Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಫಜಲಪುರ ತಾಲೂಕಿನಾದ್ಯಂತ...

ಕಲಬುರಗಿ | ಅಫಜಲಪುರ ತಾಲೂಕಿನಾದ್ಯಂತ ವ್ಯಾಪಕ ಮಳೆ : ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ19 Sept 2025 11:02 PM IST
share
ಕಲಬುರಗಿ | ಅಫಜಲಪುರ ತಾಲೂಕಿನಾದ್ಯಂತ ವ್ಯಾಪಕ ಮಳೆ : ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ
ಭೀಮಾ ನದಿ ದಡದ ಗ್ರಾಮಗಳಲ್ಲಿ ಅತಿವೃಷ್ಠಿಯಿಂದ ಬೆಳೆ ನಾಶ

ಕಲಬುರಗಿ : ಅಫಜಲಪುರ ತಾಲ್ಲೂಕಿನ ಭೀಮಾ ನದಿ ದಡದ ಅನೇಕ ಗ್ರಾಮಗಳು ಈ ವರ್ಷದ ಭಾರೀ ಮಳೆಯಿಂದ ತತ್ತರಿಸಿವೆ. ಈ ಬಾರಿ ಅತಿಯಾದ ಮಳೆಯಿಂದ ಪರಿಸ್ಥಿತಿ ತೀರ ಗಂಭೀರವಾಗಿದ್ದು, ರೈತರ ಬದುಕು ಸಂಕಷ್ಟಕ್ಕೊಳಗಾಗಿದೆ.

ತಾಲ್ಲೂಕಿನ ಸರಾಸರಿ ಮಳೆ ಪ್ರಮಾಣ 707.4 ಮಿಲಿಮೀಟರ್. ಆದರೆ ಈ ಬಾರಿ ಜುಲೈ–ಆಗಸ್ಟ್ ತಿಂಗಳಲ್ಲಿ ಮಾತ್ರವೇ 189.5 ಮಿಲಿಮೀಟರ್ ಮಳೆ ಸುರಿದು ದಾಖಲೆ ಬರೆದಿದೆ. ಮೇ ಮೊದಲ ವಾರದಲ್ಲೇ ಮಳೆ ಪ್ರಾರಂಭವಾದ ಕಾರಣ ಭೀಮಾ ನದಿ ಹಾಗೂ ಉಪನದಿಗಳಾದ ಬೋರಿ, ಅಮರ್ಜಾ ನದಿಗಳು ಉಕ್ಕಿ ಹರಿಯುತ್ತಿವೆ. ಈ ಉಪನದಿಗಳಿಗೆ ಸಂಪರ್ಕಿಸುವ ಹಳ್ಳ–ಕಾಲುವೆಗಳು ಮೈದುಂಬಿ ಹರಿಯುತ್ತಿರುವುದರಿಂದ ಹೊಲಗದ್ದೆಗಳಲ್ಲಿ ಒಡ್ಡು ದಿಂನೆಗಳು ಒಡೆದು ಮಣ್ಣು ಕೊಚ್ಚಿಕೊಂಡು ಹೋಗಿದೆ.

ಹಿರಿಯಾಳ, ದುದ್ದುಣಗಿ, ಭೋಸಗಾ, ಉಡಚಣ, ಶಿವೂರ, ಕುಡಿಗನೂರ, ಮಣೂರ, ಮಂಗಳೂರು, ಶಿರವಾಳ ಸೇರಿದಂತೆ ನದಿ ತೀರದ ಹಲವಾರು ಗ್ರಾಮಗಳ ಹೊಲಗಳಿಗೆ ನೀರು ನುಗ್ಗಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಪ್ರಮುಖ ವಾಣಿಜ್ಯ ಬೆಳೆಗಳಾದ ಹತ್ತಿ, ತೊಗರಿ ಬೆಳೆಗಳು ಹಾನಿಗೊಂಡಿವೆ.

ಸಿದ್ದನೂರು–ರೇವೂರು ಹಾಗೂ ಜೇವರ್ಗಿ (ಬಿ)–ಜೇವರ್ಗಿ (ಕೆ) ಗ್ರಾಮದ ನಡುವಿನ ಸೇತುವೆಗಳು ಮುಳುಗಡೆಯಾಗಿದ್ದು ಸಂಚಾರ ಸ್ಥಗಿತವಾಗಿದೆ. ಬಗಲೂರು–ಘತ್ತರಗಾ ಬ್ರಿಜ್ ಕಮ್ ಬ್ಯಾರೇಜ್ ಹಾಗೂ ಗಾಣಗಾಪುರ ಸಮೀಪದ ಸೇತುವೆಗಳೂ ಮುಳುಗಡೆಯಾಗಿವೆ.

ಆತನೂರ ಹೋಬಳಿಯ ಕಂದಾಯ ಇಲಾಖೆಯ ಮಾಹಿತಿಯ ಪ್ರಕಾರ, ಸೊನ್ನ ಏತ ನೀರಾವರಿ ಡ್ಯಾಂನಿಂದ 17,000 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಇದರಿಂದ ಪ್ರವಾಹದ ಭೀತಿ ಮುಂದುವರಿದಿದ್ದು, ನದಿ ತೀರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಆಡಳಿತ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X