ಪತ್ರಿಕಾ ಭವನದ ನವೀಕೃತ ಸಭಾಂಗಣ ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ಕಲಬುರಗಿ : ನಗರದ ಪತ್ರಿಕಾ ಭವನದಲ್ಲಿ ನೂತನವಾಗಿ ನವೀಕರಿಸಲಾದ ಸಭಾಂಗಣವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪತ್ರಿಕಾ ಭವನವು ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಪ್ರಮುಖ ವೇದಿಕೆಯಾಗಿದ್ದು, ಹವಾನಿಯಂತ್ರಿತದಿಂದ ಕೂಡಿರುವ ನವೀಕೃತ ಹೊಸ ಸಭಾಂಗಣವು ಪತ್ರಿಕಾಗೋಷ್ಠಿ, ಚರ್ಚಾಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಮಾತನಾಡಿ, ಪತ್ರಿಕಾ ಭವನದ ಅಭಿವೃದ್ಧಿಯು ಜಿಲ್ಲೆಯ ಪತ್ರಕರ್ತರಿಗೆ ಇನ್ನಷ್ಟು ಉತ್ತಮ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ನೆರವಾಗಲಿದೆ. ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದ್ದು, ಪತ್ರಕರ್ತರ ಕಲ್ಯಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ, ರಾಜ್ಯ ಸಮಿತಿ ಸದಸ್ಯ ರಾಜು ಉದನೂರ, ಉಪಾಧ್ಯಕ್ಷರಾದ ಹಣಮಂತರಾವ ಭೈರಾಮಡಗಿ, ಡಾ. ಶಿರಂಜನ ಸಂತ್ಯಪೇಟ್, ಅರುಣ ಕದಂ, ಅನಿಲ್ ಸ್ವಾಮಿ ಹಾಗೂ ಸಂಘದ ಇತರ ಪದಾಧಿಕಾರಿಗಳು, ಪತ್ರಕರ್ತರು ಉಪಸ್ಥಿತರಿದ್ದರು.




