Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರ್ಕಾರಿ ಶಿಕ್ಷಕರು ಸಮಾನ...

Kalaburagi | ಸರ್ಕಾರಿ ಶಿಕ್ಷಕರು ಸಮಾನ ಹುದ್ದೆಗೆ ಮರು ಅರ್ಜಿ ಸಲ್ಲಿಸುವುದನ್ನು ನಿಷೇಧಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 July 2026 8:44 PM IST
share
Kalaburagi | ಸರ್ಕಾರಿ ಶಿಕ್ಷಕರು ಸಮಾನ ಹುದ್ದೆಗೆ ಮರು ಅರ್ಜಿ ಸಲ್ಲಿಸುವುದನ್ನು ನಿಷೇಧಿಸುವಂತೆ ಆಗ್ರಹ

ಕಲಬುರಗಿ: ಸರ್ಕಾರಿ ಸೇವೆಯಲ್ಲಿರುವ ಶಿಕ್ಷಕರು ಅದೇ ಅಥವಾ ಸಮಾನ ಶಿಕ್ಷಕರ ಹುದ್ದೆಗಳಿಗೆ ಮರು ಅರ್ಜಿ ಸಲ್ಲಿಸುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ, ರಿಪಬ್ಲಿಕನ್ ಯೂಥ್ ಫೆಡರೇಶನ್, ಸಮರ್ಥ ಸ್ಟಡಿ ಸರ್ಕಲ್ ಸೇರಿದಂತೆ ವಿವಿಧ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಡಿ.ಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಂಬರುವ ದಿನಗಳಲ್ಲಿ ಶಾಲಾ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಬೀಳಲಿದ್ದು, ಕಳೆದ ನಾಲ್ಕು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವ ಕಾರಣ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅವಕಾಶದಿಂದ ವಂಚಿತರಾಗಿದ್ದಾರೆ. ಮತ್ತೊಂದೆಡೆ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ಲಕ್ಷಾಂತರ ಪದವೀಧರರು ನಿರುದ್ಯೋಗಿಗಳಾಗಿದ್ದು, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಸಿವಿಲ್ ಸರ್ವಿಸ್ (ನೇಮಕಾತಿ) ನಿಯಮಗಳ ಪ್ರಕಾರ ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳು ಮತ್ತೊಂದು ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ನಿಯಮದ ಅನ್ವಯ ಈಗಾಗಲೇ ಸರ್ಕಾರಿ ಶಿಕ್ಷಕರಾಗಿರುವವರು ಮತ್ತೊಮ್ಮೆ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಿ ಹೊಸ ಹುದ್ದೆಗೆ ಆಯ್ಕೆಯಾಗುತ್ತಿರುವುದರಿಂದ ಹಳೆಯ ಹುದ್ದೆಗಳು ಖಾಲಿಯಾಗುತ್ತಿವೆ. ಇದರಿಂದ ಹೊಸ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದ್ದು, ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಕೆಲ ಶಿಕ್ಷಕರು ತಮ್ಮ ಸೇವಾ ವಿವರಗಳನ್ನು ಅರ್ಜಿಯಲ್ಲಿ ನಮೂದಿಸದೆ ಸಾಮಾನ್ಯ ಅಭ್ಯರ್ಥಿಗಳಂತೆ ಅರ್ಜಿ ಸಲ್ಲಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬಳಿಕ ಮರು ಆಯ್ಕೆಯಾದ ನಂತರ ಹಳೆಯ ಹುದ್ದೆಗೆ ರಾಜೀನಾಮೆ ನೀಡಿ ಹೊಸ ಸ್ಥಳಕ್ಕೆ ಸೇರುತ್ತಿರುವ ಪರಿಣಾಮ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ದೀರ್ಘಕಾಲ ಖಾಲಿ ಉಳಿದು ಶಿಕ್ಷಣದ ಗುಣಮಟ್ಟಕ್ಕೂ ಧಕ್ಕೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಆಧಾರ್, ಎಚ್‌ಆರ್‌ಎಂಎಸ್ ಹಾಗೂ ಎಸ್‌ಎಟಿಎಸ್ ತಂತ್ರಾಂಶಗಳು ಪರಸ್ಪರ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ, ಆನ್‌ಲೈನ್ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳನ್ನು ತಾಂತ್ರಿಕವಾಗಿ ಗುರುತಿಸಿ ಮರು ಅರ್ಜಿಗಳನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರಿಪಬ್ಲಿಕನ್ ಯೂತ್ ಫೆಡರೇಶನ್‌ನ ಹಣಮಂತ ಇಟಗಿ, ಕಲ್ಯಾಣ ನಾಡು ವಿಕಾಸ ವೇದಿಕೆ ಅಧ್ಯಕ್ಷ ಮುತ್ತಣ್ಣ ನಡಗೇರಿ, ಯುವ ಹೋರಾಟಗಾರ ಡಾ. ಅನಿಲ ಟೆಂಗಳಿ, ಸಮರ್ಥ ಸ್ಟಡಿ ಸೆಂಟರ್ ನಿರ್ದೇಶಕ ಸಂತೋಷ ಪೂಜಾರಿ, ಬದುಕು ಕರಿಯರ್ ಅಕಾಡೆಮಿ ಅಧ್ಯಕ್ಷ ಪಂಡಿತ್ ಮದುಗುಣಕಿ, ಸಿದ್ದು ಬೆಲಸೂರ, ಅಲ್ಲಮಪ್ರಭು ನಿಂಬರ್ಗಾ, ಶ್ರೀಧರ ನರೋಣಾ, ಬಾಬು ಬೀಳಗೆ, ಉಮೇಶ ಶೃಂಗೇರಿ, ಕೇದರನಾಥ, ಶಿವಾನಂದ ಸೇರಿದಂತೆ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಉಪಸ್ಥಿತರಿದ್ದರು.

Tags

KalaburagiTeachers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X