Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕ ಸಾಹಿತಿಗಳಿಗೆ ಸೂಕ್ತ...

ಕಲ್ಯಾಣ ಕರ್ನಾಟಕ ಸಾಹಿತಿಗಳಿಗೆ ಸೂಕ್ತ ವೇದಿಕೆ ಅಗತ್ಯ: ಮುಡುಬಿ ಗುಂಡೇರಾವ

ವಾರ್ತಾಭಾರತಿವಾರ್ತಾಭಾರತಿ25 May 2026 6:38 PM IST
share
ಕಲ್ಯಾಣ ಕರ್ನಾಟಕ ಸಾಹಿತಿಗಳಿಗೆ ಸೂಕ್ತ ವೇದಿಕೆ ಅಗತ್ಯ: ಮುಡುಬಿ ಗುಂಡೇರಾವ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಸೂಕ್ತ ವೇದಿಕೆಯಿಲ್ಲದೆ ಹಲವಾರು ಪ್ರತಿಭೆಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಶಸ್ತಿಗಳು ಹಾಗೂ ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಂತಹ ಉನ್ನತ ಗೌರವ ಸ್ಥಾನಮಾನಗಳು ನಮ್ಮ ನೆಲದ ಸಾಹಿತಿಗಳಿಗೆ ದೊರಕುವಂತಾಗಬೇಕು ಎಂದು ಸಂಶೋಧಕ ಸಾಹಿತಿ ಹಾಗೂ ಕಲಬುರಗಿ ಜಿಲ್ಲಾ 22ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಮುಡುಬಿ ಗುಂಡೇರಾವ ಅಭಿಪ್ರಾಯಪಟ್ಟರು.

ನಗರ ಸಮೀಪದ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯ ಆವರಣದಲ್ಲಿ ಶ್ರೀ ಜೈಸಂತೋಷಿ ಮಾತಾ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕವಯತ್ರಿ ಚಂದ್ರಕಲಾ ಎಂ. ಪಾಟೀಲ ರಚಿಸಿದ ಎಡಚರು, ಸಾಹಿತ್ಯ ಸುಗಂಧ, ಲೇಖನ ಲೋಕದ ದೀಪಗಳು ಹಾಗೂ ಸಾಹಿತಿ ಶಾಂತಮಲ್ಲಪ್ಪ ಕರಿಕಲ್ ಕಣ್ಣಿ ರಚಿತ ಚಂದದ ಕನ್ನಡ ನುಡಿ ಮುಂಜಾನೆಯ ಮಾತುಗಳು ಮತ್ತು ಡಾ. ಲೀಲಾ ಗುರುರಾಜ ಅವರ ಮಳೆಬಿಲ್ಲು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕನ್ನಡದ ಪ್ರಥಮ ಗ್ರಂಥ ಕವಿರಾಜಮಾರ್ಗ ನೀಡಿದ ಹೆಗ್ಗಳಿಕೆ ಕಲಬುರಗಿ ನೆಲಕ್ಕೇ ಸೇರಿದ್ದು, ಈ ಭಾಗದ ಸಾವಿರಾರು ಸಾಹಿತ್ಯ ಪ್ರತಿಭೆಗಳು ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿವೆ. ಅವರ ಸಾಧನೆಯನ್ನು ಗುರುತಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಪ್ರೌಢಶಾಲೆಯ ಆದರ್ಶ ಶಿಕ್ಷಕಿಯಾಗಿರುವ ಚಂದ್ರಕಲಾ ಎಂ. ಪಾಟೀಲ ಅವರು ತಮ್ಮ ಕರ್ತವ್ಯದ ಜೊತೆಗೆ ಸಾಹಿತ್ಯ ಕೃಷಿಯನ್ನೂ ಮುಂದುವರಿಸಿರುವುದು ಇತರರಿಗೆ ಮಾದರಿಯಾಗಿದೆ. ಎಡಗೈಯಿಂದ ಬರೆಯುವವರ ಕುರಿತು ಸಾಹಿತ್ಯ ರಚನೆ ಮಾಡಿರುವುದು ವಿನೂತನ ಪ್ರಯೋಗವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕ ವೃತ್ತಿಯ ಜೊತೆಗೆ ಉತ್ತಮ ಸಾಹಿತ್ಯ ರಚನೆ ಮಾಡುತ್ತಿರುವ ಚಂದ್ರಕಲಾ ಎಂ. ಪಾಟೀಲ ಅವರ ಕಾರ್ಯ ಶ್ಲಾಘನೀಯವಾಗಿದೆ. ಸಾಹಿತ್ಯದಿಂದ ಸಮಾಜ ಪರಿವರ್ತನೆ ಸಾಧ್ಯ ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕಲಬುರಗಿ ನೆಲದ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಹಲವು ವರ್ಷಗಳಿಂದ ಮಾಡುತ್ತಿದ್ದೇನೆ. ನಮ್ಮ ಭಾಗದ ಸಾಹಿತಿಗಳು ಬೇರೆ ಯಾವ ಭಾಗದವರಿಗಿಂತಲೂ ಕಡಿಮೆಯಿಲ್ಲ. ಕಸಾಪ ವತಿಯಿಂದ ಸೂಕ್ತ ವೇದಿಕೆಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಡಚರು, ಸಾಹಿತ್ಯ ಸುಗಂಧ, ಮಳೆಬಿಲ್ಲು ಕೃತಿಗಳ ಕುರಿತು ಕೆ. ಹರೀಶ ಡೋಂಗ್ರೆ, ಚಂದದ ಕನ್ನಡ ನುಡಿ ಮುಂಜಾನೆಯ ಮಾತುಗಳು ಕೃತಿಯ ಕುರಿತು ಷಣ್ಮುಖಯ್ಯ ಎಂ. ಸ್ವಾಮಿ ಹಾಗೂ ಲೇಖನ ಲೋಕದ ದೀಪಗಳು ಕೃತಿಯ ಕುರಿತು ಡಾ. ಲೀಲಾ ಗುರುರಾಜ ಪರಿಚಯಿಸಿದರು.

