Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೃಷಿ ಮಳಿಗೆಗಳ ಮೇಲೆ ಕೃಷಿ...

Kalaburagi | ಕೃಷಿ ಮಳಿಗೆಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ಅನಿರೀಕ್ಷಿತ ದಾಳಿ

ವಾರ್ತಾಭಾರತಿವಾರ್ತಾಭಾರತಿ30 May 2026 5:59 PM IST
share
Kalaburagi | ಕೃಷಿ ಮಳಿಗೆಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ಅನಿರೀಕ್ಷಿತ ದಾಳಿ
ನಿಯಮ ಉಲ್ಲಂಘಿಸಿದ ಮಾರಾಟಗಾರರಿಗೆ ನೋಟಿಸ್ ಜಾರಿ

ಕಲಬುರಗಿ: ರೈತರಿಗೆ ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅನಾವಶ್ಯಕವಾಗಿ ಹಣ ವಸೂಲಿ ಮಾಡುವ ಮಾರಾಟಗಾರರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶ ಹಾಗೂ ಅವಶ್ಯಕ ವಸ್ತುಗಳ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರಾದ ಸಮದ್ ಪಟೇಲ್ ಅವರು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಜೇವರ್ಗಿ, ಯಡ್ರಾಮಿ, ಚಿತ್ತಾಪುರ ಹಾಗೂ ಸೇಡಂ ತಾಲ್ಲೂಕುಗಳ ಕೃಷಿ ಪರಿಕರ ಮಾರಾಟ ಮಳಿಗೆಗಳ ಮೇಲೆ ಜಂಟಿ ಕೃಷಿ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ಕೈಗೊಂಡಿತು. ಈ ವೇಳೆ ಐ-ಎಫ್‌ಎಂಎಸ್ (iFMS) ತಂತ್ರಾಂಶದಲ್ಲಿ ರಸಗೊಬ್ಬರ ವಿತರಣೆ, ದಾಸ್ತಾನು ವಿವರಗಳು ಹಾಗೂ ಪಿಒಎಸ್ (POS) ಯಂತ್ರಗಳ ದಾಖಲೆಗಳನ್ನು ಪರಿಶೀಲಿಸಲಾಯಿತು.

ರೈತರಿಗೆ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಉದ್ದೇಶದಿಂದ ಈ ವಿಶೇಷ ತಪಾಸಣೆ ನಡೆಸಲಾಗಿದೆ ಎಂದು ಸಮದ್ ಪಟೇಲ್ ತಿಳಿಸಿದ್ದಾರೆ.

ಮಾರಾಟಗಾರರ ಗೋದಾಮುಗಳಿಗೂ ಭೇಟಿ ನೀಡಿದ ಅಧಿಕಾರಿಗಳು ರಸಗೊಬ್ಬರ (ನಿಯಂತ್ರಣ) ಆದೇಶ-1985ರ ನಿಯಮಗಳನ್ನು ಉಲ್ಲಂಘಿಸಿರುವ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಿದರು. ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಸಂಬಂಧಿಸಿದ ಮಾರಾಟ ಪರವಾನಗಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೃಷಿ ಪರಿಕರ ಮಾರಾಟಗಾರರ ವಿರುದ್ಧ ಕೈಗೊಂಡ ಕ್ರಮಗಳ ಮಾಹಿತಿಯನ್ನು ಪರಿಶೀಲಿಸಲಾಯಿತು.

ಜೇವರ್ಗಿ, ಯಡ್ರಾಮಿ, ಸೇಡಂ ಹಾಗೂ ಚಿತ್ತಾಪುರ ತಾಲ್ಲೂಕುಗಳಲ್ಲಿ ಒಟ್ಟು 28 ಕೃಷಿ ಮಳಿಗೆಗಳನ್ನು ತಪಾಸಣೆ ಮಾಡಲಾಗಿದ್ದು, 26 ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. 10 ಮಳಿಗೆಗಳಿಗೆ ಮಾರಾಟ ತಡೆ ಆದೇಶ ನೀಡಲಾಗಿದೆ. ಜೇವರ್ಗಿ ತಾಲ್ಲೂಕಿನಲ್ಲಿ ಮಾತ್ರ 192.4 ಟನ್ ರಸಗೊಬ್ಬರ ದಾಸ್ತಾನು ತಡೆಹಿಡಿಯಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು ರೂ.45.75 ಲಕ್ಷಗಳಾಗಿದೆ.

ಈ ಅನಿರೀಕ್ಷಿತ ದಾಳಿ ವೇಳೆ ಕಲಬುರಗಿ ಉಪ ಕೃಷಿ ನಿರ್ದೇಶಕರಾದ ಡಾ. ಬಾಲರಾಜ್ ಗಂಗರಾವ್, ಸೇಡಂ ಉಪ ಕೃಷಿ ನಿರ್ದೇಶಕರಾದ ಅನಸೂಯಾ ಹೂಗಾರ, ಜಾರಿದಳದ ಸಹಾಯಕ ಕೃಷಿ ನಿರ್ದೇಶಕರು, ಸಂಬಂಧಿತ ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.


Tags

Kalaburagiagriculture department
share
ವಾರ್ತಾಭಾರತಿ
ವಾರ್ತಾಭಾರತಿ
Next Story
X