Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ...

ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ ಘೋಷಣೆಯಾದ ಯೋಜನೆಗಳು ಕಾರ್ಯರೂಪಕ್ಕೆ ತರುವುದು ಯಾವಾಗ?: ತಾಹೇರ್ ಹುಸೇನ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ24 Nov 2025 8:08 PM IST
share
ಕಲಬುರಗಿ | ಕೆಕೆಆರ್‌ಡಿಬಿಯಲ್ಲಿ ಘೋಷಣೆಯಾದ ಯೋಜನೆಗಳು ಕಾರ್ಯರೂಪಕ್ಕೆ ತರುವುದು ಯಾವಾಗ?: ತಾಹೇರ್ ಹುಸೇನ್ ಪ್ರಶ್ನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರತಿವರ್ಷ ಹಲವಾರು ಯೋಜನೆಗಳನ್ನು ಘೋಷಿಸುತ್ತಿದ್ದರೂ, ಅವುಗಳ ಅನುಷ್ಠಾನವು ಕೇವಲ 'ಕಾಗದ'ದಲ್ಲಿಯೇ ಉಳಿದಿವೆ, ಅವುಗಳು ಕಾರ್ಯರೂಪಕ್ಕೆ ಬರುವುದು ಯಾವಾಗ? ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಪ್ರಶ್ನಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಡಿಯಲ್ಲಿ ಘೋಷಣೆಯಾದ 160ಕ್ಕೂ ಹೆಚ್ಚು ಕಾಮಗಾರಿಗಳು 2025ರ ಅಕ್ಟೋಬರ್ ತಿಂಗಳವರೆಗೂ ಪ್ರಾರಂಭವೇ ಆಗಿಲ್ಲ ಎಂದರು.

ಬಾಲಭವನ ನಿರ್ಮಾಣ, ಮಹಿಳಾ ಕ್ರೀಡಾ ಸಂಕೀರ್ಣದ 8 ಕಾಮಗಾರಿಗಳು, ಚಂದ್ರಕಾಂತ್ ಪಾಟೀಲ್ ಕ್ರೀಡಾಂಗಣಕ್ಕೆ ಸಂಬಂಧಿಸಿದ 12 ಕಾಮಗಾರಿಗಳು ಸೇರಿ ಒಟ್ಟು 45 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ. ಕೂಡಲೇ ಘೋಷಣೆಯಾಗಿರುವ ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ನಗರದ ಎಂ.ಬಿ.ನಗರ, ಅಂಬಿಕಾ ನಗರ, ಮಹಾಗಾಂವ್‌ನಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕ/ಬಾಲಕಿಯರ ವಸತಿ ನಿಲಯಗಳ ನಿರ್ಮಾಣ, ಮಿನಿ ವಿಧಾನಸೌಧದಲ್ಲಿ ಸಭಾಂಗಣ ನಿರ್ಮಾಣ, ಮಿಲ್ಲತ್ ನಗರದಲ್ಲಿ ರಸ್ತೆ ಕಾಮಗಾರಿಗಳು ಸೇರಿ ಒಟ್ಟು 25 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ. ಇಲ್ಲಿನ ಮೆಹಬೂಬ್ ಗುಲ್ಷನ್ ಗಾರ್ಡನ್ ಅಭಿವೃದ್ಧಿ, ರಾಜೀವ್ ಗಾಂಧಿ ಥೀಮ್ ಪಾರ್ಕ್ ಅಭಿವೃದ್ಧಿ, ಸೂಪರ್ ಮಾರ್ಕೆಟ್‌ನಲ್ಲಿ ಬಹುಮಟ್ಟದ ಕಾರ್ ಪಾರ್ಕಿಂಗ್, ಡಾಗ್ ಶೆಲ್ಟರ್ ನಿರ್ಮಾಣ, ಶರಣಬಸವೇಶ್ವರ ಕೆರೆ ಅಭಿವೃದ್ಧಿ ಸೇರಿದಂತೆ ಒಟ್ಟು 13 ಕಾಮಗಾರಿಗಳಲ್ಲಿ ಒಂದೂ ಪ್ರಾರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಜಿಟಲ್ ಕ್ಲಾಸ್ ರೂಮ್, ಡಿಜಿಟಲ್ ಲೈಬ್ರರಿ, RO ವಾಟರ್ ಪ್ಲಾಂಟ್ ಸೇರಿ ಒಟ್ಟು 15 ಕಾಮಗಾರಿಗಳು ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ 9 ಕಾಮಗಾರಿಗಳು ಸೇರಿದಂತೆ ಒಂದು ಕಾಮಗಾರಿಯೂ ಆರಂಭವಾಗಿಲ್ಲ ಎಂದು ದೂರಿದರು.

ಹಲವು ಕಾಮಗಾರಿಗಳು ಈವರೆಗೆ ಪ್ರಾರಂಭವಾಗಿಲ್ಲ, ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಅನುಮಾನ ಎದ್ದು ಕಾಣುತ್ತಿದೆ, ಕೂಡಲೇ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಜಿಲ್ಲಾ ಅಧ್ಯಕ್ಷ ಸಲೀಂ ಚಿತಾಪುರಿ, ಜಿಲ್ಲಾ ಕಾರ್ಯದರ್ಶಿ ಮುನೀರ್ ಹಶ್ಮಿ, ಸಲೀಂ ಸಾಗರಿ, ಅಕ್ರಮ, ನಸೀರ್ ಕಲ್ಯಾಣಿ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X