Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅನಧಿಕೃತ ಕಟ್ಟಡಗಳ ತೆರವಿಗೆ ಪ್ರಿಯಾಂಕ್...

ಅನಧಿಕೃತ ಕಟ್ಟಡಗಳ ತೆರವಿಗೆ ಪ್ರಿಯಾಂಕ್ ಖರ್ಗೆ ಬುಲ್ಡೋಜರ್ ಬಾಬಾ ಆಗಲಿ : ಸಿದ್ಧಲಿಂಗ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ1 Jan 2025 9:32 PM IST
share
Photo of Press meet

ಕಲಬುರಗಿ: 'ನಗರದಲ್ಲಿ ಇರುವ ನಮ್ಮ ಶಾಖಾ ಮಠದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಲ್ಡೋಜರ್ ಬಾಬಾ ಆಗಬೇಕಾಗುತ್ತದೆ ಎಂದು ಹೇಳಿದ್ದರು. ಇದೀಗ ನಗರದಲ್ಲಿ ತಮ್ಮದೇ ಪಕ್ಷದ ನಾಯಕರ ಅನಧಿಕೃತ ಕಟ್ಟಡಗಳು ತಲೆ ಎತ್ತಿವೆ, ಅವುಗಳನ್ನು ತೆರವಿಗೆ ತಾವೇ ಬುಲ್ಡೋಜರ್ ಬಾಬಾ ಆಗಲಿ, ನಾವೇ ಅವರಿಗೆ ಖಾವಿ(ಕಾಷಾಯ) ಬಟ್ಟೆ ಕಳುಹಿಸುತ್ತಿದ್ದೇವೆ' ಎಂದು ಆಂದೋಲಾಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಸ್ಥಾಪಿತವಾದ ನಮ್ಮ ಶಾಖಾ ಮಠದ ಕಟ್ಟಡವು ನೀಲನಕ್ಷೆಯ ಪ್ರಕಾರ ನಿರ್ಮಾಣವಾಗಿಲ್ಲ, ಪರವಾನಗಿ ಯಾಕೆ ರದ್ದು ಮಾಡಬಾರದು ಎಂದು ಖುದ್ದು ಸಚಿವರ ಕುಮ್ಮಕ್ಕಿನಿಂದ ಪಾಲಿಕೆಯ ಅಧಿಕಾರಿಗಳು ಮಠಕ್ಕೆ ನೋಟಿಸ್ ಕೊಟ್ಟಿದ್ದಾರೆ. ನಾವು ಕೆಎಂಸಿ ಕಾಯ್ದೆ ಅಡಿಯಲ್ಲಿ ನಿಮೋದನೆ ಮಾಡಿದ್ದೇವೆ, ನಮ್ಮದು ತಪ್ಪಾಗಿದೆ, ಅದಕ್ಕೆ ನಾವು ದಂಡ ಕಟ್ಟಲು ತಯಾರಿದ್ದೇವೆ. ಅದರ ಕುರಿತಾಗಿ ಮನವಿ ಕೊಟ್ಟಿದ್ದೆವು. ಆದರೆ ಅವರು ಅದನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪಿಸಿದರು.

ಮೇಲಿಂದ ಮೇಲೆ ನೋಟಿಸ್ ಕೊಡುತ್ತಿರುವುದರಿಂದ ಕಲಬುರಗಿ ಹೈಕೋರ್ಟ್ ಗೆ ಹೋಗಿದ್ದೆವು, ಆದರೆ ಹೈಕೋರ್ಟ್ ಪೀಠ, ಪಾಲಿಕೆಯ ಅಧಿಕಾರಿಗಳು ಏನನ್ನೂ ಸೂಚಿಸುತ್ತಾರೋ ಅದನ್ನು ತೆರವು ಮಾಡಿ, ಇಲ್ಲದಿದ್ದರೆ ಪಾಲಿಕೆಯೇ ತೆರವುಗೊಳಿಸಿದರೆ ಅದರ ಹಣವನ್ನು ಭರಿಸಬೇಕೆಂದು ಆದೇಶಿಸಿದೆ. ಅದಕ್ಕೆ ನಾವು ಮತ್ತೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದರು.

ಶಾಂತಿ ನಗರದಲ್ಲಿರುವ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಮನೆ, ಅದೇ ಏರಿಯದಲ್ಲಿರುವ ಇಲಿಯಾಸ್ ಅಹ್ಮದ್ ಭಗವಾನ್ ಅವರ ಪತ್ನಿಯ ಹೆಸರಿನ ಮೂರಂತಸ್ತಿನ ಕಟ್ಟಡದ ಮನೆಗಳು ಸೆಟ್ ಬ್ಯಾಕ್ ಇಲ್ಲದೆ ನಿರ್ಮಿಸಲಾಗಿದೆ. ಖರ್ಗೆ ಆಪ್ತ ರಾಜೀವ ಜಾನೆ ಅವರ ಪತ್ನಿಯ ಹೆಸರಿನಲ್ಲಿ ಕಟ್ಟಿಸುತ್ತಿರುವ ಕಟ್ಟಡಗಳು ನಿಯಮ ಉಲ್ಲಂಘಿಸಿವೆ, 100 ಕೋಟಿ ರೂ. ಗೂ ಹೆಚ್ಚು ಬೆಲೆ ಬಾಳುವ ಖ್ವಾಜಾ ಬಂದೇ ನವಾಜ್ (ಕೆಬಿಎನ್) ಆಸ್ಪತ್ರೆಗೂ ಕೂಡ ಪರವಾನಗಿ ಇಲ್ಲ ಎಂದು ವಿವರಿಸಿದರು.

ಇವುಗಳನ್ನೆಲ್ಲ ಅನಧಿಕೃತವಾಗಿ ಕಟ್ಟಲಾಗಿದೆ, ಇವುಗಳನ್ನು ತೆರವುಗೊಳಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರು ಖಾವಿ ತೊಟ್ಟು ಬುಲ್ಡೋಜರ್ ಬಾಬಾ ಆಗಲಿ ಎಂದು ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಗುಡ್ಡದ್, ಈಶ್ವರ್ ಹಿಪ್ಪರಗಿ, ರಾಕೇಶ್ ಜಮಾದಾರ್, ಮಡಿವಾಳಪ್ಪ ಅಮರಾವತಿ, ಮಲಕಣ್ಣ ಹೀರೆಪೂಜಾರಿ, ಸತೀಶ್ ಮಾಗೂರ್ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X