Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬರಗಾಲದಲ್ಲಿ ಅರಿಶಿಣ ಬೆಳೆ...

Kalaburagi | ಬರಗಾಲದಲ್ಲಿ ಅರಿಶಿಣ ಬೆಳೆ ನಿರ್ವಹಣೆಗೆ ಎರೆಜಲ, ಜೀವಾಮೃತ ಬಳಸಿ: ಕೆವಿಕೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ8 July 2026 7:21 PM IST
share
Kalaburagi | ಬರಗಾಲದಲ್ಲಿ ಅರಿಶಿಣ ಬೆಳೆ ನಿರ್ವಹಣೆಗೆ ಎರೆಜಲ, ಜೀವಾಮೃತ ಬಳಸಿ: ಕೆವಿಕೆ ಸಲಹೆ

ಕಲಬುರಗಿ: ಜೂನ್ ಹಾಗೂ ಜುಲೈ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದು, ವಿಶೇಷವಾಗಿ ಚಿಂಚೋಳಿ ಭಾಗದ ಅರಿಶಿಣ ಬೆಳೆ ನಿರ್ವಹಣೆಗೆ ರೈತರು ಎರೆಜಲ ಹಾಗೂ ಜೀವಾಮೃತದಂತಹ ಸಾವಯವ ಪೋಷಕಾಂಶಗಳನ್ನು ಬಳಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

ಚಿಂಚೋಳಿ ತಾಲೂಕಿನ ಚಿಮ್ಮನಚೋಡ್, ಹಸಿರುಗುಂಡಗಿ ಹಾಗೂ ಗರಂಪಳ್ಳಿ ಗ್ರಾಮಗಳ ಅರಿಶಿಣ ಬೆಳೆ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಜಹೀರ್ ಅಹಮದ್, ಈ ವರ್ಷ ಮಳೆಯ ಕೊರತೆಯಿಂದ ಅರಿಶಿಣ ಬೆಳೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಚಿಂಚೋಳಿ ಭಾಗದಲ್ಲಿ ಸಾಂಪ್ರದಾಯಿಕವಾಗಿ ಸೇಲಂ–ಚಿಂಚೋಳಿ ಹಾಗೂ ಬೀದರ್ ಸ್ಥಳೀಯ ತಳಿಯ ಅರಿಶಿಣವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಬೆಳೆ ಉತ್ತಮ ಬೆಳವಣಿಗೆಗಾಗಿ ರೈತರು ಎರೆಜಲ ಅಥವಾ ಜೀವಾಮೃತವನ್ನು ಪ್ರತಿ ಲೀಟರ್ ನೀರಿಗೆ 5 ಮಿಲಿ ಪ್ರಮಾಣದಲ್ಲಿ ಬೆರೆಸಿ ಸಿಂಪಡಿಸಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಮೋಡ ಕವಿದ ವಾತಾವರಣ ಇದ್ದರೂ ಬೀಸುತ್ತಿರುವ ಗಾಳಿಯಿಂದ ಮಳೆಯಾಗುತ್ತಿಲ್ಲ. ಇದರ ಪರಿಣಾಮವಾಗಿ ಬೆಳೆಗಳಲ್ಲಿ ಎಲೆ ತಿನ್ನುವ ಹುಳದ ಬಾಧೆ ಕಾಣಿಸಿಕೊಳ್ಳುತ್ತಿದ್ದು, ಆರಂಭಿಕ ಹಂತದಲ್ಲೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿ ಕೀಟ ನಿಯಂತ್ರಣ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ವಿಜ್ಞಾನಿ ಡಾ. ಯೂಸುಫ್ ಅಲಿ ನಿಂಬರ್ಗಿ ಮಾತನಾಡಿ, ಜಿಲ್ಲೆಯಲ್ಲಿ ಕಬ್ಬು ಬೆಳೆ ವಿಸ್ತೀರ್ಣ ಹೆಚ್ಚುತ್ತಿದ್ದು, ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಕಳೆ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದರು. ದೀರ್ಘಾವಧಿಯ ಬೆಳೆಗಳಾದ ಅರಿಶಿಣ ಹಾಗೂ ಕಬ್ಬಿನಲ್ಲಿ ಬೋದು ಏರಿಸುವಿಕೆ, ಪ್ರಮುಖ ಬೆಳವಣಿಗೆಯ ಹಂತಗಳಲ್ಲಿ ನೀರಾವರಿ ನಿರ್ವಹಣೆ ಸೇರಿದಂತೆ ವಿವಿಧ ತಾಂತ್ರಿಕ ವಿಷಯಗಳ ಕುರಿತು ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಧೋಳ ಹಾಗೂ ಮಹಾಲಿಂಗಾಪುರ ಭಾಗಗಳಲ್ಲಿ ಜನಪ್ರಿಯವಾಗಿರುವ ‘ಚಿನ್ನ ಸೇಲಂ’ ಅರಿಶಿಣ ತಳಿಯನ್ನು ಈ ವರ್ಷ ಹಸಿರುಗುಂಡಗಿ ಗ್ರಾಮದ ಇಬ್ಬರು ರೈತರು ಪ್ರಾಯೋಗಿಕವಾಗಿ ಬೆಳೆಸಿದ್ದು, ಜುಲೈ ತಿಂಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯೊಂದಿಗೆ ಅರಿಶಿಣ, ಕಬ್ಬು ಹಾಗೂ ದ್ವಿದಳ ಧಾನ್ಯಗಳ ಬೆಳೆಗಳನ್ನು ರೈತರು ನಿರ್ವಹಿಸುತ್ತಿದ್ದಾರೆ ಎಂದು ವಿಜ್ಞಾನಿಗಳು ಹೇಳಿದರು.

ಈ ಸಂದರ್ಭದಲ್ಲಿ ರೈತರಾದ ರಾಜಶೇಖರ್ ನಿಪ್ಪಾಣಿ, ನಾಗಭೂಷಣ ಕೋರೆ, ಶ್ರೀಕಾಂತ್ ರೆಡ್ಡಿ, ಚನ್ನಬಸಪ್ಪ, ವೀರೇಶ್, ಗುಂಡಪ್ಪ ಹಾಗೂ ನಾಗಬಸಪ್ಪ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X