Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದೇವಾಲಯಗಳು ದೇಶದ ಆರ್ಥಿಕ...

Kalaburagi | ದೇವಾಲಯಗಳು ದೇಶದ ಆರ್ಥಿಕ ಬೆಳವಣಿಗೆಯ ಶಕ್ತಿಕೇಂದ್ರಗಳು: ಪ್ರೊ.ಬಟ್ಟು ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ5 Aug 2026 8:00 PM IST
share
Kalaburagi | ದೇವಾಲಯಗಳು ದೇಶದ ಆರ್ಥಿಕ ಬೆಳವಣಿಗೆಯ ಶಕ್ತಿಕೇಂದ್ರಗಳು: ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ, ಆ.5: ಭಾರತೀಯ ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ, ಸಾಮಾಜಿಕ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಶಕ್ತಿಕೇಂದ್ರಗಳಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗ, ಅರ್ಥಶಾಸ್ತ್ರ ಅಧ್ಯಯನ ಮತ್ತು ಯೋಜನಾ ವಿಭಾಗ ಹಾಗೂ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಎಸ್‌ಆರ್) ಸಹಯೋಗದಲ್ಲಿ ಆಯೋಜಿಸಿರುವ “ದೇವಾಲಯ ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಸಾರ್ವಜನಿಕ ನೀತಿ: ಆಡಳಿತ, ಜೀವನೋಪಾಯ ಮತ್ತು ಸುಸ್ಥಿರ ಪ್ರಾದೇಶಿಕ ಅಭಿವೃದ್ಧಿ” ವಿಷಯದ ಮೂರು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರಮುಖ ದೇವಾಲಯಗಳು ಸಾರಿಗೆ, ವಸತಿ, ಆಹಾರ ಸೇವೆ ಸೇರಿದಂತೆ ಸ್ಥಳೀಯ ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮೂಲಕ ರಾಷ್ಟ್ರೀಯ ಆರ್ಥಿಕತೆಗೆ ನೇರ ಹಾಗೂ ಪರೋಕ್ಷವಾಗಿ ಗಣನೀಯ ಕೊಡುಗೆ ನೀಡುತ್ತಿವೆ ಎಂದು ಅವರು ತಿಳಿಸಿದರು.

ತಿರುಮಲ ತಿರುಪತಿ ದೇವಸ್ಥಾನದ ಉದಾಹರಣೆ ನೀಡಿದ ಅವರು, ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ತೀರ್ಥಕ್ಷೇತ್ರಗಳು ಉದ್ಯೋಗ ಸೃಷ್ಟಿ ಹಾಗೂ ದೇಶದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ವೃದ್ಧಿಗೂ ಮಹತ್ವದ ಪಾತ್ರವಹಿಸುತ್ತವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ “ಕರ್ನಾಟಕದಲ್ಲಿನ ದೇವಾಲಯಗಳ ಆರ್ಥಿಕ ವಿಶ್ಲೇಷಣೆ: ಕಲಬುರಗಿಯ ಗಾಣಗಾಪುರ ದೇವಸ್ಥಾನದ ಅಧ್ಯಯನ” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಲಾಯಿತು. ಈ ಅಧ್ಯಯನವನ್ನು ಸಿಯುಕೆಯ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಸ್. ಲಿಂಗಮೂರ್ತಿ ಅವರು ತೆಲಂಗಾಣ ಸಂಸ್ಕೃತಿ ಫೌಂಡೇಶನ್ ಸಹಯೋಗದಲ್ಲಿ ನಡೆಸಿದ್ದಾರೆ.

