Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಲವ್‌ ಜಿಹಾದ್‌ ಕುರಿತು...

ಕಲಬುರಗಿ | ಲವ್‌ ಜಿಹಾದ್‌ ಕುರಿತು ಸ್ಥಳೀಯ ಪತ್ರಿಕೆಯಿಂದ ಆಧಾರರಹಿತ ವರದಿ : ಕರೆಸಿ ವಿಚಾರಣೆ ನಡೆಸುತ್ತೇವೆ ; ಪೊಲೀಸ್‌ ಆಯುಕ್ತ ಡಾ.ಶರಣಪ್ಪ ಎಸ್.ಡಿ

ವಾರ್ತಾಭಾರತಿವಾರ್ತಾಭಾರತಿ12 Oct 2025 7:06 PM IST
share
ಕಲಬುರಗಿ | ಲವ್‌ ಜಿಹಾದ್‌ ಕುರಿತು ಸ್ಥಳೀಯ ಪತ್ರಿಕೆಯಿಂದ ಆಧಾರರಹಿತ ವರದಿ : ಕರೆಸಿ ವಿಚಾರಣೆ ನಡೆಸುತ್ತೇವೆ ; ಪೊಲೀಸ್‌ ಆಯುಕ್ತ ಡಾ.ಶರಣಪ್ಪ ಎಸ್.ಡಿ

ಕಲಬುರಗಿ: 'ಕಲಬುರಗಿ ನಗರದಲ್ಲಿ ಒಂದೇ ವರ್ಷದಲ್ಲಿ 24 ಯುವತಿಯರು ಇಸ್ಲಾಂ ಲವ್ ಜಿಹಾದ್‌ಗೆ ಬಲಿ' ಎಂಬ ಶೀರ್ಷಿಕೆ ನೀಡಿ ವರದಿ ಪ್ರಕಟಿಸಿರುವ ಸಂಜೆ ಪತ್ರಿಕೆ ʼಕರ್ನಾಟಕ ಸಂಧ್ಯಾಕಾಲʼದ ಸಂಪಾದಕರನ್ನು ಕರೆಸಿ ಈ ಅಂಕಿ ಅಂಶ ಎಲ್ಲಿಂದ ಪಡೆಯಲಾಗಿದೆ ಎಂದು ವಿಚಾರಣೆ ನಡೆಸುತ್ತೇವೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಹೇಳಿದ್ದಾರೆ.

ಕಲಬುರಗಿ ನಗರದಲ್ಲಿ ಆರೆಸ್ಸೆಸ್‌ ಪಥ ಸಂಚಲನ ನಡೆಯುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಸಂಧ್ಯಾಕಾಲ ಎಂಬ ಕನ್ನಡ ಪ್ರಾದೇಶಿಕ ದಿನಪತ್ರಿಕೆ ರವಿವಾರ(ಅಕ್ಟೋಬರ್ 12) ಮುಖಪುಟದಲ್ಲಿ ವಿವಾದಿತ ತಲೆ ಬರಹ ನೀಡಿರುವ ವರದಿ ವೈರಲ್ ಆಗುತ್ತಿದೆ.

ʼಕರ್ನಾಟಕ ಸಂಧ್ಯಾಕಾಲʼ ಪತ್ರಿಕೆಯ ವರದಿಯಲ್ಲೇನಿತ್ತು?

"ತಾಂತ್ರಿಕ, ವೈದ್ಯಕೀಯ, ಮತ್ತು ಪದವಿ ಓದುತ್ತಿರುವ ಯುವತಿಯರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುವ ಮುಸ್ಲಿಂ ಯುವಕರು ನಗರದಲ್ಲಿನ ವಿವಿಧ ಶಾಲಾ ಕಾಲೇಜುಗಳ ಸುತ್ತಮುತ್ತ ತಿರುಗುತ್ತಾ, ವಿದ್ಯಾರ್ಥಿನಿಯರನ್ನು ಪುಸಲಾಯಿಸಿ ಪ್ರೇಮ ಭೀಕ್ಷೆ ಬೇಡಿ ತಮ್ಮ ಬಲೆಗೆ ಬೀಳುವಂತೆ ಮಾಡಿ ನಂತರ ಅವರನ್ನು ಅಪಹರಿಸಿ ಮದುವೆಯಾಗುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ" ಎಂದು ವರದಿ ಉಲ್ಲೇಖಿಸಿದೆ.

