Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮೋದಿ ತಮ್ಮ ʼಗ್ಯಾರಂಟಿʼ ಏನು ಎಂಬುದನ್ನು...

ಮೋದಿ ತಮ್ಮ ʼಗ್ಯಾರಂಟಿʼ ಏನು ಎಂಬುದನ್ನು ಮೊದಲು ಜನರಿಗೆ ತಿಳಿಸಲಿ : ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 April 2024 4:12 PM IST
share
ಮೋದಿ ತಮ್ಮ ʼಗ್ಯಾರಂಟಿʼ ಏನು ಎಂಬುದನ್ನು ಮೊದಲು ಜನರಿಗೆ ತಿಳಿಸಲಿ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಮೋದಿಯವರು ತಮ್ಮ ʼಗ್ಯಾರಂಟಿʼ ಏನು ಎಂದು ಮೊದಲು ಜನರಿಗೆ ತಿಳಿಸಲಿ. ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ʼಗ್ಯಾರಂʼಟಿ ಎಂದು ಹೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ನಾಮಪತ್ರ ಸಲ್ಲಿಸಿದ ನಂತರ‌ ಎನ್.ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಲಬುರಗಿಯಲ್ಲಿ ಇಎಸ್ ಐ ಆಸ್ಪತ್ರೆ ಕಟ್ಟಿದ್ದೇವೆ. ಅಲ್ಲಿ ಏಮ್ಸ್ ನಿರ್ಮಾಣ ಮಾಡಲು ಮೋದಿ ಅವರಿಗೆ ಮನವಿ ಮಾಡಿದ್ದೆ. ಆದರೆ ನನ್ನ ಮೇಲೆ ಏನು ಸಿಟ್ಟು ಗೊತ್ತಿಲ್ಲ. ನಮ್ಮ ಮನವಿಯನ್ನು ಪುರಸ್ಕರಿಸಲಿಲ್ಲ‌. ನನ್ನ ಅವಧಿಯಲ್ಲಿ ಮಂಜೂರಾಗಿದ್ದ ರೇಲ್ವೆ ವಲಯ ಯೋಜನೆ ವಾಪಸ್ ಹೋಗಿದೆ. ನಾನು ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳಲ್ಲಿ ಶೇ 10ರಷ್ಟು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಸವಾಲು ಹಾಕಿದರು.

ಮೋದಿ ತಮ್ಮ ಗ್ಯಾರಂಟಿ ಏನು ಎಂದು ಮೊದಲು ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಖರ್ಗೆ, ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ಯಾವ ಗ್ಯಾರಂಟಿ ಎಂದು ಹೇಳಿಲ್ಲ. ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿದೆ ಮೋದಿಯವರೇ ಇದೇನಾ ನಿಮ್ಮ ಗ್ಯಾರಂಟಿ? ಪ್ರತಿವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಹೇಳಿ, ಉದ್ಯೋಗ ಕೊಡಲಿಲ್ಲ ಇದು ನಿಮ್ಮ ಗ್ಯಾರಂಟಿನಾ? ಪ್ರತಿಯೊಬ್ಬರಿಗೆ 15 ಲಕ್ಷ ರೂ ಕೊಡುತ್ತೇನೆ ಎಂದಿದ್ದರು, ಕೊಟ್ಟರಾ? ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು, ಮಾಡಿದ್ದಾರೆಯೇ? ಎಂದು ಪಶ್ನಿಸಿದರು.

ಬಿಜೆಪಿ ಬಳಿ ವಾಷಿಂಗ್ ಮಷಿನ್ ಇದೆ. ಯಾರನ್ನು ಭ್ರಷ್ಟಾಚಾರಿಗಳು ಎಂದು ಹೇಳಿ ಜೈಲಿಗೆ ಹಾಕುತ್ತಾರೋ ಅಂತವರನ್ನೇ ಆ ಮಷಿನ್ ಮೂಲಕ ಪಕ್ಷಕ್ಕೆ ಸೇರಿಸಿಕೊಂಡು ಅವರನ್ನು ಒಳ್ಳೆಯವರು ಎಂದು ಬಿಂಬಿಸುತ್ತಾರೆ. ಭ್ರಷ್ಟಾಚಾರಿಗಳನ್ನು ಬಿಡುವುದಿಲ್ಲ ಎಂದು ಮೋದಿ ಹಾಗೂ ಶಾ ಹೇಳುತ್ತಾರೆ. ಬಿಡುವ ಮಾತಿರಲಿ ನಿಮ್ಮ ಪಕ್ಕದಲ್ಲೇ ಕೂಡಿಸಿಕೊಂಡಿದ್ದೀರಲ್ಲ ಎಂದು ವ್ಯಂಗ್ಯವಾಡಿದರು,.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. ಬಡ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ನೀಡಲಾಗುವುದು. ಒಟ್ಟಾರೆ 25 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದರು.

ಈ ಚುನಾವಣೆ ಕೇವಲ ರಾಧಾಕೃಷ್ಣ ಅಥವಾ ಕಾಂಗ್ರೆಸ್ ಚುನಾವಣೆಯಲ್ಲ. ಬದಲಿಗೆ ದೇಶದ ಸಂವಿಧಾನ ಉಳಿಸುವ ಚುನಾವಣೆಯಾಗಲಿದೆ.‌ ಪ್ರತಿಯೊಂದು ಸಂಸ್ಥೆಗಳಲ್ಲಿ ಆರೆಸ್ಸೆಸ್ ಹುಡುಗರನ್ನು ಸೇರಿಸುತ್ತಿದ್ದಾರೆ.‌ ಹಾಗಾಗಿ ಪ್ರಜಾತಂತ್ರ ಉಳಿಯಬೇಕು ಹಾಗೂ ಈ‌ ಭಾಗ ಬೆಳೆಯಬೇಕು ಎನ್ನುವ ಇಚ್ಛೆ ಇದ್ದರೆ ಕಾಂಗ್ರೆಸ್ ಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, "ಮೋದಿ ಅವರು ಇಲ್ಲಿ ಬಂದು ದ್ವೇಷದ ಪ್ರಚಾರ ಪ್ರಾರಂಭಿಸಿದ್ದಾರೆ. ಆದರೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದುವರೆಗೆ ಕೈಗೊಂಡ ಅಭಿವೃದ್ದಿ ಕಾರ್ಯಗಳ ಅದರಲ್ಲೂ ಆರ್ಟಿಕಲ್ 371 ಜೆ ಜಾರಿಗೆ ತಂದಿರುವುದಕ್ಕೆ ಪ್ರತಿಯಾಗಿ ನೀವೆಲ್ಲ ರಾಧಾಕೃಷ್ಣ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರಿಗೆ ಉತ್ತರ ನೀಡಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X