Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭಾರತೀಯ ನ್ಯಾಯಾಂಗಕ್ಕೆ...

ಕಲಬುರಗಿ | ಭಾರತೀಯ ನ್ಯಾಯಾಂಗಕ್ಕೆ ವಿಜ್ಞಾನೇಶ್ವರರ ಕೊಡುಗೆ ಅವಿಸ್ಮರಣೀಯ : ಮುಡಬಿ ಗುಂಡೇರಾವ್

ಜಿಲ್ಲೆಯ ಐತಿಹಾಸಿಕ ಕ್ಷೇತ್ರಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-7

ವಾರ್ತಾಭಾರತಿವಾರ್ತಾಭಾರತಿ2 Jan 2025 3:14 PM IST
share
Photo of Program

ಕಲಬುರಗಿ : ಶ್ರೇಷ್ಟ ನ್ಯಾಯಶಾಸ್ತ್ರಜ್ಞರಾದ ವಿಜ್ಞಾನೇಶ್ವರರು ದೇಶದ ಮೊದಲ ನ್ಯಾಯಶಾಸ್ತ್ರ ಗ್ರಂಥ ‘ಮಿತಾಕ್ಷರ’ವನ್ನು ನೀಡಿ ಮರತೂರನ್ನು ನ್ಯಾಯಶಾಸ್ತ್ರದ ಕಾಶಿಯನ್ನಾಗಿಸಿದ್ದಾರೆ. ತನ್ಮೂಲಕ ಕಲಬುರಗಿ ಜಿಲ್ಲೆ, ಕನ್ನಡ ನಾಡಿನ ಕೀರ್ತಿಯನ್ನು ದೇಶದಾದ್ಯಂತ ಪಸರಿಸುವ ಮೂಲ ಭಾರತೀಯ ನ್ಯಾಯಾಂಗಕ್ಕೆ ಅವಿಸ್ಮರಣೀಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ತಿಳಿಸಿದ್ದಾರೆ.

ಶಹಾಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ಕಲಬುರಗಿಯ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ʼಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-7ʼರಲ್ಲಿ ಅವರು ಮಾತನಾಡಿದರು.

ಮರತೂರ ಗ್ರಾಮ ಆಧ್ಯಾತ್ಮ, ಐತಿಹಾಸಿಕ ಸ್ಥಳಗಳು, ಅಪರೂಪದ ವಾಸ್ತುಶಿಲ್ಪಗಳು, ದೇವಾಲಯಗಳು, ವೀರಗಲ್ಲುಗಳನ್ನು ಹೊಂದಿದೆ. ಪ್ರಸ್ತುತವಾಗಿ ಕಾಶಿ ವಿಶ್ವನಾಥ, ಕಾಳಿಂಗೇಶ್ವರ, ಗುಬ್ಬಿನಾಥ, ಈಶ್ವರ ದೇವಾಲಯಗಳಿವೆ. ಇಲ್ಲಿ 360 ದೇವಾಲಯಗಳು, ಭಾವಿಗಳು ಇದ್ದವು ಎಂಬ ಐತಿಹ್ಯವಿದೆ. ನಮ್ಮ ಸ್ಥಳೀಯ ಇತಿಹಾಸ ತಿಳಿಯಬೇಕಾದರೆ ಇಲ್ಲಿನ ದೇವಾಲಯಗಳು, ಸ್ಮಾರಕಗಳನ್ನು ರಕ್ಷಣೆ ಮಾಡುವುದು ಅಗತ್ಯವಾಗಿದೆ ಎಂದರು.

ಮರತೂರನ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ.ರವೀಂದ್ರ ಬಿ.ನರೋಣಿ ಮಾತನಾಡಿ, ನಮ್ಮ ಮರತೂರನ್ನು ವಿಜ್ಞಾನೇಶ್ವರರು ದೇಶಕ್ಕೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಆಗಿನ ಕಾಲದಲ್ಲಿಯೇ ಇಲ್ಲಿ ಕಾಲುವೆ ವ್ಯವಸ್ಥೆಯಿತ್ತು. ಸಾಂಬಾರು ಪದಾರ್ಥಗಳು ಬೇರೆ ಪ್ರದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು ಎಂಬ ಶಾಸನದಲ್ಲಿ ಉಲ್ಲೇಖವಾಗಿರುವುದು ಗಮನಿಸಿದರೆ, ನಮ್ಮ ಪ್ರದೇಶ ಅಭಿವೃದ್ಧಿಯ ಮೂಲಕ ಮಾದರಿಯಾಗಿತ್ತು ಎಂದು ತಿಳಿದುಬರುತ್ತದೆ. ಭವ್ಯವಾದ ಇತಿಹಾಸ, ಪರಂಪರೆಯನ್ನು ಪಠ್ಯಕ್ಕೆ ಸೇರ್ಪಡೆಗೊಳಿಸಿ, ವಿದ್ಯಾರ್ಥಿ ದೆಸೆಯಿಂದಲೇ ಪರಿಚಯಿಸುವ ಕಾರ್ಯವಾಗಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಪ್ರಮುಖರಾದ ಬಸವಪ್ರಭು ಜಿ.ಮುಡಬಿ, ಲಕ್ಷ್ಮೀಕಾಂತ್ ಮಡಿವಾಳ, ಬಸವರಾಜ ದುಗಣ್ಣ, ಶರಣು ಅಂಕಲಗಿ, ಶಾಮರಾಯ ಮಾಲಿಪಾಟೀಲ, ಮಲ್ಲಣ್ಣ ಅಣಕಲ್, ಶರಣಬಸಪ್ಪ ಪಟ್ಟೆದ್, ಸಂಗಣ್ಣ ಮೈನಾಳ, ನಾಗಣ್ಣ ರಾಯನಾಡ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X