ಕರದಾಳ | ಸಿಡಿಲು ಬಡಿದು ಬಣವೆಗೆ ಬೆಂಕಿ

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸುರಿದ ಗುಡುಗು ಸಹಿತ ಭಾರೀ ಗಾಳಿ–ಮಳೆಯ ನಡುವೆ ಕಣಕಿ ಬಣವೆಗೆ ಸಿಡಿಲು ಬಡಿದು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಅವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಕಣಕಿ ಬಣವೆಗೆ ಬೆಳಗ್ಗೆ ಸುಮಾರು 4 ಗಂಟೆ ಸುಮಾರಿಗೆ ಸಿಡಿಲು ಬಡಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.
ಮಳೆಯ ನಡುವೆಯೂ ಕಣಕಿ ಬಣವಿ ಭಾರೀ ಪ್ರಮಾಣದಲ್ಲಿ ಹೊತ್ತಿ ಉರಿದಿದ್ದು, ಗಾಳಿಯ ರಭಸಕ್ಕೆ ಬೆಂಕಿಯ ಕಿಡಿಗಳು ಹಾರಿ ಮಿಂಚು ಹುಳುವಿನಂತೆ ಹೊಳೆಯುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಕೆಲವು ದಿನಗಳ ಹಿಂದೆ ಹೊಲದಲ್ಲಿದ್ದ ಜೋಳದ ರಾಶಿಯನ್ನು ಕಟ್ಟಿ ಕಣಕಿ ಬಣವಿಯಾಗಿ ಸಂಗ್ರಹಿಸಲಾಗಿತ್ತು. ಸಿಡಿಲಿನ ಪರಿಣಾಮ ಸಂಪೂರ್ಣ ಬಣವಿ ಸುಟ್ಟುಹೋಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Next Story




