Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಿಯುಕೆಯ ಎರಡು...

Kalaburagi | ಸಿಯುಕೆಯ ಎರಡು ಸ್ಟಾರ್ಟಪ್‌ಗಳು ‘ಮಂಥನ್ ಸ್ಟಾರ್ಟಪ್ ನಿಧಿ–2026’ ಅಂತಿಮ ಸುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ29 Aug 2026 5:58 PM IST
share
Kalaburagi | ಸಿಯುಕೆಯ ಎರಡು ಸ್ಟಾರ್ಟಪ್‌ಗಳು ‘ಮಂಥನ್ ಸ್ಟಾರ್ಟಪ್ ನಿಧಿ–2026’ ಅಂತಿಮ ಸುತ್ತಿಗೆ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದ ವ್ಯವಹಾರ ನಿರ್ವಹಣಾ ವಿಭಾಗ ಹಾಗೂ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳ ನೇತೃತ್ವದ ಎರಡು ಸ್ಟಾರ್ಟಪ್ ತಂಡಗಳು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿರುವ ‘ಮಂಥನ್ ಸ್ಟಾರ್ಟಪ್ ನಿಧಿ–2026’ರ ಅಂತಿಮ ಸುತ್ತಿಗೆ ಆಯ್ಕೆಯಾಗಿವೆ.

‘ಮಂಥನ್’ ಎಫ್‌ಕೆಸಿಸಿಐನ ಪ್ರಮುಖ ವಾರ್ಷಿಕ ಬಿಸಿನೆಸ್ ಪ್ಲಾನ್ ಪ್ರಸ್ತುತಿ ಸ್ಪರ್ಧೆಯಾಗಿದ್ದು, ವಿದ್ಯಾರ್ಥಿಗಳು, ಯುವ ಉದ್ಯಮಿಗಳು ಹಾಗೂ ಸ್ಟಾರ್ಟಪ್ ಸಂಸ್ಥಾಪಕರಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿದೆ. ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳ ಉದ್ಯಮ ಕಲ್ಪನೆಗಳನ್ನು ಗುರುತಿಸಿ, ಹೊಸ ಉದ್ಯಮ ಆರಂಭಿಸುವ ಯೋಜನೆಗಳಿಗೆ ಅನುದಾನ ಹಾಗೂ ಕೈಗಾರಿಕಾ ಕ್ಷೇತ್ರದ ಪ್ರೋತ್ಸಾಹ ಒದಗಿಸುವ ಈ ಸ್ಪರ್ಧೆಯನ್ನು 2007ರಿಂದ ನಡೆಸಿಕೊಂಡು ಬರಲಾಗುತ್ತಿದ್ದು, ಈ ವರ್ಷ 18ನೇ ಆವೃತ್ತಿ ನಡೆಯುತ್ತಿದೆ.

ಸಿಯುಕೆಯ ಎಂಬಿಎ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಸೃಷ್ಟಿ ಪ್ರಿಯಾ ಹಾಗೂ ಅಜರ್ ಇಕ್ಬಾಲ್ ಮತ್ತು ಎಂಬಿಎ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆಯ ದ್ವಿತೀಯ ವರ್ಷದ ವಿದ್ಯಾರ್ಥಿ ಮುಕೇಶ್ ಜಿ. ಅವರು ಅಭಿವೃದ್ಧಿಪಡಿಸಿರುವ ‘ನೆಕ್ಸ್ಟ್ ಬಸ್’ ಕೃತಕ ಬುದ್ಧಿಮತ್ತೆ (AI) ಹಾಗೂ ಇಂಟರ್ನೆಟ್ ಆಫ್ ಥಿಂಗ್ಸ್ (IoT) ಆಧಾರಿತ ಸಾರ್ವಜನಿಕ ಸಾರಿಗೆ ಪರಿಹಾರವಾಗಿದೆ.

