Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಬಾಂಬ್...

ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಬಾಂಬ್ ಬ್ಲಾಸ್ಟ್ ನ ಅಣಕು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ16 May 2025 10:16 PM IST
share
ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಬಾಂಬ್ ಬ್ಲಾಸ್ಟ್ ನ ಅಣಕು ಪ್ರದರ್ಶನ

ಕಲಬುರಗಿ : "ಅಪರೇಷನ್ ಅಭ್ಯಾಸ" ನಾಗರಿಕ ರಕ್ಷಣಾ ಕಾರ್ಯಚರಣೆ ಅಂಗವಾಗಿ ಕಲಬುರಗಿ ಹೈಕೋರ್ಟ್ ಅವರಣದಲ್ಲಿ ಶುಕ್ರವಾರ ಸಂಜೆ ಬಾಂಬ್ ಬ್ಲಾಸ್ಟ್ ಸೃಷ್ಠಿಸಿ ತನಂತರ ರಕ್ಷಣಾ ಕಾರ್ಯಚರಣೆಯ ಸನ್ನಿವೇಶದ ಕುರಿತ ಅಣಕು ಪ್ರದರ್ಶನವು ಕೋರ್ಟ್ ಅವರಣದಲ್ಲಿ ನಡೆಯಿತು.

ಹೈಕೋರ್ಟ್ ನಲ್ಲಿ ಡ್ರೋನ್ ಮೂಲಕ ಬಾಂಬ್ ಹಾಕಿರುವುದನ್ನು ಸೈರನ್ ಅಪಾಯದ ಸಂದೇಶ ಖಚಿತಪಡಿಸುತ್ತಿದ್ದಂತೆ ಗಾಬರಿಗೊಂಡ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು, ಕಕ್ಷಿದಾರರು ಕಚೇರಿಯಿಂದ ಓಡಿ ಬರುವ ದೃಶ್ಯ, ಸುದ್ದಿ ಅರಿತು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಕೋರ್ಟ್ ಅವರಣ ತಪಾಸಣೆಗೊಳಪಡಿಸಿ ಪತ್ತೆಯಾದ ಒಂದು ಜೀವಂತ ಬಾಂಬ್ ನಿಷ್ಕ್ರಿಯಗೊಳಿಸುವ, ಇನ್ನು ಸಿ.ಐ.ಎಸ್.ಎಫ್ ಸೇನಾ ಪಡೆ ಹೈಕೋರ್ಟ್ ಆವರಣ ಮತ್ತು ಕಟ್ಟಡ ಸುತ್ತುವರಿದಿದ್ದಲ್ಲದೆ ಕಟ್ಟಡದಲ್ಲಿ ಉಗ್ರರು, ಯಾರಾದರು ಅಡಗಿದಾರೆಯೆ? ಒತ್ತೆಯಾಳು ಇರಿಸಲಾಗಿದಿಯೇ? ಗಾಯಾಳುಗಳು ಸಿಲುಕಿರುವರೆ? ಎಂದು ತಪಾಸಣೆ ಮಾಡುವ ಸನ್ನಿವೇಶ ಕಂಡುಬಂತು.

ಇನ್ನೊಂದೆಡೆ ಅಗ್ನಿಶಾಮಕ ದಳದ ಎರಡು ತಂಡಗಳು ಬೆಂಕಿ ನಂದಿಸಲು ಯಶಸ್ವಿಯಾದವು. ಎಸ್.ಡಿ.ಆರ್.ಎಫ್ ತಂಡವು ನ್ಯಾಯಾಲಯದಲ್ಲಿನ ಸುಮಾರು ನ್ಯಾಯಾಧೀಶರು, ವಕೀಲರು, ಅಧಿಕಾರಿ-ಸಿಬ್ಬಂದಿಗಳು, ಸಾರ್ವಜನಿಕರನ್ನು ರಕ್ಷಿಸಿ ಅಲ್ಲಿಂದ ಕೆ.ಕೆ.ಆರ್.ಟಿ.ಸಿ. ಬಸ್ ಸಹಾಯದೊಂದಿಗೆ ಸ್ಥಳಾಂತರಿಸಿದರು. ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಾಳುಗಳಾಗಿದ್ದ ಸುಮಾರು 50 ಜನರಿಗೆ ಪ್ರಥಮ‌ ಚಿಕಿತ್ಸೆ ನೀಡಿ ಜಿಮ್ಸ್, ಇ.ಎಸ್.ಐ.ಸಿ ಆಸ್ಪತ್ರೆಗೆ ರವಾನಿಸುವ, ಎನ್.ಸಿ.ಸಿ. ಪಡೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರು ನೆರವಿಗೆ‌ ಬಂದ ದೃಶ್ಯ ಇಲ್ಲಿ ಸೃಷ್ಟಿ ಮಾಡಲಾಯಿತು.

