Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಸ್.ಎಲ್.ಭೈರಪ್ಪ ಅವರು ಮೇರು...

ಕಲಬುರಗಿ | ಎಸ್.ಎಲ್.ಭೈರಪ್ಪ ಅವರು ಮೇರು ಪರ್ವತದಂತಿದ್ದರು : ಡಾ.ಶ್ರೀನಿವಾಸ ಸಿರನೂರಕರ್

ವಾರ್ತಾಭಾರತಿವಾರ್ತಾಭಾರತಿ25 Sept 2025 10:55 PM IST
share
ಕಲಬುರಗಿ | ಎಸ್.ಎಲ್.ಭೈರಪ್ಪ ಅವರು ಮೇರು ಪರ್ವತದಂತಿದ್ದರು : ಡಾ.ಶ್ರೀನಿವಾಸ ಸಿರನೂರಕರ್

ಕಲಬುರಗಿ : ಸರಸ್ವತಿ ಸಮ್ಮಾನ ಪ್ರಶಸ್ತಿ ಪುರಸ್ಕೃತರಾದ ಡಾ.ಎಸ್.ಎಲ್.ಭೈರಪ್ಪ ಅವರು ಮೇರು ಪರ್ವತದಂತಿದ್ದರು ಎಂದು ಹಿರಿಯ ಸಾಹಿತಿ ಡಾ. ಶ್ರೀನಿವಾಸ ಸಿರನೂರಕರ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾದಂಬರಿ ಕ್ಷೇತ್ರದಲ್ಲಿ ಅನೇಕ ಖ್ಯಾತ ಕಾದಂಬರಿಗಳನ್ನು ಬರೆದು ಸಮಷ್ಟಿ ಪ್ರಜ್ಞೆ ತೋರಿಸಿಕೊಟ್ಟವರು. ಅವರ ವಂಶವೃಕ್ಷ , ದಾಟು, ತಬ್ಬಲಿ ನೀನಾದೆ ಮಗನೆ, ಪರ್ವ ಮುಂತಾದ ಜನಪ್ರಿಯ ಕಾದಂಬರಿಗಳನ್ನು ರಚಿಸಿದ್ದಾರೆ. ಅವರಲ್ಲಿದ್ದ ಸಾಹಿತ್ಯದ ವಿದ್ವತ್ತು ಕನ್ನಡ ಸಾರಸ್ವತ ಲೋಕ ಎಂದಿಗೂ ಮರೆಯುವುದಿಲ್ಲ. ಈ ನೆಲದ ಋಣಭಾರದ ಬಗ್ಗೆ ಹೊಂದಿದ ಪ್ರೀತಿ ಕಾಳಜಿ ಮರೆಯಲಾಗದು ಎಂದು ಅವರ ವ್ಯಕ್ತಿತ್ವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಸಾಹಿತಿ ಡಾ. ಶ್ರೀಶೈಲ್ ನಾಗರಾಳ ಮಾತನಾಡಿ, ಡಾ.ಎಸ್.ಎಲ್.ಭೈರಪ್ಪ ನವರನ್ನು ಸಮೀಪದಿಂದ ನೋಡಲಾಗಿದೆ. ಅವರ ಸರಳತೆ, ಹೃದಯವಂತಿಕೆ, ಈ ನೆಲದ ಪ್ರೀತಿ ನಮಗೆ ಸ್ಫೂರ್ತಿಯಾಗಿವೆ. ಇಂದು ಭೌತಿಕವಾಗಿ ಇಲ್ಲದಿದ್ದರೂ ಅವರ ವಿಚಾರಗಳ ಕೃತಿಗಳು ನಮ್ಮ ಜೊತೆ ಸದಾ ಮಾತಾಡಿಸುತ್ತವೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಎಸ್.ಎಲ್.ಭೈರಪ್ಪ ನವರಿಗೆ ಸಲ್ಲುತ್ತದೆ. ಸಾಹಿತ್ಯ, ಸಂಸ್ಕೃತಿ, ಧಾರ್ಮಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಭೈರಪ್ಪ ನವರ ಸಾಹಿತ್ಯ ದರ್ಶನ ಹೊಸ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಪರಿಷತ್ತು ಮುಂದಿನ ದಿನಗಳಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸಲು ಆಲೋಚಿಸಿದೆ ಎಂದರು.

ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಮಾಜಿ ಉಪ ಮಹಾಪೌರರಾದ ನಂದಕುಮಾರ ಮಾಲಿಪಾಟೀಲ, ಪರಿಷತ್ತಿನ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ, ಪ್ರಮುಖರಾದ ರವಿಕುಮಾರ ಶಹಾಪುರಕರ್, ಶಕುಂತಲಾ ಪಾಟೀಲ , ಜ್ಯೋತಿ ಕೋಟನೂರ, ಜಯಶ್ರೀ ಜಮಾದಾರ, ಸಮ್ರೀನ್ ಶೇಖ್, ಎಂ ಎನ್ ಸುಗಂಧಿ, ಶಿವಕುಮಾರ ಸಿಎಚ್., ಮಂಜುನಾಥ ಕಂಬಾಳಿಮಠ, ಪ್ರಭವ ಪಟ್ಟಣಕರ್, ರಮೇಶ ಡಿ ಬಡಿಗೇರ, ಧರ್ಮರಾಜ ಜವಳಿ, ರೇವಣಸಿದ್ದಪ್ಪ ಜೀವಣಗಿ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಡಾ. ರೆಹಮಾನ್ ಪಟೇಲ್, ರೇವಣಸಿದ್ದ ಸಿದ್ರಾಮಗೋಳ, ಚಂದ್ರಕಾoತ ಸೂರನ್, ಶಿವಾನಂದ ಸುರವಸೆ, ಸಂಗಣ್ಣ ಸೇರಿದಂತೆ ಅನೆಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X