Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಲೈಂಗಿಕ ಕಿರುಕುಳ...

ಕಲಬುರಗಿ | ಲೈಂಗಿಕ ಕಿರುಕುಳ ಕಾಯ್ದೆ-2013 ರ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 March 2025 6:22 PM IST
share
Photo of Program

ಕಲಬುರಗಿ : ಕರ್ತವ್ಯದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ-2013 ರ ಕುರಿತು ಜಾಗೃತಿ ಮೂಡಿಸಲು ಕಾರಾಗೃಹದ ಅಧಿಕಾರಿ/ ಸಿಬ್ಬಂದಿ ವರ್ಗಗಳಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಾಗಾರವನ್ನು ಉದ್ಘಾಟಿಸಿ ಕಡಗಂಚಿ ಕಾರ್ಮಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರೆಸ್ಟ್(ರಿ) ಶಾಖೆಯ ಕಾರ್ಯದರ್ಶಿಗಳಾದ ಡಾ.ಫಾಧರ್ ವಿಲಿಯಮ್ ಮಿರಿಂಡಾ ಅವರು ಮಾತನಾಡಿ, ಕರ್ತವ್ಯದ ಸ್ಥಳದಲ್ಲಿ ಮಹಿಳೆಯರಿಗಾಗಿ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ-2013ರ ಡಿ.9 ರಂದು ಜಾರಿಗೆ ಬಂದಿದ್ದು, ಕಾರ್ಯಕ್ಷೇತ್ರದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವುದು ಹಾಗೂ ದೂರುಗಳನ್ನು ಪರಿಹರಿಸುವುದು ಮತ್ತು ತಡೆಯುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಕರ್ತವ್ಯದ ಸ್ಥಳದಲ್ಲಿ ಮಹಿಳೆಯರು ತಮ್ಮ ಮೇಲೆ ಲೈಂಗಿಕ ಕಿರುಕುಳದ ಸನ್ನಿವೇಶ ಕಂಡು ಬಂದಲ್ಲಿ ಯಾವುದೇ ಭಯ ಇಲ್ಲದೇ ಧೈರ್ಯವಾಗಿ ಅವರ ವಿರುದ್ಧ ದೂರನ್ನು ದಾಖಲಿಸಬೇಕು ಎಂದರು.

ಅಡ್ವಕೇಟ್ ಸಿಸ್ಟರ್ ಜಯಶ್ರೀ ಅವರು ಪ್ರೋಜಕ್ಟರ್ ಮೂಲಕ ಮಾಹಿತಿ ನೀಡುತ್ತಾ ಮಾತನಾಡಿ, ಕಾರ್ಯ ಕ್ಷೇತ್ರದಲ್ಲಿ ಮಹಿಳೆ ಮೇಲೆ ನಡೆಯುವ ದೌರ್ಜನ್ಯದ ಕುರಿತು ಲೈಂಗಿಕ ಕಿರುಕುಳದ ವ್ಯಾಪ್ತಿಯು ಸಾರ್ವಜನಿಕ, ಖಾಸಗಿ ಮತ್ತು ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಮಹಿಳೆಯವರ ಮೇಲೆ ನಡೆಯುವ ಲೈಂಗಿಕ ಕಿರುಕುಳದ ಬಗ್ಗೆ 2013 ರ ಕಾಯ್ದೆ ಅಡಿಯಲ್ಲಿ ವಿವಿಧ ಸೆಕ್ಷನ್‍ಗಳ ಮುಖಾಂತರ ವಿವರವಾಗಿ ತಿಳಿಸಿದರು. ಕಾರ್ಯ ಕ್ಷೇತ್ರದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ದೂರನ್ನು ಪಡೆಯಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಸಮಿತಿಯನ್ನು ರಚಿಸಬೇಕು. ಈ ಸಮಿತಿಯು ಕೂಲಂಕುಷವಾಗಿ ಪರಿಶೀಲಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಆರ್. ಮಾತನಾಡಿ, ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ/ಸಿಬ್ಬಂದಿಗಳ ಸುರಕ್ಷತೆಗಾಗಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸ್ಥಳೀಯ ಎನ್.ಜಿ.ಓ. ಸದಸ್ಯರನ್ನು ಕೂಡ ಈ ಸಮಿತಿಯ ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿದೆ. ಮಹಿಳಾ ಅಧಿಕಾರಿ/ಸಿಬ್ಬಂದಿಗಳಿಗೆ ತಮ್ಮ ಮೇಲೆ ಏನಾದರೂ ಲೈಂಗಿಕ ದೌರ್ಜನ್ಯದ ಸನ್ನಿವೇಶಗಳು ಕಂಡು ಬಂದಲ್ಲಿ ಸಮಿತಿಯ ಮುಂದೆ ಲಿಖಿತವಾಗಿ ದೂರನ್ನು ನೀಡುವುದು. ತಮ್ಮ ದೂರನ್ನು ಸಮಿತಿಯು ಪರಿಶೀಲಿಸಿ ವರದಿಯನ್ನು ನೀಡಿದ್ದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದೆಂದು ಹೇಳಿದರು.

ಕಾರಾಗೃಹದಲ್ಲಿ ದಾಖಲಾಗಿರುವ ಮಹಿಳಾ ಬಂದಿಗಳಿಗೆ ಕಡಗಂಚಿ ಕಾರ್ಮಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರೆಸ್ಟ್(ರಿ) ಶಾಖೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಫಾದರ್ ದೀಪಕ್ ತಮಾಸ್, ಫಾದರ್ ಮಾಝಿನ್ ಎಸ್. ವಿರೋನಿಕಾ, ಸಹಾಯಕ ಅಧೀಕ್ಷಕ ಚನ್ನಪ್ಪ, ಕಾರಾಗೃಹದ ಲಿಪಿಕ/ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರಾರಂಭದಲ್ಲಿ ಅಶ್ವಿನಿ ಹಿರೇಮಠ ಅವರು ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಈ ಸಂಸ್ಥೆಯ ಸಹಾಯಕ ಅಧೀಕ್ಷಕ ಬಿ. ಸುರೇಶ್ ವಂದಿಸಿದರು. ಸಂಸ್ಥೆಯ ಸಹಾಯಕ ಅಡಳಿತಾಧಿಕಾರಿಗಳಾದ ಭೀಮಾಶಂಕರ ಡಾಂಗೆ ಪ್ರಾರ್ಥನಾ ಗೀತೆ ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X