Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಚನ ಸಾಹಿತ್ಯವು ಭಾರತೀಯ...

ಕಲಬುರಗಿ | ವಚನ ಸಾಹಿತ್ಯವು ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗ: ಡಾ.ಮಯೂರ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ22 July 2025 9:45 PM IST
share
ಕಲಬುರಗಿ | ವಚನ ಸಾಹಿತ್ಯವು ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗ: ಡಾ.ಮಯೂರ ಪೂಜಾರಿ

ಕಲಬುರಗಿ: ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯವು ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ ಪೂಜಾರಿ ಹೇಳಿದರು.

ಆಳಂದ ತಾಲೂಕಿನ ಕಡಗಂಚಿ ಬಳಿಯ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಶಿಕ್ಷಣಶಾಸ್ತ್ರ ವಿಭಾಗದಿಂದ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ 'ಸಮಕಾಲೀನ ಶೈಕ್ಷಣಿಕ ಸವಾಲು ಮತ್ತು ಸಾಧ್ಯತೆ, ಕುರಿತ ಸಂವಾದದಲ್ಲಿ ಮಾತನಾಡಿದರು.

“ಉನ್ನತ ಶಿಕ್ಷಣದಲ್ಲಿ ವಚನ ಸಾಹಿತ್ಯ ಮತ್ತು ವಚನಕಾರರ ಅಧ್ಯಯನ ಈ ಕಾಲದ ಅಗತ್ಯ. ವಚನಗಳು, ಬಸವಣ್ಣನವರು, ಅಲ್ಲಮ ಪ್ರಭು ಉನ್ನತ ಶಿಕ್ಷಣದಲ್ಲಿ ಸಂಶೋಧನೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಮರ್ಶೆಯ ಸ್ವರೂಪ ಪಡೆಯುವುದು ಮುಖ್ಯ. ಹಾಗೆಯೇ ಮೌಲ್ಯಗಳನ್ನು ಬೆಳೆಸುವ ಚಾರಿತ್ರಿಕ ಪ್ರಜ್ಞೆ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಬೆಳವಣಿಗೆ ನಡೆಯಬೇಕು” ಎಂದರು.

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿಕಾಸ ಕುಮಾರ್ ಮಾತನಾಡಿ, “ಬಸವಣ್ಣ ಮತ್ತು ಅವರ ಸಮಕಾಲೀನ ವಚನಕಾರರ ಚಾರಿತ್ರಿಕ ಸಂದರ್ಭ ಅನಂತವಾದದ್ದು. ಶರಣರು ಕಟ್ಟಿಕೊಟ್ಟ ತಾತ್ವಿಕ ಚಿಂತನೆ ಅತ್ಯಂತ ವೈಚಾರಿಕ, ಬೌದ್ಧಿಕ ನಿಲುವಿನಿಂದ ಕೂಡಿದೆ. ಉತ್ತರ ಭಾರತದ ಜನರಿಗೆ ಶರಣರ ತತ್ವ ಸಿದ್ಧಾಂತಗಳ ಪರಿಚಯವಿಲ್ಲ. ಹಿಂದಿ, ಬೆಂಗಾಲಿ , ಗುಜರಾತಿ ಸೇರಿ ಭಾರತೀಯ ಬೇರೆ ಬೇರೆ ಭಾಷೆಯಲ್ಲಿ ಕನ್ನಡದ ವಚನಗಳ ತರ್ಜುಮೆ ಅತ್ಯಗತ್ಯ. ಭಾರತದ ಹಲವು ವಿಶ್ವವಿದ್ಯಾಲಯಗಳಲ್ಲಿ ವಚನಗಳ ಅಧ್ಯಯನ ನಡೆಯುವ ಅಗತ್ಯವಿದೆ. ಕನ್ನಡೇತರ ಸಾಹಿತ್ಯದ ಓದುಗರಿಗೆ, ಬರಹಗಾರರಿಗೆ ವಚನ ಸಾಹಿತ್ಯ ತಲುಪಬೇಕಾಗಿದೆ” ಎಂದರು.

ಸಿಯುಕೆ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಮಲ್ಲೇಶ್ ಉಮ್ಮಲ್ಲಾ ಮಾತನಾಡಿ, “ಶರಣರ ಆರ್ಥಿಕ ಹಾಗೂ ರಾಜಕೀಯ ಚಿಂತನೆ ಅಕಾಡೆಮಿಕ್ ಚರ್ಚೆಯ ಭಾಗವಾಗಬೇಕು. ಇಷ್ಟೂಂದು ವಿಶಿಷ್ಟ ಮತ್ತು ವೈವಿಧ್ಯಮಯ ಬದುಕಿನ ಚಿಂತನೆ ಕಟ್ಟಿಕೊಟ್ಟ ಸಾಹಿತ್ಯ ಭಾರತೀಯ ಸಂದರ್ಭದಲ್ಲಿ ಸಿಗದು. ದೇಶದ ಎಲ್ಲ ವಿಶ್ವವಿದ್ಯಾಲಯದ ಆವರಣಗಳಲ್ಲಿ ವಚನ ಸಾಹಿತ್ಯದ ಚರ್ಚೆಯಾಗಬೇಕು” ಎಂದರು.

ಸಿಯುಕೆ ಹಳೆಯ ವಿದ್ಯಾರ್ಥಿ ಹಾಗೂ ಬಸವಕಲ್ಯಾಣದ ಉಪನ್ಯಾಸಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿದರು.

ಈ ಸಂದರ್ಭದಲ್ಲಿ ಸಿಯುಕೆ ಪ್ರಾಧ್ಯಾಪಕ ಹಾಗೂ ಸಂವಾದ-ಉಪನ್ಯಾಸದ ಸಂಯೋಜಕ ಡಾ ಥಿಯಾಗು, ಡಾ.ಪಿ.ಬಿ.ಬಾಗೇವಾಡಿ, ಕೇರಳ ಕೇಂದ್ರೀಯ ವಿವಿಯ ಡಾ.ಶಿವಕುಮಾರ, ಡಾ.ಸನೂಪ್ ಎಂ.ಎಸ್., ಬಿಹಾರದ ಡಾ.ಓಂಕಾರ, ಒಡಿಸ್ಸಾ ವಿವಿಯ ಡಾ ಸುಶಾಂತ್ ನಾಯಕ, ದೆಹಲಿ ವಿವಿಯ ಡಾ.ಅಖಿಲೇಶ್ ಮಿಶ್ರಾ, ಜೋತ್ಸ್ನಾ, ಡಾ.ಸಂತೋಷ , ಡಾ.ಶಿವಂ, ಪ್ರಸಾದ್ ಸ್ವಾಮಿ, ರಾಜು ಶಿಂಧೆ, ಪವನ ಪಾಟೀಲ, ಗಂಗಾಧರ ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X