Kalaburagi | ಮೇ 18 ರಂದು ಮೃಗಾಲಯ ಉದ್ಘಾಟನೆ

ಕಲಬುರಗಿ: ಜಿಲ್ಲಾಡಳಿತ, ಅರಣ್ಯ ಇಲಾಖೆ,ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮತ್ತು ಮೂರ್ತಿ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಮೃಗಾಲಯದ ಉದ್ಘಾಟನೆ ಸಮಾರಂಭ ಮೇ 18 ರಂದು ಬೆಳಿಗ್ಗೆ 9 ಗಂಟೆಗೆ ಕಾಳಗಿ ತಾಲೂಕಿನ ಮಾಡಬೂಳನಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಅರಣ್ಯ, ಜೀವ ಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಗೌರವ ಉಪಸ್ಥಿತಿ ವಹಿಸುವರು.
ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೇ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್, ಮೈಸೂರು ಮೃಗಾಲಯ ಗೌರವಾನ್ವಿತ ಅತಿಥಿಗಳಾಗಿ ಪ್ರಾಧಿಕಾರ ಅಧ್ಯಕ್ಷ ಕೆ.ರಂಗಸ್ವಾಮಿ ಅವರು ಭಾಗವವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಬೆಂಗಳೂರು ರಾಜ್ಯಸಭಾ ಸದಸ್ಯ ಸುಧಾ ಮೂರ್ತಿ, ಶಾಸಕರುಗಳಾದ ಎಂ.ವೈ.ಪಾಟೀಲ್, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ.ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಬೆಂಗಳೂರು ಅರಣ್ಯ ಜೀವ ಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಅರಣ್ಯ ಪಡೆ ಮುಖ್ಯಸ್ಥ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮೀನಾಕ್ಷಿ ನೇಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್, ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮನೋಜ್ ಕುಮಾರ್, ಬೆಂಗಳೂರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಪಂಕಜ್ಕುಮಾರ್ ಪಾಂಡೆ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಸ್ವಜೀತ್ ಮಿಶ್ರಾ, ಮೈಸೂರು ಕರ್ನಾಟಕ ಮೃಗಾಲಯ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರವಿ ಶಂಕರ್ ಎಸ್.ಎಸ್., ಕಲಬುರಗಿ ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯ ಪೆÇಲೀಸ್ ಮಹಾ ನಿರೀಕ್ಷಕ ಶಂತನು ಸಿನ್ಹಾ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಳಿನಿ ಅತುಲ್, ಕಲಬುರಗಿ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಮುಹಮ್ಮದ್ ಇಕ್ರಾಮುಲ್ಲಾ ಷರೀಫ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಪ್ರಾದೇಶಿಕಾ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ಕಾಮಾರ್ ಪಾಟೀಲ್, ಸಾಮಾಜಿಕಾ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಗರ್ ಎಸ್.ತಾವಡೆ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು.
ಪ್ರಾದೇಶಿಕ ಅರಣ್ಯ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ ಎಸ್. ಡಾಂಗೆ, ಚಿಂಚೋಳಿ ಪ್ರಾದೇಶಿಕ ಅರಣ್ಯ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ಕುಮಾರ್, ಮಕ್ಕಳ ಉದ್ಯಾನವನ ಮತ್ತು ಕಿರು ಮೃಗಾಲಯ, ಕಲಬುರಗಿ ವಲಯ ಅರಣ್ಯಾಧಿಕಾರಿ ನಾಗೇಶ, ಜೇವರ್ಗಿ (ಚಿತ್ತಾಪುರ) ಪ್ರಾದೇಶಿಕ ಅರಣ್ಯ ವಲಯ ಅರಣ್ಯಾಧಿಕಾರಿ ವಿಜಯ ಕುಮಾರ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






