ಕಲಬುರಗಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ : ಸಾಲ ಬಾಧೆಯಿಂದ ತಾಳಲಾರದೆ ರೈತನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲ್ಲೂಕಿನ ಎಳೆನಾವದಗಿ ಗ್ರಾಮದಲ್ಲಿ ನಡೆದಿದೆ.
ಅಶೋಕ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ರೈತ ಅಶೋಕ ಕೃಷಿ ಚಟುವಟಿಕೆಗಾಗಿ 15 ಲಕ್ಷ ರೂ. ವರೆಗೂ ಸಾಲ ಮಾಡಿದ್ದ ಎಂದು ತಿಳಿದುಬಂದಿದೆ.
ರೈತ ಮಾಡಿರೋ ಎಲ್ಲ ಸಾಲಮನ್ನಾ ಮಾಡಬೇಕೆಂದು ಗ್ರಾಮಸ್ಥರು, ಕಲ್ಯಾಣ ಕರ್ನಾಟಕ ಜನಪರ ಕಲ್ಯಾಣ ವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಘಟನೆ ನರೋಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