ಮುಖ್ಯ ಭಾಷಣ ಮಾಡಿದ ಐಐಎಂ ಲಕ್ನೋದ ಪ್ರಾಧ್ಯಾಪಕ ಡಾ. ವೆಂಕಟರಮಣಯ್ಯ ಸದ್ದಿಕುಟಿ ಅವರು ಶ್ರೀರಾಮ ಮಂದಿರ ಪುನರ್ನಿರ್ಮಾಣದ ಬಳಿಕ ಅಯೋಧ್ಯೆಯ ಆರ್ಥಿಕತೆ, ಪ್ರವಾಸೋದ್ಯಮ, ಉದ್ಯೋಗ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಉಂಟಾದ ಪರಿಣಾಮಗಳನ್ನು ವಿಶ್ಲೇಷಿಸಿದರು.

ಲಿಥುವೇನಿಯಾದ ಸಮಾಜಶಾಸ್ತ್ರ ಸಂಸ್ಥೆಯ ಪ್ರಧಾನ ಪ್ರವಾಸೋದ್ಯಮ ಸಂಶೋಧಕ ಡಾ. ಡೇರಿಯಸ್ ಲಿಯುಟಿಕಾಸ್ ಅವರು ಪವಿತ್ರ ಸ್ಥಳಗಳು ಮತ್ತು ತೀರ್ಥಯಾತ್ರಾ ಪ್ರವಾಸೋದ್ಯಮದ ಮಹತ್ವವನ್ನು ವಿವರಿಸಿದರೆ, ಮಾರಿಷಸ್‌ನ ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಪೆರುಂಜೋಡಿ ನಾಯ್ಡು ಅವರು ಆಹಾರ ಸಂಸ್ಕೃತಿ ಮತ್ತು ತೀರ್ಥಯಾತ್ರೆಯ ಅನುಭವಗಳ ನಡುವಿನ ಸಂಬಂಧ ಕುರಿತು ಉಪನ್ಯಾಸ ನೀಡಿದರು.

ಸಮ್ಮೇಳನದಲ್ಲಿ “ದೇವಾಲಯ ಆರ್ಥಿಕತೆ ಮತ್ತು ಸುಸ್ಥಿರ ಅಭಿವೃದ್ಧಿ” ಹಾಗೂ “ದೇವಾಲಯ ಆಧಾರಿತ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ” ವಿಷಯಗಳ ಕುರಿತು ವಿಶೇಷ ಚರ್ಚಾಗೋಷ್ಠಿಗಳು ನಡೆದವು. ದೇಶದ ವಿವಿಧ ವಿಶ್ವವಿದ್ಯಾಲಯಗಳ ತಜ್ಞರು, ಸಂಶೋಧಕರು ಹಾಗೂ ನೀತಿ ಪರಿಣಿತರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಸ್ವದೇಶಿ ಶೋಧ ಸಂಸ್ಥಾನದ ಅಧ್ಯಕ್ಷ ಆರ್. ಸುಂದರಂ, ಸಂಸ್ಕೃತಿ ಅಧ್ಯಯನ ಕೇಂದ್ರ ಪ್ರತಿಷ್ಠಾನದ ನಿರ್ದೇಶಕ ಡಾ. ಉದಯ್ ಚೌಧರಿ, ಲೇಖಕ ಡಾ. ಸಂದೀಪ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಮ್ಮೇಳನದ ಅಧ್ಯಕ್ಷತೆಯನ್ನು ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ನಿಕಾಯದ ಡೀನ್ ಪ್ರೊ. ಪಾಂಡುರಂಗ ವಿ. ವಹಿಸಿದ್ದರು. ಆಗಸ್ಟ್ 7ರವರೆಗೆ ನಡೆಯಲಿರುವ ಈ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ದೇವಾಲಯ ಆರ್ಥಿಕತೆ, ತೀರ್ಥಯಾತ್ರಾ ಪ್ರವಾಸೋದ್ಯಮ, ಸಾರ್ವಜನಿಕ ನೀತಿ ಹಾಗೂ ಸುಸ್ಥಿರ ಪ್ರಾದೇಶಿಕ ಅಭಿವೃದ್ಧಿ ಕುರಿತ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುತ್ತದೆ.

Tags

templesKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X