Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಂಪುಟ ಸಭೆ | ಕಲ್ಯಾಣ ಕರ್ನಾಟಕ ಭಾಗದ...

ಸಂಪುಟ ಸಭೆ | ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಯ ಕುರಿತು ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 Sept 2024 12:54 PM IST
share
ಸಂಪುಟ ಸಭೆ | ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಯ ಕುರಿತು ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಸಾಮಾನ್ಯವಾಗಿ ಸಚಿವ ಸಂಪುಟ ಸಭೆಯಲ್ಲಿ ಇಡೀ ರಾಜ್ಯದ ಅಭಿವೃದ್ದಿ ಕುರಿತಂತೆ ಚರ್ಚೆ ನಡೆಯುತ್ತದೆ. ಆದರೆ, ಬಹಳ ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ನಮ್ಮ ಭಾಗದ ಜನರ ಆಶಯದಂತೆ ಚರ್ಚೆ ನಡೆಸಿ, ಅಭಿವೃದ್ದಿಯ ನೀಲನಕ್ಷೆ ತಯಾರಿಸಲಾಗುವುದು" ಎಂದು ನಾಹಿತಿ ನೀಡಿದರು.

ʼನಿಪುಣ ಕರ್ನಾಟಕʼ ಯೋಜನೆ :ಕಲ್ಯಾಣ ಕರ್ನಾಟಕ ಭಾಗದದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. " ಈ ನಿಟ್ಟಿನಲ್ಲಿ ಈಗಾಗಲೇ ಕೌಶಲ್ಯಾಭಿವೃದ್ದಿ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಂಟಿ ವತಿಯಿಂದ " ನಿಪುಣ - ಕರ್ನಾಟಕ " ಎನ್ನುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆ ಇದ್ದು, ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ " ಎಂದು ಹೇಳಿದರು.

ಶಾಸಕರ, ಅಧಿಕಾರಗಳ ಸಭೆ :ಸಚಿವ ಸಂಪುಟ ಸಭೆ ನಡೆಸುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಗತ್ಯವಿರುವ ಯೋಜನೆಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲು ಈಗಾಗಲೇ ಸಂಬಂಧಿಸಿದ ಕ್ಷೇತ್ರಗಳ ಶಾಸಕರ ಹಾಗೂ ಅಧಿಕಾರಿಗಳ ಜೊತೆ ಎರಡು ಸುತ್ತಿನ ವಿಸಿ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.

ಪ್ರತ್ಯೇಕ ಸಚಿವಾಲಯ :ಆರ್ಟಿಕಲ್ 371 (ಜೆ) ಕಟ್ಟುನಿಟ್ಟಾಗಿ ಜಾರಿಗೆ ತರಲು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಕುರಿತಂತೆ ಬೇಡಿಕೆ ಎದ್ದಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆಯೂ ಕೂಡಾ ಚರ್ಚಿಸಲಾಗುವುದು.‌ ಆರ್ಟಿಕಲ್ 371 (ಜೆ) ಅಡಿಯಲ್ಲಿ ಈ ಭಾಗದಲ್ಲಿ 22,000 ಇಂಜಿನಿಯರಿಂಗ್ ಹಾಗೂ 2000 ವೈದ್ಯಕೀಯ‌ ಸೀಟು ಹಂಚಿಕೆಯಾಗಿವೆ. ಇದೂ ಕೂಡಾ ಕಟ್ಟುನಿಟ್ಟಿನ ಜಾರಿಯಲ್ಲವೇ? ಈ ಬಗ್ಗೆ ಟೀಕೆಗಳು ಸಹಜ. ಆದರೆ, ನಮ್ಮ‌ ಪ್ರಾಮಾಣಿಕ ಪ್ರಯತ್ನ ನಡೆಯಲಿದೆ ಎಂದು ಹೇಳಿದರು.

ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ :

ಸಿಎಂ ಬದಲಾವಣೆ ಚರ್ಚೆ ಸಂಪುಟದಲ್ಲಿ ನಡೆದಿಲ್ಲ ಅದು ಮಾಧ್ಯಮಗಳಲ್ಲಿ ಮಾತ್ರ ನಡೆದಿದೆ.‌ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಶಿವಾನಂದ್ ಪಾಟೀಲರು ಈ ವಿಚಾರದಲ್ಲಿ ಮಾತನಾಡಿರುವುದು ಗೊತ್ತಿದೆ. ಸಿಎಂ ಕುರ್ಚಿ ಖಾಲಿ ಇಲ್ಲ. ಯಾರೇ ಸಿಎಂ ಆದರೂ ಬೆಂಬಲವಿದೆ ಎಂದಷ್ಟೆ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯಪಾಲರ ಅಧಿಕಾರ ದುರ್ಬಳಕೆ :

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿ ಮಂಜೂರು ಪ್ರಕ್ರಿಯೆ ಎಲ್ಲವೂ ಕಾನೂನುಬದ್ಧವಾಗಿ‌ ನಡೆದಿದೆ. ಈ ಬಗ್ಗೆ ಮೊದಮೊದಲು ಜೋರಾಗಿ ಆರೋಪ ಮಾಡಿದ್ದ ವಿರೋದ ಪಕ್ಷದ ನಾಯಕರು ಹಾಗೂ‌ ಬಿಜೆಪಿ ಅಧ್ಯಕ್ಷರು ಈಗ ಮೌನವಾಗಿದ್ದಾರೆ. ಶಿಕ್ಷಣ ಸಂಸ್ಥೆ ನಡೆಸಲು ಅನಮತಿ ಪಡೆದುಕೊಂಡು ಈಗ ಬಿರಿಯಾನಿ ಹೊಟೇಲ್ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಕೂಡಲೇ ಕ್ರಮ ಜರುಗಿಸುವ ರಾಜ್ಯಪಾಲರು ಈಗ ಏಕೆ ಕ್ರಮ ಜರುಗಿಸಿಲ್ಲ. ಹಾಗೇಯೇ ಕುಮಾರಸ್ವಾಮಿ ವಿರುದ್ದದ ದೂರಿನ ಬಗ್ಗೆಯೂ ಕ್ರಮವಿಲ್ಲ ಯಾಕೆ ? ಎಲ್ಲಿ ಬಿಜೆಪಿ ಪಕ್ಷ ಬಲಹೀನವಾಗಿದೆಯೋ ಅಲ್ಲಲ್ಲಿ ರಾಜ್ಯಪಾಲರ ಅಧಿಕಾರವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X