"ಮದುವೆಯ ನಂತರ ಆ ಯುವತಿಯವರು ಸಿಂಧೂರ ಕುಂಕುಮ ಅಳಿಸಿ ಹಾಕಿ, ಹಿಂದೂ ಧರ್ಮದಲ್ಲಿ ಪೂಜಿಸುವ ದೇವರುಗಳನ್ನು ಪೂಜಾ ವಿಧಿ-ವಿಧಾನಗಳನ್ನು ಕಡ್ಡಾಯವಾಗಿ ನಿಷೇಧಿಸಿ, ಅವರ ಕೈಗೆ ಕುರ್‌ಆನ್‌ ನೀಡಿ, ಕುರ್‌ಆನ್‌ ಪಠಣ ಮಾಡುವಂತೆ ಒತ್ತಾಯ ಮಾಡುತ್ತಾರೆಂದು ಕೆಲವು ಮತಾಂತರವಾದ ಯುವತಿಯರು ಹೇಳಿಕೊಳ್ಳುತ್ತಾರೆ. ಮತಾಂತರವಾದ ಹಿಂದೂ ಸಸ್ಯಹಾರಿ ಯುವತಿಯರಿಗೆ ಕಡ್ಡಾಯವಾಗಿ ಮಾಂಸಹಾರ ತಯಾರಿಸುವುದು ಮತ್ತು ಸೇವನೆ ಮಾಡಲು ಪ್ರೇರೆಪಿಸುತ್ತಾರೆಂದು ಹೇಳಲಾಗುತ್ತಿದೆ, ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿರುವ ಪೂರ್ವದಲ್ಲಿ ಗೋ ಪೂಜೆ ಮಾಡುತ್ತಿದ್ದ ಯುವತಿಯರು ಸೆಕ್ಸ್-ದೋಖಾಕ್ಕೆ ಬಲಿಯಾದ ನಂತರ ಗೋವಿನ ಮೌಂಸದ ಅಡುಗೆ ಮಾಡುವ ಪರಿಸ್ಥಿತಿ ಸೃಷ್ಟಿಸಿ ಸಂಪೂರ್ಣ ಮೌಂಸಹಾರಿಗಳನ್ನಾಗಿ ಯುವತಿಯರನ್ನು ಪರಿವರ್ತಿಸಲಾಗುತ್ತಿದೆ. ಕಲಬುರಗಿಯಲ್ಲಿ ಕೆಲವೇ ಕೆಲವು ದಶಕಗಳಲ್ಲಿ ಇಸ್ಲಾಮೀಕರಣ ಮಾಡುವ ಹುನ್ನಾರ ಹೊಂದಿದ್ದಾರೆಂದು ಕೆಲವು ಪಂಡಿತರು ವಿಶ್ಲೇಷಿಸುತ್ತಿದ್ದಾರೆ" ಎಂದು ಪತ್ರಿಕೆ ವರದಿಯಲ್ಲಿ ತಿಳಿಸಿದೆ.

ಈ ಕುರಿತು ವಾರ್ತಾಭಾರತಿಗೆ ಪ್ರತಿಕ್ರಿಯಿಸಿದ ಕಲಬುರಗಿ ನಗರ ಪೊಲೀಸ್‌ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಪತ್ರಿಕೆಯಲ್ಲಿ ಪ್ರಕಟವಾದ ಅಂಕಿ ಅಂಶ ನಾವು ನೀಡಿಲ್ಲ. ಎಲ್ಲಿಂದ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ. ಅಂಕಿ ಅಂಶ ಬೇಕೆಂದರೆ ಅಧಿಕೃತವಾಗಿ ಮನವಿ ಕೊಟ್ಟರೆ ಪರಿಶೀಲಿಸಿ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X