Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಗುರುವಂದನೆ ಸಮಾರಂಭದಲ್ಲಿ...

ಕಾಳಗಿ | ಗುರುವಂದನೆ ಸಮಾರಂಭದಲ್ಲಿ ಶಿಕ್ಷಕರಿಗೆ ಗೌರವ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ10 March 2026 7:28 PM IST
share
ಕಾಳಗಿ | ಗುರುವಂದನೆ ಸಮಾರಂಭದಲ್ಲಿ ಶಿಕ್ಷಕರಿಗೆ ಗೌರವ ಸಮರ್ಪಣೆ

ಕಾಳಗಿ: ತಾಲೂಕಿನ ಸುಂಠಾಣ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಳೆಯ ನೆನಪುಗಳ ಹೊಸ ಕನಸುಗಳ ಸಮ್ಮಿಲನ ಕಾರ್ಯಕ್ರಮ, ಶಾಲಾ ವಾರ್ಷಿಕೋತ್ಸವ, ಬಿಳ್ಕೊಡುಗೆ ಸಮಾರಂಭ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಷರ ಭಿತ್ತಿದ ಗುರುಗಳಿಗೆ ಹಳೆಯ ವಿದ್ಯಾರ್ಥಿಗಳು ಗೌರವ ಸಮರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಚಿಂಚೋಳಿ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ. ಲಕ್ಷ್ಮಯ್ಯ, ಸುಸಂಸ್ಕೃತ ಹಾಗೂ ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಮಾಜದಲ್ಲಿ ಶಿಕ್ಷಕರನ್ನು ಸಾಕ್ಷಾತ್ ಬ್ರಹ್ಮನಂತೆ ಕಾಣುತ್ತಾರೆ. ಆ ಗೌರವಕ್ಕೆ ತಕ್ಕಂತೆ ಶಿಕ್ಷಕರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ದೇಶದ ಭವಿಷ್ಯ ಶಾಲೆಗಳ ನಾಲ್ಕು ಗೋಡೆಗಳ ಮಧ್ಯೆ ನಿರ್ಮಾಣವಾಗುತ್ತದೆ. ಅದರಲ್ಲಿ ಕೆಲಸ ಮಾಡುವ ಶಿಕ್ಷಕರ ಜವಾಬ್ದಾರಿ ತುಂಬಾ ದೊಡ್ಡದು. ತಾಯಿ ಮಗುವಿಗೆ ಜನ್ಮ ನೀಡಿದರೆ, ಆ ಮಗುವಿನ ಭವಿಷ್ಯ ರೂಪಿಸುವವರು ಶಿಕ್ಷಕರು. ಈ ಅರಿವಿನಿಂದ ಶಿಕ್ಷಕರು ಗಂಭೀರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕಲಬುರಗಿ ಕೆಆರ್‌ಐಡಿಎಲ್‌ನ ಎಇಇ ನೀಲಕಂಠ ಆಡೆ ಮಾತನಾಡಿ, ಒಂದು ದೇಶ ಅಭಿವೃದ್ಧಿ ಹೊಂದಲು ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ತಂದೆ-ತಾಯಿ, ಗುರುಗಳು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ನಡೆಯುವ ವಿದ್ಯಾರ್ಥಿಗಳಿಗೆ ಯಶಸ್ಸು ಖಚಿತವಾಗಿ ಲಭಿಸುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಯಶಸ್ಸಿನ ಮೆಟ್ಟಿಲು ಹತ್ತುವಾಗ ಹಿಂದೆ ತಿರುಗಿ ನೋಡಬಾರದು. ಆದರೆ ಯಶಸ್ಸು ಸಿಕ್ಕ ನಂತರ ತಮ್ಮ ಹಾದಿಯನ್ನು ಹಾಗೂ ಗುರುಗಳ ಕೊಡುಗೆಯನ್ನು ಮರೆಯಬಾರದು. ಈ ಹಿನ್ನೆಲೆಯಲ್ಲಿ ಸುಂಠಾಣ ಹಾಗೂ ಸುಂಠಾಣ ತಾಂಡದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುಂಠಾಣ ಹಾಗೂ ಸುಂಠಾಣ ತಾಂಡದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಾಗೂ ಬೇರೆಡೆ ವರ್ಗಾವಣೆಗೊಂಡ ಶಿಕ್ಷಕರನ್ನು, 2025–26ರಲ್ಲಿ ಶಾಲೆಗೆ ದೇಣಿಗೆ ನೀಡಿದ ಗಣ್ಯರನ್ನು, ಸರ್ಕಾರಿ ನೌಕರರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಸುಂಠಾಣ ಯಲ್ಲಾಲಿಂಗ ಆಶ್ರಮದ ಮಲ್ಲಕ್ಕಜ್ಜಪ್ಪ ಮುತ್ಯಾ, ಚಂದ್ರಕಾಂತ ಅಪ್ಪಾಜ್ಜಿ, ಎಸ್'ಡಿಎಮ್'ಸಿ ಅಧ್ಯಕ್ಷ ಸುಂದರ ಕೊರಿ, ಮುಖ್ಯಗುರು ಹಣಮಂತ ಮಂತಟ್ಟಿ, ಸಿಆರ್'ಸಿ ಹಣಮಂತ ‌ಕಾಂಬಳೆ, ಪಿಎಮ್ ಪೋಷಣೆ ಸಹಾಯಕ ನಿರ್ದೇಶಕ ಜಯಪ್ಪ ಚಾಪೇಲ್, ಇಸಿಓ ಮಹಮೂದ್ ಪಠಾಣ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಅನೀಲಕುಮಾರ ಗುತ್ತೇದಾರ, ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕಾಧ್ಯಕ್ಷ ಮಹಾಂತೇಶ ಪಂಚಾಳ, ಮಾಣಿಕರಾವ ಪಾಟೀಲ್, ಸಂತೋಷ ಕಲಮೂಡಕರ್, ಜಗನ್ನಾಥ ಬಂಡಿ, ಗ್ರಾಪಂ ಅಧ್ಯಕ್ಷ ಗೀತಾ ಪ್ರೇಮಕುಮಾರಿ, ಚಂದ್ರಕಾಂತ ಪೂಜಾರಿ, ಲಕ್ಷ್ಮೀ ಸಂತೋಷ ಸೇರಿದಂತೆ ಎಸ್'ಡಿಎಮ್'ಸಿ ಸದಸ್ಯರು ಹಾಗೂ ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ‌ ಸ್ಮೀತಾ ಯಲ್ಮಡಗಿ ಪ್ರಾರ್ಥಿಸಿದಳು, ಶಿಕ್ಷಕ ರಾಜು ನಾವಿ ಸ್ವಾಗತಿಸಿದರು, ಶಿಕ್ಷಕ ನಾಗರಾಜ ಮಡಿವಾಳ ನಿರೂಪಿಸಿದರು. ಗಂಗಾಧರ ಯೋಗಿ ವಂದಿಸಿದರು.

Tags

Kalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X