Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಂವಿಧಾನ ಇಲ್ಲದಿದ್ದರೆ...

ಕಲಬುರಗಿ | ಸಂವಿಧಾನ ಇಲ್ಲದಿದ್ದರೆ ಹಿಂಸಾತ್ಮಕ ಕ್ರಾಂತಿಗಳಾಗುತ್ತಿದ್ದವು : ಹರ್ಷಕುಮಾರ್ ಕುಗ್ವೆ

ವಾರ್ತಾಭಾರತಿವಾರ್ತಾಭಾರತಿ25 Dec 2025 7:26 PM IST
share
ಕಲಬುರಗಿ | ಸಂವಿಧಾನ ಇಲ್ಲದಿದ್ದರೆ ಹಿಂಸಾತ್ಮಕ ಕ್ರಾಂತಿಗಳಾಗುತ್ತಿದ್ದವು : ಹರ್ಷಕುಮಾರ್ ಕುಗ್ವೆ

ಕಲಬುರಗಿ: "ಭಾರತ ದೇಶದಲ್ಲಿ ಒಂದು ವೇಳೆ ಬಾಬಾ ಸಾಹೇಬರು ಬರೆದಿರುವ ಸಂವಿಧಾನವೇ ಇಲ್ಲದಿದ್ದರೆ ಅನೇಕ ಹಿಂಸಾತ್ಮಕ ಕ್ರಾಂತಿಗಳಾಗುತ್ತಿದ್ದವು" ಎಂದು ಪತ್ರಕರ್ತ, ಸಾಮಾಜಿಕ ಹೋರಾಟಗಾರ ಹರ್ಷಕುಮಾರ್ ಕುಗ್ವೆ ಅಭಿಪ್ರಾಯಪಟ್ಟಿದ್ದಾರೆ.

ಸುಮೇಧ ಪ್ರಕಾಶನ ವತಿಯಿಂದ ನಗರದ ಕನ್ನಡ ಭವನದಲ್ಲಿ ಗುರುವಾರ ಹಮ್ಮಿಕೊಂಡ 'ಒಂದು ವೇಳೆ ಬಾಬಾಸಾಹೇಬರು ಇಲ್ಲದಿದ್ದರೆ' ಹಾಗೂ 'ಅಂಬೇಡ್ಕರ್ ಸ್ಮೃತಿ - ಸಂಸ್ಮೃತಿ' ಎಂಬ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿ, ಕಳೆದ 75 ವರ್ಷಗಳಲ್ಲಿ ದೇಶದಲ್ಲಿ ಹಿಂಸಾತ್ಮಕ ಕ್ರಾಂತಿ ಉಂಟಾಗಿಲ್ಲ ಎಂದಾದರೆ ಅದಕ್ಕೆ ಸಂವಿಧಾನವೇ ಕಾರಣ ಎಂದರು.

ಸಮಾಜದಲ್ಲಿ ನಿತ್ಯವೂ ಮರ್ಯಾದಾ ಹತ್ಯೆ, ಕೊಲೆ, ದರೋಡೆ, ಸುಲಿಗೆ, ಜಾತಿ ನಿಂದನೆ ಮತ್ತಿತ್ತರ ಕೃತ್ಯಗಳು ನಡೆಯುತ್ತಿವೆ, ದಾಳಿಗೊಳಗಾದವರು ತಮಗೆ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಕಾನೂನನ್ನು ನಂಬಿಕೊಂಡು ಇದ್ದಾರೆ, ಒಂದು ವೇಳೆ ಬಾಬಾ ಸಾಹೇಬ್ ರಚಿತದ ಸಂವಿಧಾನ ಇಲ್ಲದಿದ್ದರೆ ದೇಶದ ಇತಿಹಾಸದ ಕಲ್ಪನೆ ಕೂಡ ಮಾಡುವಂತಿರಲಿಲ್ಲ ಎಂದರು.

ಗುಜರಾತಿನ ವಿಮಾನ ದುರಂತ ಸಂಭವಿಸಿದಾಗ ಪೈಲೆಟ್ ತಪ್ಪಿನಿಂದಾಗಿ ಹಲವು ಪ್ರಾಣ ಕಳೆದುಕೊಂಡರು. ಮೃತಪಟ್ಟವರಿಗೆ 1 ಕೋಟಿ ರೂ. ಘೋಷಣೆ ಮಾಡಿರುವ ಕೇಂದ್ರ ಸರಕಾರ, ಮಲದ ಗುಂಡಿಯನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಮೃತಪಟ್ಟವರಿಗೇಕೆ ಕಡಿಮೆ ಪರಿಹಾರ ಕೊಡುತ್ತದೆ? ಎಂದು ಪ್ರಶ್ನಿಸಿದ ಅವರು, ಉದ್ದೇಶಪೂರ್ವಕವಾಗಿ ಜಾತಿಯನ್ನು ಖಾಯಂ ಆಗಿ ಇಡುವುದಕ್ಕಾಗಿಯೇ ಮಲದ ಗುಂಡಿಯನ್ನು ಸ್ವಚ್ಛಗೊಳಿಸುವ ಯಂತ್ರವನ್ನು ಶೋಧಿಸುತ್ತಿಲ್ಲ, ಬಳಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಲೇಖಕ ಹಾಗೂ "ಅಂಬೇಡ್ಕರ್ ಸ್ಮೃತಿ ಸಂಸ್ಮೃತಿ" ಪುಸ್ತಕದ ಅನುವಾದಕ ಆರ್.ಕೆ ಹುಡಗಿ(ರಾಹು) ಅವರು, ಪುಸ್ತಜಗಳನ್ನು ಓದುವುದರ ಮೂಲಕ ಭೀಮನಿಂದ ಅಂಬೇಡ್ಕರ್ ರಾದರು ಎಂದು ಹೇಳಿದರು.

ಡಾ.ವಿಕ್ರಮ್ ವಿಸಾಜಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಶರಣಪ್ಪ ಸುಲಗುಂಟೆ, ಪ್ರಕಾಶಕ ಡಾ.ದತ್ತಾತ್ರಯ ಇಕ್ಕಳಕಿ ಅವರು ಮಾತನಾಡಿದರು.

ನಿವೃತ್ತ ಅಭಿಯಂತರರಾದ ಬಿ.ಆರ್.ಬುದ್ಧಾ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ.ಅಪ್ಪಗೆರೆ ಸೋಮಶೇಖರ್ ವೇದಿಕೆಯ ಮೇಲಿದ್ದರು.

ಈ ಸಂದರ್ಭದಲ್ಲಿ ಬಸಣ್ಣ ಸಿಂಗೆ, ಸೂರ್ಯಕಾಂತ್ ಸುಜ್ಯತ್, ಶ್ರೀಶೈಲ ಘೂಳಿ, ನಾಗೇಂದ್ರ ಜವಳಿ, ಶ್ರೀಶೈಲ ನಾಗರಾಳ, ಹಣಮಂತ ಬೋಧನಕರ್, ಪಿ.ನಂದಕುಮಾರ್, ಪ್ರೇಮಾನಂದ ಚಿಂಚೋಳಿ, ಸಿದ್ದರಾಮ ಪ್ಯಾಟೆ, ಶಾಂತಕುಮಾರ್ ಹೆಬಳಿ, ವೆಂಕಟರೆಡ್ಡಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಶೋಕ್ ಶಟಕಾರ ನಿರೂಪಿಸಿದರು, ರಮೇಶ್ ಮಾಡಿಯಾಲ್ಕರ್ ಸ್ವಾಗತಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X