ಇನ್ನೊಂದು ತಂಡದ ‘ಪೂರ್ಣ ಯಾತ್ರಾ’ ಯೋಜನೆಯು ‘ಒಂದು ಯೋಜನೆ, ಒಂದು ಪಾವತಿ, ಸಂಪೂರ್ಣ ಪ್ರವಾಸ’ ಎಂಬ ಪರಿಕಲ್ಪನೆಯೊಂದಿಗೆ ರೂಪುಗೊಂಡಿರುವ ಸಮಗ್ರ ಪ್ರಯಾಣ ವೇದಿಕೆಯಾಗಿದೆ. ಪ್ರವಾಸಿ ಸ್ಥಳಗಳ ಹುಡುಕಾಟ, ಪ್ರವಾಸ ಯೋಜನೆ, ಸಾರಿಗೆ ಬುಕ್ಕಿಂಗ್, ಹೋಟೆಲ್ ಕಾಯ್ದಿರಿಸುವಿಕೆ, ಪ್ರವೇಶ ಟಿಕೆಟ್ ಹಾಗೂ ಊಟದ ವ್ಯವಸ್ಥೆ ಸೇರಿದಂತೆ ಪ್ರವಾಸಕ್ಕೆ ಅಗತ್ಯವಿರುವ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒಂದೇ ಬಾರಿ ಪಾವತಿ ಮಾಡುವ ಸೌಲಭ್ಯದೊಂದಿಗೆ ಒದಗಿಸುವುದು ಇದರ ಉದ್ದೇಶವಾಗಿದೆ.

ಬೆಂಗಳೂರು, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಪ್ರಮುಖ ನಗರಗಳಿಗೆ ಸೇವೆಯನ್ನು ವಿಸ್ತರಿಸುವ ಯೋಜನೆಯನ್ನು ‘ಪೂರ್ಣ ಯಾತ್ರಾ’ ತಂಡ ಹೊಂದಿದೆ. ಸುಗಮ ಹಾಗೂ ಕೈಗೆಟುಕುವ ಪ್ರಯಾಣದ ಅನುಭವ ಒದಗಿಸುವ ಗುರಿಯೊಂದಿಗೆ 20 ಲಕ್ಷ ಬಳಕೆದಾರರು, ಒಂದು ಲಕ್ಷ ಬುಕ್ಕಿಂಗ್‌ಗಳು ಹಾಗೂ ವಾರ್ಷಿಕ 4.50 ಕೋಟಿ ರೂ. ಆದಾಯ ಸಾಧಿಸುವ ಗುರಿಯನ್ನು ತಂಡ ಹೊಂದಿದೆ.

‘ಪೂರ್ಣ ಯಾತ್ರಾ’ ಸ್ಟಾರ್ಟಪ್‌ನ್ನು ಎಂಬಿಎ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆ ವಿದ್ಯಾರ್ಥಿ ಉಂಕೂರು ಲಕ್ಷ್ಮಣ ರಾವ್, ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಿನ್ಸ್ ಕುಮಾರ್, ಇತಿಹಾಸ ಮತ್ತು ಪುರಾತತ್ವ ವಿಭಾಗದ ಉನ್ನವ ಯೋಗೇಶ್ವರ ರಾವ್ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಂಡ್ಯ ವಿಠಲ್ ಅವರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಅವರೊಂದಿಗೆ ಸಂವಾದ ನಡೆಸುವ ಅವಕಾಶವೂ ವಿದ್ಯಾರ್ಥಿಗಳಿಗೆ ದೊರೆಯಿತು. ಸ್ಪರ್ಧೆಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ತಂಡಗಳಿಗೆ 25 ಲಕ್ಷ ರೂ. ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ.

ವಿದ್ಯಾರ್ಥಿಗಳ ಸಾಧನೆಗೆ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅಭಿನಂದನೆ ಸಲ್ಲಿಸಿದ್ದಾರೆ. ಇದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ–2020ರ ಆಶಯದಂತೆ ವಿದ್ಯಾರ್ಥಿಗಳು ಶೈಕ್ಷಣಿಕ ಜ್ಞಾನದ ಜೊತೆಗೆ ಕೌಶಲ ಹಾಗೂ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಅವರು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X