Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಳ್ಳತನ ಪ್ರಕರಣ ; ಆರೋಪಿಯ...

ಕಲಬುರಗಿ | ಕಳ್ಳತನ ಪ್ರಕರಣ ; ಆರೋಪಿಯ ಬಂಧನ, 30 ಲಕ್ಷ ರೂ. ಮೌಲ್ಯದ 412 ಗ್ರಾಂ ಬಂಗಾರ ಜಪ್ತಿ : ಪೊಲೀಸ್ ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ28 April 2025 4:55 PM IST
share
ಕಲಬುರಗಿ | ಕಳ್ಳತನ ಪ್ರಕರಣ ; ಆರೋಪಿಯ ಬಂಧನ, 30 ಲಕ್ಷ ರೂ. ಮೌಲ್ಯದ 412 ಗ್ರಾಂ ಬಂಗಾರ ಜಪ್ತಿ : ಪೊಲೀಸ್ ಕಮಿಷನರ್

ಕಲಬುರಗಿ : 260ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರ್ ರಾಜ್ಯ ಕುಖ್ಯಾತ ಕಳ್ಳನನ್ನು ಬಂಧಿಸಿ, ಆತನಿಂದ ಒಟ್ಟು 10 ಪ್ರಕರಣಗಳಿಂದ 30 ಲಕ್ಷ ರೂ. ಮೌಲ್ಯದ 412 ಗ್ರಾಂ. ಬಂಗಾರದ ಆಭರಣಗಳ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಇಲ್ಲಿನ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ತೆಲಂಗಾಣ ರಾಜ್ಯದ ಸಿಕಿಂದ್ರಬಾದ್ ನಗರದ ಶಿವಪ್ರಸಾದ ಅಲಿಯಾಸ್ ಮಂತ್ರಿ ಶಂಕರ ತಂದೆ ಆಧಿನಾರಾಯಣ ಮಂತ್ರಿ (56) ಬಂಧಿತ ಆರೋಪಿ. ಈತನ ಮೇಲೆ ತೆಲಂಗಾಣದಲ್ಲೇ 250 ಕಳ್ಳತನ ಪ್ರಕರಣಗಳು ದಾಖಲಾಗಿವೆ. 4 ಬಾರಿ ಪಿ.ಡಿ ಆಕ್ಟ್ ಕಾಯ್ದೆ ಅಡಿಯಲ್ಲಿ ಬಂಧಿಸಿ 4 ವರ್ಷ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎರಡು ವಾರಗಳ (ಎ.10ರಂದು) ಹಿಂದಷ್ಟೇ ಭಾಗ್ಯವಂತಿ ನಗರ ನಿವಾಸಿ ಶಂಕರಗೌಡ ಬಮಶೆಟ್ಟಿ ಎಂಬಾತರು ತಮ್ಮ ಮನೆಯಲ್ಲಿ 13 ಲಕ್ಷ ಮೌಲ್ಯದ ಬಂಗಾರ ಮತ್ತು 1 ಲಕ್ಷ 50 ಸಾವಿರ ರೂ. ಹಣ ಕಳ್ಳತನವಾಗಿದೆ ಎಂದು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಇದೇ ಠಾಣೆಯಲ್ಲೇ ದಾಖಲಾದ ಒಟ್ಟು 9 ಪ್ರಕರಣ ಮತ್ತು ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ 1 ಪ್ರಕರಣಗಳ ಒಟ್ಟು 30 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಸಂಶಯಾತ್ಮಕವಾಗಿ ತಿರುಗಾಡುತ್ತಿದ್ದ ತೆಲಂಗಾಣ ಮೂಲದ ಆರೋಪಿ ಶಿವಪ್ರಸಾದ ನನ್ನು ವಿಚಾರಿಸಿದಾಗ ರಾಮ ಮಂದಿರ ಹತ್ತಿರ ಇರುವ ಜೀವಾ ಆಸ್ಪತ್ರೆ ಹಿಂದಿನ ಬಡಾವಣೆ ಭಾಗ್ಯವಂತಿ ನಗರದಲ್ಲಿ ರಾತ್ರಿ ವೇಳೆಯಲ್ಲಿ ಹಲವು ಕಳ್ಳತನಗಳನ್ನು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಕಳ್ಳತನ ಮಾಡಿದ 10 ಪ್ರಕರಣಗಳ ಸ್ವತ್ತನ್ನು ಕಲಬುರಗಿಯ ಐಯ್ಯರವಾಡಿಯಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಮುಚ್ಚಿಟ್ಟಿದ್ದು ಉಳಿದ ಪ್ರಕರಣಗಳ ಕಳ್ಳತನ ಸ್ವತ್ತನ್ನು ಮಾರಾಟ ಮಾಡಿ, ಗುಡಿ ಗುಂಡಾರಗಳ ಜಾತ್ರೆಯಲ್ಲಿ ಸಾರ್ವಜನಿಕರಿಗೆ ಊಟ ಹಾಕುವುದು, ದೊಡ್ಡ ನಗರಗಳಿಗೆ ಹೋಗಿ ಮೋಜು-ಮಸ್ತಿ ಮಾಡುವುದು, ಡ್ಯಾನ್ಸ್ ಕ್ಲಬ್‌ಗಳಿಗೆ ಹೋಗಿ ಹಣವನ್ನು ಖರ್ಚು ಮಾಡಿರುವುದಾಗಿ ಹೇಳಿದ್ದಾನೆಂದು ಕಮಿಷನರ್ ಡಾ.ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

ಸದರಿ ಕಳ್ಳತನ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿ, ಅವರಿಗೆ ಪ್ರಶಂಸನಾ ಪತ್ರ ನೀಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X