Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸೆ.6ರಂದು ತಾಲೂಕು 9ನೇ ಕನ್ನಡ...

ಕಲಬುರಗಿ | ಸೆ.6ರಂದು ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 Sept 2025 8:10 PM IST
share
ಕಲಬುರಗಿ | ಸೆ.6ರಂದು ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ: ಕಾಯಕ ಮತ್ತು ದಾಸೋಹ ಪರಂಪರೆಯ ನೆಲವಾದ ಕಲಬುರಗಿ ನಗರದ ಕನ್ನಡ ಭವನದಲ್ಲಿ ಸೆ.6ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತು ಏರ್ಪಡಿಸಿರುವ ಕಲಬುರಗಿ ತಾಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದ್ದು, ಅರ್ಥಪೂರ್ಣವಾಗಿ ಸಮ್ಮೇಳನ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷೆ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.

ಇಲ್ಲಿನ ಹಿರಿಯ ಸಾಹಿತಿಗಳಾದ ಡಾ. ಶ್ರೀಶೈಲ ನಾಗರಾಳ ಅವರ ಸರ್ವಾಧ್ಯಕ್ಷತೆಯಲ್ಲಿ ಲಿಂ.ಗುರುಬಸಪ್ಪ ಸಜ್ಜನಶೆಟ್ಟಿ ವೇದಿಕೆಯಡಿಯಲ್ಲಿ ನಡೆಯಲಿರುವ ಒಂದು ದಿನದ ಸಾಹಿತ್ಯ ಸಮ್ಮೇಳನದ ಅಂದು ಬೆಳಗ್ಗೆ 9.30 ಕ್ಕೆ ನಡೆಯುವ ಸಾಂಸ್ಕೃತಿಕ ಮೆರವಣಿಗೆಗೆ ಮೇಯರ್ ವರ್ಷಾ ಜಾನೆ ಹಾಗೂ ಉಪ ಮೇಯರ್ ತೃಪ್ತಿ ಲಾಖೆ ಅವರು ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10.45 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಉದ್ಘಾಟಕರಾಗಿ ಆಗಮಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವ ವಹಿಸಲಿದ್ದಾರೆ. ಹಿರಿಯ ಚಿಂತಕ ಡಾ.ಹೆಚ್.ಟಿ. ಪೋತೆ ಅವರು ಜಾನಪದ ಸಮಾಜೋ ಸಂಸ್ಕೃತಿ ಕೃತಿ ಜನಾರ್ಪಣೆಗೊಳಿಸಲಿದ್ದು, ಕ್ರೆಡಲ್ ನ ಮಾಜಿ ಅಧ್ಯಕ್ಷ ಚಂದು ಬಿ.ಜಿ. ಪಾಟೀಲ, ಲಕ್ಷ್ಮೀ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷೆ ಸಾಹಿತಿ ಪ್ರಮೀಳಾ ಜಾನಪ್ಪಗೌಡ ಚಿಂಚೋಳಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಡೆಯುವ ಸಾಹಿತ್ಯ ಸಿಂಚನ ಗೋಷ್ಠಿಯಲ್ಲಿ ವಿಮರ್ಶಾ ನೋಟಗಳು-ಸಾಹಿತ್ಯದ ಮೌಲ್ಯಗಳು ಕುರಿತು ಡಾ.ಜಗನ್ನಾಥ ತರನಳ್ಳಿ, ಆಧುನಿಕ ಸಾಹಿತ್ಯಕ್ಕಿರುವ ಸವಾಲುಗಳು-ಪರಿಹಾರೋಪಾಯಗಳು ಕುರಿತು ಡಾ.ಅಪ್ಪಗೆರೆ ಸೋಮಶೇಖರ, ಸಮ್ಮೇಳನಾಧ್ಯಕ್ಷರ ಬದುಕು-ಬರಹದ ಕುರಿತು ಡಾ.ಸಂತೋಷಕುಮಾರ ಕಂಬಾರ ಅವರು ಮಾತನಾಡಲಿದ್ದಾರೆ. ಸಾಹಿತಿ ಧರ್ಮಣ್ಣ ಎಚ್.ಧನ್ನಿ ಆಶಯ ನುಡಿಗಳನ್ನಾಡಲಿದ್ದಾರೆ.

ಮಧ್ಯಾಹ್ನ 2.45 ಕ್ಕೆ ನಡೆಯುವ ಕಾವ್ಯ ಕಿರಣ ಎಂಬ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಲೇಖಕಿ ಡಾ.ಜಯದೇವಿ ಗಾಯಕವಾಡ ಅಧ್ಯಕ್ಷತೆ ವಹಿಸಲಿದ್ದಾರೆ. ಯಾದಗಿರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಎಸ್.ಮುಧೋಳ ಆಶಯ ನುಡಿಗಳನ್ನಾಡಲಿದ್ದು, ಸುಮಾರು 20ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಲಿದ್ದಾರೆ ಎಂದು ವಿವರಿಸಿದರು.

ಇಳಿಹೊತ್ತು 4.45 ಕ್ಕೆ ಸಮಾರೋಪ ಹಾಗೂ ಸತ್ಕಾರ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತಿ-ಪತ್ರಕರ್ತ ಡಾ. ಶಿವರಂಜನ್ ಸತ್ಯಂಪೇಟೆ ಸಮಾರೋಪ ನುಡಿಗಳನ್ನಾಡಲಿದ್ದು, ಕಲಬುರಗಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ವೇಳೆ ತಾಲೂಕಿನ ವಿವಿಧ ಕ್ಷೇತ್ರದ ಸಾಧಕರಿಗೆ ಸತ್ಕರಿಸಲಾಗುವುದು.

ಸ್ವಾಗತ ಸಮಿತಿಯ ಅಧ್ಯಕ್ಷ ದಯಾನಂದ ದೇವರಮನಿ, ಕಾರ್ಯಾಧ್ಯಕ್ಷ ವಿಶ್ವನಾಥ ಹುಲಿ, ಗೌರವಾಧ್ಯಕ್ಷ ಫಾರೂಕ್ ಅಹ್ಮದ ಮಣೂರ ಅವರು ಹಾಗೂ ಪರಿಷತ್ತಿನ ಪದಾಧಿಕಾರಿಗಳು ಸಮ್ಮೇಳನದಲ್ಲಿ ಹಾಜರಿರಲಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X