Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ‘ಮಣ್ಣು–ನೀರು ಉಳಿಸಿ,...

Kalaburagi | ‘ಮಣ್ಣು–ನೀರು ಉಳಿಸಿ, ಭವಿಷ್ಯ ಉಳಿಸಿ’: ವಾಲ್ಮಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ31 Aug 2026 7:59 PM IST
share
Kalaburagi | ‘ಮಣ್ಣು–ನೀರು ಉಳಿಸಿ, ಭವಿಷ್ಯ ಉಳಿಸಿ’: ವಾಲ್ಮಿ ಕಾರ್ಯಾಗಾರ

ಕಲಬುರಗಿ: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ವತಿಯಿಂದ ಜಲ ಮೂಲಗಳ ಸಂರಕ್ಷಣೆ, ಮಣ್ಣು ಮತ್ತು ಮಳೆ ನೀರು ಕೊಯ್ಲು ಕುರಿತು ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಕೃಷಿ ಮಹಾವಿದ್ಯಾಲಯದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಕೃಷಿ ಮಹಾವಿದ್ಯಾಲಯದ ಡೀನ್ ಹಾಗೂ ಆವರಣ ಮುಖ್ಯಸ್ಥರಾದ ಡಾ. ಬಿ.ಎಂ. ದೊಡಮನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಳೆ ನೀರು ಕೊಯ್ಲು ಸೇರಿದಂತೆ ನೀರಿನ ಸಂರಕ್ಷಣಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಮಳೆ ನೀರಿನ ಮಹತ್ವವನ್ನು ಅರಿತುಕೊಂಡು, ಮಣ್ಣು ಮತ್ತು ನೀರಿನ ಸಂರಕ್ಷಣೆಯ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಧಾರವಾಡದ ನಿರ್ದೇಶಕ ಡಾ. ಗಿರೀಶ ಎಸ್. ಮರಡ್ಡಿ ಮಾತನಾಡಿ, ಮಣ್ಣು ಸಸ್ಯಗಳ ಬೆಳವಣಿಗೆಗೆ ಮೂಲಾಧಾರವಾಗಿದ್ದು, ಆರೋಗ್ಯಕರ ಮಣ್ಣು ಉತ್ತಮ ಗುಣಮಟ್ಟದ ಆಹಾರ ಉತ್ಪಾದನೆಗೆ ಅತ್ಯವಶ್ಯಕವಾಗಿದೆ ಎಂದರು.

ಮಣ್ಣು ಮತ್ತು ನೀರು ಅಮೂಲ್ಯ ನೈಸರ್ಗಿಕ ಸಂಪನ್ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಣ್ಣಿನ ಆರೋಗ್ಯ, ನೀರು ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಮಳೆ ನೀರು ಕೊಯ್ಲಿನ ವಿವಿಧ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.

‘ಮಣ್ಣು–ನೀರು ಉಳಿಸಿ, ಭವಿಷ್ಯ ಉಳಿಸಿ’ ಎಂಬ ಸಂದೇಶವನ್ನು ವಿದ್ಯಾರ್ಥಿಗಳ ಮೂಲಕ ಸಮಾಜಕ್ಕೆ ತಲುಪಿಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದು ಡಾ. ಗಿರೀಶ ಎಸ್. ಮರಡ್ಡಿ ಹೇಳಿದರು.

ಕಾರ್ಯಾಗಾರದಲ್ಲಿ ಕೃಷಿ ತಾಂತ್ರಿಕತೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ರೆಡ್ಡಿ ಅವರು ಮಳೆ ನೀರು ಕೊಯ್ಲಿನ ವಿವಿಧ ವಿಧಾನಗಳು ಹಾಗೂ ಅದರ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಲಯ ಕೃಷಿ ಸಂಶೋಧನಾ ಕೇಂದ್ರ, ಕಲಬುರಗಿಯ ಸಹ ಸಂಶೋಧನಾ ನಿರ್ದೇಶಕ ಡಾ. ಬಿ.ವಿ. ತೆಂಬೂರ್ನೆ, ಕೃಷಿ ಮಹಾವಿದ್ಯಾಲಯದ ಬೇಸಾಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಂಡಿತ ಎಸ್. ರಾಠೋಡ ಹಾಗೂ ಕೃಷಿ ಕೀಟಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಚಪ್ಪ ವಿ. ಹಾವೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕೃಷಿ ಕೀಟಶಾಸ್ತ್ರ ವಿಭಾಗದ ಘಟಕ ಮುಖ್ಯಸ್ಥ ಡಾ. ರಾಚಪ್ಪ ವಿ. ಹಾವೇರಿ ಸ್ವಾಗತಿಸಿದರು. ವಾಲ್ಮಿಯ ಸಮಾಲೋಚಕ ಫಕೀರೇಶ ಅಗಡಿ ಕಾರ್ಯಕ್ರಮ ನಿರೂಪಿಸಿದರು. ಸಹ ಪ್ರಾಧ್ಯಾಪಕ ಡಾ. ಗುರುರಾಜ ಪಾಟೀಲ ವಂದನಾರ್ಪಣೆ ಸಲ್ಲಿಸಿದರು.

Tags

KalaburagiWALMI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X