದ್ಘಾಟಿಸಿದರು. ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ ಸುರೇಶರೆಡ್ಡಿ ಪುರ್ಮಾ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ವಿ.ಆರಕೋಟಿ, ಗ್ರಾಪಂ ಸದಸ್ಯರುಗಳಾದ ಶಿವಲಿಂಗಯ್ಯಸ್ವಾಮಿ ಗಚ್ಚಿನಮಠ, ಸಂಜೀವರೆಡ್ಡಿ, ಅಮೀನರೆಡ್ಡಿ ಮದ್ನಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಪ್ರಮುಖರಾದ ಭೀಮರಾಯ ಹಣಮನಳ್ಳಿ, ಶರಣಪ್ಪರೆಡ್ಡಿ, ಶರಣರೆಡ್ಡಿ ಆರಕಟ್ಟಿ, ಗುರುನಾಥ ವಿಶ್ವಕರ್ಮ, ರಾಜು ಮಾಳಮಪನೋರ, ಮಲ್ಲು ಕಾಕಲವಾರ, ಮೊಗಲಮ್ಮ, ಶೋಭಾ, ಸುಮನ್, ಅರುಣಾ, ದೀಪಿಕಾ, ಸುಧಾರಾಣಿ, ಪೂಜಾ, ಅನ್ನಪೂರ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಿದ್ಯಾರ್ಥಿನಿಯರಾದ ವೈಷ್ಣವಿ, ಅನುಷಾ ಸಂಗಿಡಗರು ಪ್ರಾರ್ಥಿಸಿದರು. ಜ್ಯೋತಿ ಲಿಂಗಂಪಲ್ಲಿ ಗಾಯನ ನಡೆಸಿಕೊಟ್ಟರು. ನ್ಯಾಯವಾದಿ ಸಂಜೀವರೆಡ್ಡಿ ಸ್ವಾಗತಿಸಿದರು. ಶಿಕ್ಷಕಿ ಶರಣಕಲಾ ನಿರೂಪಿಸಿದರು. ಸಿಆರ್ಪಿ ರಾಧಾಕೃಷ್ಣ ಹೆರೂರ್ ವಂದಿಸಿದರು.

ಬಸವ ಕಾಯಕ ರತ್ನ ಪ್ರಶಸ್ತಿ ಪುರಸ್ಕೃತರು :

ವಿವಿಧ ಕ್ಷೇತ್ರದ ಸಾಧಕರಾದ ಸಾಯಿರಾಮರೆಡ್ಡಿ ವಿ.ಕೋನಾಪುರ(ಕೃಷಿ), ಶಂಭುರೆಡ್ಡಿ ಮದ್ನಿ(ಶಿಕ್ಷಣ), ಸವಿತಾಎಸ್.ಕುಂಬಾರ(ಚಿತ್ರಕಲೆ), ನಾಗಯ್ಯ ಮಠ(ಸಮಾಜ ಸೇವೆ) ಮತ್ತು ಡಾ.ವೈ.ಬಿ.ರಮೇಶ್(ಆರ್ಯುರ್ವೇದ ವೈದ್ಯಕೀಯ) ಅವರಿಗೆ ‘ಬಸವ ಕಾಯಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X