ಕಲಬುರಗಿ | ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ : ಶಶೀಲ್ ನಮೋಶಿ

ಕಲಬುರಗಿ : ಈ ಬಾರಿಯ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.
ಶುಕ್ರವಾರ ಹಲೋ ಶಿಕ್ಷಣ ಇಲಾಖೆ ಕಲಬುರಗಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಕಲಬುರಗಿ, ಸಮಾಜ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆ ಕಲಬುರಗಿ ಹಾಗೂ ಎನ್ಪಿಎಸ್ ಪದವಿಪೂರ್ವ ಕಾಲೇಜು ಜಿಲ್ಲೆಯ ಸರಕಾರಿ ಅನುದಾನಿತ ಮೊರಾರ್ಜಿ ವಸತಿ ಶಾಲೆಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ʼಒಂದು ದಿನದ ಕಾರ್ಯಗಾರʼವನ್ನು ಉದ್ಘಾಟಿಸಿ ಮಾತನಾಡಿದರು.
ಎಸೆಸೆಲ್ಸಿ ಫಲಿತಾಂಶ ಅಭಿವೃದ್ಧಿಪಡಿಸಲು ಪ್ರಾಥಮಿಕ ಹಂತದ ಶಿಕ್ಷಣವನ್ನು ಗಟ್ಟಿಗೊಳಿಸುವುದು ಅತ್ಯವಶ್ಯಕವಾಗಿದೆ, ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆ ಚೆನ್ನಾಗಿ ಆದರೆ ಪ್ರೌಢಾವಸ್ಥೆಯಲ್ಲಿ ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಮರ್ಥರಾಗುತ್ತಾರೆ. ಇದೆಲ್ಲದರ ಮಧ್ಯೆ ದಾಖಲಾಗಿರುವ ಎಲ್ಲ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಫಲಿತಾಂಶ ಹೆಚ್ಚಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹೇಶ್ ಹೂಗಾರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ಬರವಣಿಗೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸೂರ್ಯಕಾಂತ್ ಮದಾನೆ, ಎನ್ಪಿಎಸ್ ಕಾರ್ಯದರ್ಶಿಗಳಾದ ಸುರೇಶ್ ಬುಲ್ ಬುಲೆ, ನಿರ್ದೇಶಕರಾದ ಮೈನೋಧಿನ್, ಸಂಘದ ಕಾರ್ಯದರ್ಶಿಗಳಾದ ಜಮೀರ್ ಇಮ್ರಾನ್ ಅಹಮದ್, ವಿಶೇಷ ಶಿಕ್ಷಕರ ವೇದಿಕೆ ಅಧ್ಯಕ್ಷರಾದ ಸಂತೋಷ ಹೂಗಾರ್, ವಿಜಯಕುಮಾರ್ ಪಾಟೀಲ್, ರಾಮು ಚೌಹಾನ್, ಶರಣಬಸಪ್ಪ ನಾಟಿಕರ್, ಬಾಬರ ಪಟೇಲ್, ಸಿದ್ದು ಚಿಂಚೋಳಿ, ರಾಜೇಂದ್ರ ಪ್ರಸಾದ್ ತಳವಾರ್ ಇತರರು ಉಪಸ್ಥಿತರಿದ್ದರು.







