Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಸಮಾಜದಲ್ಲಿ ಶಿಕ್ಷಕರ ಸೇವೆ...

ಕಾಳಗಿ | ಸಮಾಜದಲ್ಲಿ ಶಿಕ್ಷಕರ ಸೇವೆ ಸ್ಮರಣೀಯ : ಕಲಮೂಡ

ವಾರ್ತಾಭಾರತಿವಾರ್ತಾಭಾರತಿ1 July 2026 9:49 PM IST
share
ಕಾಳಗಿ | ಸಮಾಜದಲ್ಲಿ ಶಿಕ್ಷಕರ ಸೇವೆ ಸ್ಮರಣೀಯ : ಕಲಮೂಡ

ಕಾಳಗಿ : ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಸುಮಾರು 18 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದುತ್ತಿರುವ ಶಿಕ್ಷಕ ಮಲ್ಲಪ್ಪ ಜೀವಣಗಿ ಅವರ ನಿವೃತ್ತಿ ಬದುಕು ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಂತೋಷ ಕಲಮೂಡ ಹಾರೈಸಿದರು.

ತಾಲೂಕಿನ ಗೋಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆಯೋಜಿಸಿದ್ದ ನಿವೃತ್ತ ಶಿಕ್ಷಕ ಮಲ್ಲಪ್ಪ ಜೀವಣಗಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

“ನಿಮ್ಮ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ನೀವು ಕಲಿಸಿದ ಮೌಲ್ಯಗಳು ಮತ್ತು ಜೀವನ ಪಾಠಗಳನ್ನು ಎಂದಿಗೂ ಮರೆಯುವುದಿಲ್ಲ,” ಎಂದು ಹೇಳಿದರು.

ನಿವೃತ್ತ ಶಿಕ್ಷಕ ಮಲ್ಲಪ್ಪ ಜೀವಣಗಿ ಅವರ ಸೇವೆ ಎಲ್ಲ ಶಿಕ್ಷಕರಿಗೂ ಮಾದರಿಯಾಗಿದೆ. ನಿವೃತ್ತಿಯ ನಂತರವೂ ತಮ್ಮ ಅನುಭವವನ್ನು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘದೊಂದಿಗೆ ಹಂಚಿಕೊಂಡು ಶೈಕ್ಷಣಿಕ ಕ್ಷೇತ್ರಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಅವರು ಆಶಿಸಿದರು.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಕಮಕನೂರ ಮಾತನಾಡಿ, ಒಂದೇ ಶಾಲೆಯಲ್ಲಿ 18 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವುದು ಶ್ಲಾಘನೀಯ ಸಾಧನೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಅವರ ನಿವೃತ್ತಿ ಜೀವನ ಸಂತೋಷ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸಿದರು.

ನಂತರ ವಯೋನಿವೃತ್ತಿ ಹೊಂದಿದ ಶಿಕ್ಷಕ ಮಲ್ಲಪ್ಪ ಜೀವಣಗಿ ದಂಪತಿಗಳನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.

ಮುಖಂಡ ವಿಶ್ವನಾಥ ಕಾಮರೆಡ್ಡಿ, ಮಲ್ಲಿಕಾರ್ಜುನ ಸಿಂಘೆ, ಬಾಬು ಬೂಡನೂರ, ಶಿಕ್ಷಕ ಶಂಕರ, ಆರತಿ, ಹೇಮಾ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಧಾನ ಕಾರ್ಯದರ್ಶಿ ಬಸಂತರಾಯ ಪೆದ್ದಿ,

ಎಸ್'ಡಿಎಮ್'ಸಿ ಅಧ್ಯಕ್ಷ ಪ್ರಕಾಶ ಮಡಿವಾಳ, ಪ್ರಮುಖರಾದ ವಿಶ್ವನಾಥರೆಡ್ಡಿ ಮಾಲಿಪಾಟೀಲಣ, ಪರಮೇಶ್ವರರೆಡ್ಡಿ ಬಾವಿ, ಶಿವಶರರೆಡ್ಡಿ ಮಾಲಿಪಾಟೀಲ, ಬಸವರಾಜ ಕಾಮರೆಡ್ಡಿ, ಸಿದ್ದಣ್ಣ ಜಮಾದಾರ, ಗುರಲಿಂಗಪ್ಪ ಮಡಿವಾಳ, ಶಿವಲಿಂಗಪ್ಪ ಮಡಿವಾಳ, ಮಹೇಶ ಸಾವಳಗಿ, ಗಣಪತಿ ಕಲಶೆಟ್ಟಿ, ಚಿತ್ರಶೇಖರ ಅಂಕಲಗಿ, ಪ್ರಕಾಶ ದುರ್ಗಾ, ಅಂಬರಾಯ ಮಡಿವಾಳ ಸೇರಿದಂತೆ ಶಾಲೆಯ ಮುಖ್ಯಗುರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

Tags

Kalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X