ಮಹಿಳಾ ನೌಕರ ಸಂಘದ ಜಿಲ್ಲಾಧ್ಯಕ್ಷೆ ರೇಣುಕಾ ಡಾಂಗೆ, ನಿವೃತ್ತ ನಾಲ್ಕು ಚಕ್ರ ಚಾರಿಟೇಬಲ ಟ್ರಸ್ಟ್‌ ಅಧ್ಯಕ್ಷೆ ಮಾಲಾ ಎಚ್.ಕಣ್ಣಿ, ಹಿರಿಯ ಸಾಹಿತಿ ಶಾಂತಾ ಪಸ್ತಪುರ ಕೃತಿಯ ಲೇಖಕರಾದ ಚಂದ್ರಕಲಾ ಎಂ.ಪಾಟೀಲ, ಏ ಹರೀಶ ಡೋಂಗ್ರೆ ಡಾ.ಲೀಲಾ ಗುರುರಾಜ, ಸಾಹಿತಿ ಶಾಂತಮಲ್ಲಪ್ಪ ಕರಿಕಲ್ ಕಣ್ಣಿ ಮುಂತಾದವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಜ್ಯೋತಿ ಪಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥ ಗೌಡೇಶ ಬಿರಾದಾರ, ಸಂಘಟಕ ನೀಲಕಂಠೇಶ್ವರ, ಮುಖ್ಯೋಪಾಧ್ಯಾಯಿನಿ ಮಹಾದೇವಿ ಪಾಟೀಲ, ಕಸಾಪ ಗೌರ ಕಾರ್ಯದರ್ಶಿ ಶಿವರಾಜ ಅಂಡಗಿ, ಪತ್ರಕರ್ತ ರಾಜು ಅಪ್ಪಾಜಿ, ಹಣಮಂತರಾಯ ಭೈರಾಮಡಗಿ, ಪ್ರಮುಖರಾದ ವಿಶ್ವನಾಥ ಗೌನಳ್ಳಿ, ರಾಘವೇಂದ್ರ ಭಕ್ರಿ, ರಾಜೇಂದ್ರ ಝಳಕಿ, ಅನ್ನಪೂರ್ಣ ಸಂಗೋಳಗಿ, ಚೈತ್ರಾ, ಶಿವಶರಣಪ್ಪ ಅಂತಪನಳ್ಳಿ, ಅಣವೀರಪ್ಪಗೌಡ, ಜಗದೀಶ ಹಿರೇಮಠ, ವಿಜಯಕುಮಾರ ಪಾಟೀಲ ಆಡಕಿ, ಶಿವಶರಣಪ್ಪ ಹೂಗಾರ, ಗೂಳಿನಾಥ ಸಾಹುಕಾರ, ಗುಂಡಮ್ಮ, ಸೇರಿದಂತೆ ಮುಂತಾದವರಿದ್ದರು. ಎಡಚುಗೈ ಸಾಧಕರಿಗೆ, ಪ್ರಕಾಶಕರಿಗೆ, ಗ್ರಂಥ ಸಂಪಾದಕ ಮಂಡಳಿ ಸದಸ್ಯರನ್ನು ಸತ್ಕರಿಸಲಾಯಿತು. ಶಾಂತಮಲ್ಲಪ್ಪ ಕರಿಕಲ ಕಣ್ಣಿ ಸ್ವಾಗಿಸಿದರು. ತಪಿತಾ ನಿರೂಪಿಸಿದರು. ಸಿದ್ದಣಗೌಡ ಪಾಟೀಲ ವಂದಿಸಿದರು.

Tags

Kalyana Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X