Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಮಾಜದ ಸ್ವಾಸ್ಥ್ಯ ಹೆಚ್ಚಿಸುವ ಕೃತಿಗಳು...

ಸಮಾಜದ ಸ್ವಾಸ್ಥ್ಯ ಹೆಚ್ಚಿಸುವ ಕೃತಿಗಳು ಹೊರಬರಲಿ: ಡಾ. ಶ್ರೀಶೈಲ ನಾಗರಾಳ

ವಾರ್ತಾಭಾರತಿವಾರ್ತಾಭಾರತಿ30 March 2025 10:11 AM IST
share
ಸಮಾಜದ ಸ್ವಾಸ್ಥ್ಯ ಹೆಚ್ಚಿಸುವ ಕೃತಿಗಳು ಹೊರಬರಲಿ: ಡಾ. ಶ್ರೀಶೈಲ ನಾಗರಾಳ

ಕಲಬುರಗಿ : ಇಂದಿನ ಸಮಾಜದಲ್ಲಿ ಎಲ್ಲ ರಂಗಗಳು ಹಾದಿ ತಪ್ಪುತ್ತಿವೆ. ಸಮಾಜವನ್ನು ಸರಿ ದಾರಿಗೆ ತರುವ ಕಾರ್ಯವನ್ನು ನಮ್ಮ ಸಾಹಿತ್ಯ ಮಾಡುತ್ತದೆ. ಇದರಲ್ಲಿ ಬರಹಗಾರರ ಪಾತ್ರ ಬಹು ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜದ ಸ್ವಾಸ್ಥ್ಯ ಹೆಚ್ಚಿಸುವ ಸಾಹಿತ್ಯ ಕೃತಿಗಳು ಹೊರಬರಲಿ ಎಂದು ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಅಂತರಾಷ್ಟ್ರಿಯ ಮಹಿಳಾ ದಿನ ಹಾಗೂ ಯುಗಾದಿ ಪ್ರಯುಕ್ತ ಏರ್ಪಡಿಸಿದ್ದ ಕಾವ್ಯ ಬೇವು ವಿಶೇಷ ಮಹಿಳಾ ಕವಿಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ರಾಜ್ಯದಲ್ಲಿ ಆಡಳಿತದಲ್ಲಿನ ಭ್ರಷ್ಟಾಚಾರಕ್ಕೆ ಲಗಾಮು ಇಲ್ಲವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದರೆ ಶ್ರೀಸಾಮಾನ್ಯನಿಗೆ ಉಳಿಗಾಲವಿಲ್ಲ. ಈ ವ್ಯವಸ್ಥೆ ವಿರುದ್ಧ ನಾವೆಲ್ಲ ಒಟ್ಟಾಗಿ ಹೋರಾಡುವ ಅನಿವಾರ್ಯತೆ ಇದೆ ಎಂದು ಹೇಳಿದ ಅವರು, ಬೆಳಕಿಗೆ ಬಾರದ ಗ್ರಾಮೀಣ ಭಾಗದ ಮಹಿಳೆಯರು ಸಾಹಿತ್ಯಿಕ ಬರವಣಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಪರಿಷತ್ತು ಇಂಥ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಹಿರಿಯ ಲೇಖಕಿ ಡಾ. ಕಾವ್ಯಶ್ರೀ ಮಹಾಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳುಂಡಗಿ, ಪಾಲಕೆ ಉಪ ಮೇಯರ್ ನಾಗವೇಣಿ ತಿಪ್ಪಣ್ಣಪ್ಪ ಕಮಕನೂರ, ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ತಾಲೂಕಾ ಕಸಾಪ ದ ಕೋಶಾಧ್ಯಕ್ಷ ಕುಪೇಂದ್ರ ಬರಗಾಲಿ, ವಿಶಾಲಾಕ್ಷಿ ಮಾಯಣ್ಣವರ್, ಭಾಗ್ಯಶ್ರೀ ಮರಗೋಳ, ಶರಣು ಹಾಗರಗುಂಡಗಿ, ಕವಿತಾ ಕವಳೆ ವೇದಿಕೆ, ರಾಜೇಂದ್ರ ಮಾಡಬೂಳ ಮೇಲಿದ್ದರು.

ಅನೇಕ ಕವಿಗಳು ವಾಚಿಸಿದ ಸ್ವ ರಚಿತ ಕವನಗಳು ಪ್ರೇಕ್ಷಕರ ಮನಗೆದ್ದವು. ವಿವಿಧ ಕ್ಷೇತ್ರದ ಸಾಧಕರಿಗೆ ಅನುಪಮ ಗೌರವ ಪುರಸ್ಕಾರವನ್ನು ನೀಡ ಸತ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X