ಅಣುಕು ಪ್ರದರ್ಶನದ ರಕ್ಷಣಾ ಕಾರ್ಯಚರಣೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಮಾತನಾಡಿ, ತುರ್ತು ಮತ್ತು ವಿಪತ್ತಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಭಯಭೀತರಾಗದೆ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಬೇಕು. ವಿಶೇಷವಾಗಿ ಎಲ್ಲರು ಒಟ್ಟಾಗಿ ಇದ್ದು ಕ್ಲಿಷ್ಠಕರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವಂತೆ ಕರೆ ನೀಡಿದರು.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಮಾತನಾಡಿ, ಪ್ರವಾಹ,‌ ದುರ್ಘಟನೆ, ಭೂಕಂಪದದಂತಹ ವಿಪತ್ತು ತುರ್ತು ಪರಿಸ್ಥಿತಿಯನ್ನು ನಿರ್ಭಯವಾಗಿ ಎದುರಿಸಿದಲ್ಲಿ ಸಂಭವನೀಯ ಹಾನಿ ತಕ್ಕಮಟ್ಟಿಗೆ ತಪ್ಪಿಸಬಹುದಾಗಿದೆ‌ ಎಂ‌ದ‌ ಅವರು, ಇಂದಿನ ಅಣಕು ಪ್ರದರ್ಶನದಲ್ಲಿ ಎಲ್ಲಾ 13 ಇಲಾಖೆಗಳು ನಾಗರಿಕರ ರಕ್ಷಣೆಗೆ ಸಕ್ರಿಯವಾಗಿ ಭಾಗವಹಿಸಿದವು ಎಂದರು.

ಸೈನಿಕರು-ರೈತರ ಸೇವೆ ಮರೆಯುವಂತಿಲ್ಲ :

ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾಯಮೂರ್ತಿ ಇಂದ್ರೇಶ್ ಅವರು ಮಾತನಾಡಿ, ಇವತ್ತಿನ ಅಣಕು ಪ್ರದರ್ಶನವು ಪ್ರತಿಯೊಬ್ಬ ನಾಗರಿಕರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಮತ್ತು ತುರ್ತು ಪರಿಸ್ಥಿಯಲ್ಲಿ ಯಾವ ರೀತಿಯಲ್ಲಿ ಆತ್ಮ ರಕ್ಷಣೆ ಮಾಡಿಕೊಳ್ಳಬೇಕೆಂದು ಕಲಿಸಿದೆ. ಗಡಿಯಲ್ಲಿ ಕಣ್ಣಿಗೆ ಎಣ್ಣೆ ಹಾಕಿಕೊಂಡು ದೇಶ ಕಾಯುವ ಸೈನಿಕ, ಅಂತರಿಕ ಭದ್ರತೆ ಒದಗಿಸುವ ಜವಾಬ್ದಾರಿ ಹೊತ್ತ ಪೊಲೀಸರು, ಅನ್ನ ನೀಡಿ‌ ಹಸಿವನ್ನು ನೀಗಿಸುವ ರೈತ ಈ ದೇಶದ‌ 3 ಸ್ತಂಭಗಳ ಇದ್ದಂತೆ, ಯಾರು ಇವರ ಸೇವೆ ಮರೆಯುವಂತಿಲ್ಲ ಎಂದರು.

ಈ ಸಂದರ್ಭದಲ್ಲಿ ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಕಲಬುರಗಿ‌ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ್ ಪಾಟೀಲ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಡಿ.ಎಚ್.ಓ ಡಾ. ಶರಣಬಸಪ್ಪ ಕ್ಯಾತನಾಳ, ಆಹಾರ ಇಲಾಖೆ ಉಪನಿರ್ದೇಶಕ ಭೀಮರಾಯ, ಸಹಾಯಕ ಆಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ, ಹೈಕೋರ್ಟ್ ಬಾರ್ ಅಸೋಸಿಯನ್ ಅಧ್ಯಕ್ಷ ಎಸ್.ಬಿ. ಪಸಾರ, ಉಪಾಧ್ಯಕ್ಷ ಅನಂತ ಜಾಹಗೀರಧಾರ, ಹೆಚ್ಚುವರಿ ಕಾರ್ಯಾದರ್ಶಿ ಗೌರೀಶ ಕಾಶಂಪೂರ, ಪೋಲಿಸ್ ಇಲಾಖೆ ವಿಪತ್ತು ನಿರ್ವಹಣಾ ತಂಡದ ಅಧ್ಯಕ್ಷ ಡಾ.ಶಂಕರಪ್ಪ ದತ್ತಿ ಸೇರಿದಂತೆ, ಜೆಸ್ಕಾಂ, ಕೆ.ಕೆ.ಅರ್.ಟಿ.ಸಿ. ಅಧಿಕಾರಿಗಳು, ಇನ್ನಿತರ ರಕ್ಷಣಾ ತಂಡಗಳು ಭಾಗವಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X